ಬೆಂಗಳೂರು: ನಿವೃತ್ತಿ ಹೊಂದಿದ ಹಾಗೂ ಯುದ್ಧ ದಲ್ಲಿ ಹುತಾತ್ಮ ಯೋಧರ ಕುಟುಂಬಗಳಿಗೆ 3 ತಿಂಗಳಲ್ಲಿ ಪೂರ್ಣ ಪರಿಹಾರ ಹಾಗೂ ಇತರೆ ಸೌಲಭ್ಯ ಒದಗಿಸಲು ನೂತನ ಕಾನೂನು ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯ ದಿವಸ್ ಆಚರಣೆಯಲ್ಲಿ ಹುತಾತ್ಮ ಯೋಧ ರಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಗಡಿ ಕಾಯುವ ಯೋಧರು ದೇಶ ಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸುತ್ತಾರೆ. ಇವರಿಗೆ ಪರಿಹಾರ ನೀಡುವ ಕಾರ್ಯ ತಡವಾಗಬಾರದು. ಅದಕ್ಕಾಗಿಯೇ…