ಮೈಸೂರು: ‘ಆಳಾಗಿ ದುಡಿ ಅರಸನಾಗಿ ಉಣ್ಣು’ ಎಂಬ ಗಾದೆ ಮಾತಿನಂತೆ ನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದು ಪೌರಕಾರ್ಮಿಕರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡುತ್ತೇವೆಂದು, ಸಾಂಸ್ಕೃತಿಕ ನಗರಿ ಮೈಸೂರು ದೇಶದಲ್ಲೇ ಸ್ವಚ್ಛ ನಗರಿ ಎಂಬ ಪ್ರಶಸ್ತಿ ಪಡೆಯಲು ಹಗಲಿರುಳು ದುಡಿದಿದ್ದ ಪೌರಕಾರ್ಮಿಕರು ಈ ಬಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 5 ವಾರ್ಡ್ಗಳಿಂದ ಸ್ಪರ್ಧೆ ಮಾಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ-32 (ಗೌಸಿಯಾ ನಗರ ಎ ಬ್ಲಾಕ್)ನಿಂದ ಬಿಜೆಪಿ ಅಭ್ಯರ್ಥಿಯಾಗಿ ಆರ್.ಪೂಜಾ, ವಾರ್ಡ್ ನಂ-39 (ಗಾಯತ್ರಿಪುರಂ 1ನೇ ಹಂತ)…
ಮೈಸೂರು ನಗರಪಾಲಿಕೆ ಚುನಾವಣೆ; ಕನಿಷ್ಟ 33 ಸ್ಥಾನ ಗೆಲ್ಲಲೇಬೇಕು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ
August 25, 2018ಮೈಸೂರು: ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ 65 ವಾರ್ಡ್ಗಳ ಪೈಕಿ ಕನಿಷ್ಟ 33 ಸ್ಥಾನಗಳನ್ನು ಗೆಲ್ಲಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಗುರಿ ನಿಗದಿ ಮಾಡಿದರು. ಮೈಸೂರಿನ ರೈಲು ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಮೈಸೂರು ನಗರಪಾಲಿಕೆ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಪಕ್ಷದ ಅಭ್ಯರ್ಥಿಗಳ ಸಭೆಯಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಿಗದಿತ ಗುರಿಯನ್ನು ಸಾಧಿಸಲು ಎಲ್ಲರೂ ಕಂಕಣಬದ್ಧರಾಗಿ ಕೆಲಸ ನಿರ್ವಹಿಸಬೇಕು. ಟಿಕೆಟ್ ಸಿಗದೆ ಅನ್ಯಾಯಕ್ಕೆ…
ಮೈಸೂರು ಮಹಾನಗರ ಪಾಲಿಕೆ ಚುನಾವಣೆ; ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
