ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಪ್ರಯೋಗಾಲಯದಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೈಸೂರಿನ ಯುವ ವಿಜ್ಞಾನಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬುಧವಾರ ನಡೆದಿದೆ. ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿ, ಏರೋಸ್ಪೇಸ್ ವಿಭಾಗದ ಮನೋಜ್ಕುಮಾರ್ ದುರಂತ ಸಾವಿಗೀಡಾಗಿದ್ದು, ಇವರು ಮೈಸೂರು ಕಲ್ಯಾಣಗಿರಿ ಸಮೀಪದ ರಾಜ್ಕುಮಾರ್ ರಸ್ತೆಯ ಜೆಎಸ್ಎಸ್ ಬಡಾವಣೆ ನಿವಾಸಿಯಾಗಿದ್ದಾರೆ. 28 ವರ್ಷದ ಮನೋಜ್ಕುಮಾರ್, ಮೈಸೂರಿನ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜು ನಿವೃತ್ತ ಪ್ರಿನ್ಸಿಪಾಲ್ ಪ್ರೊ. ಕೆ. ಪ್ರಕಾಶ್ ಅವರ ಪುತ್ರ. ಒಂದರಿಂದ 10ನೇ ತರಗತಿಯವರೆಗೆ ಮೈಸೂರಿನ ಸಿದ್ಧಾರ್ಥನಗರದ ಜೆಎಸ್ಎಸ್ ಪಬ್ಲಿಕ್…