August 25, 2018ಘನ ತ್ಯಾಜ್ಯ ಸಮರ್ಪಕ ನಿರ್ವಹಣೆ, 24ಘಿ7 ಶುದ್ಧ ಕುಡಿಯುವ ನೀರು ಪೂರೈಕೆ ಭರವಸೆ * ಗ್ರಾಮಾಂತರ ಬಸ್ ನಿಲ್ದಾಣಕ್ಕೆ ನಗರ ಬಸ್ ನಿಲ್ದಾಣ ಸ್ಥಳಾಂತರ * ಬನ್ನಿಮಂಟಪ ಬಸ್ ಡಿಪೋಗೆ ಗ್ರಾಮಾಂತರ ಬಸ್ ನಿಲ್ದಾಣ ಸ್ಥಳಾಂತರ * ದಸರಾ ರೀತಿ ಶಾಶ್ವತ ದೀಪಾಲಂಕಾರಕ್ಕೆ ಯೋಜನೆ ಮೈಸೂರು: ಮೈಸೂರು ಮಹಾ ನಗರಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರಲೇಬೇಕು ಎಂಬ ಗುರಿಯೊಂದಿಗೆ ಅಖಾಡಕ್ಕಿಳಿದಿರುವ ಕಾಂಗ್ರೆಸ್, ಈ ಬಾರಿ ಚುನಾವಣಾ ಪ್ರಣಾಳಿಕೆಯಲ್ಲಿ ಮೈಸೂರಿನ ಅಭಿವೃದ್ಧಿ ಕುರಿತಂತೆ ಅನೇಕ ಭರವಸೆಗಳನ್ನು ನೀಡಿದೆ. ನಗರ…
ಪಕ್ಷೇತರ ಅಭ್ಯರ್ಥಿ ಪ್ರಣಾಳಿಕೆ ಬಿಡುಗಡೆ ಈಡೇರಿಸಲು ವಿಫಲನಾದರೆ ಅಂದೇ ರಾಜೀನಾಮೆ: ಯೋಗಾನಂದ
August 25, 2018ಮೈಸೂರು: ಮೈಸೂರು ಮಹಾನಗರಪಾಲಿಕೆ ಚುನಾವಣೆ 58ನೇ ವಾರ್ಡ್ನ ಪಕ್ಷೇತರ ಅಭ್ಯರ್ಥಿ ಯೋಗಾನಂದ ತಾವು ಗೆಲುವು ಸಾಧಿಸಿದರೆ ವಾರ್ಡ್ಗೆ ಏನೇನು ಮಾಡಲು ಸಾಧ್ಯ ಎಂಬ ಬಗ್ಗೆ ಪ್ರಣಾಳಿಕೆ ಮೂಲಕ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಣಾಳಿಕೆಯ ವಿವರಗಳನ್ನು ನೀಡಿದ ಅವರು, ವಾರ್ಡ್ನ ಅಭಿವೃದ್ಧಿಗೆ ಖರ್ಚಾಗುವ ಮೊತ್ತದ ವಿವರಗಳನ್ನು ನೇರವಾಗಿ ವಾರ್ಡ್ನ ಸಾರ್ವಜನಿಕರೆಲ್ಲರಿಗೂ ತಿಳಿಯುವ ಹಾಗೆ ಮಾಡುವುದು. ತಮ್ಮ ಕಚೇರಿಯಲ್ಲಿ ಸಾರ್ವಜನಿಕರು ನೀಡುವ ದೂರುಗಳಿಗೆ 10-15 ದಿನಗಳಲ್ಲಿ ಪರಿಹಾರ ನೀಡುವುದು. ಜನರಿಂದಲೇ ವಾರ್ಡ್ ಅಭಿವೃದ್ಧಿ ಕುರಿತು…
ಮೈಸೂರು ಮಹಾ ನಗರಪಾಲಿಕೆ ಚುನಾವಣೆ: ಅಂತಿಮ ಕಣದಲ್ಲಿ 393 ಮಂದಿ
August 24, 201866 ಮಂದಿ ಕಣದಿಂದ ಹಿಂದಕ್ಕೆ 65 ವಾರ್ಡ್ಗೆ ಒಟ್ಟು 484 ಮಂದಿ ನಾಮಪತ್ರ ಸಲ್ಲಿಕೆ, 25 ಮಂದಿ ನಾಮಪತ್ರ ತಿರಸ್ಕೃತವಾಗಿದ್ದವು ಅತೀ ಹೆಚ್ಚು ಮಂದಿ ವಾರ್ಡ್ ನಂ.7ರ ಮೇಟಗಳ್ಳಿಯಲ್ಲಿದ್ದರೆ, ಅತೀ ಕಡಿಮೆ ವಾರ್ಡ್ ನಂ.22ರ ಪಡುವಾರಹಳ್ಳಿಯಲ್ಲಿ ಬರೀ ಇಬ್ಬರೆ ಆರು ದಿನ ಬಹಿರಂಗ ಪ್ರಚಾರಕ್ಕೆ ಅವಕಾಶ ಆ.29ರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಆ.31ರಂದು ಮತದಾನ ಸೆ.3ರಂದು ಮತ ಎಣಿಕೆ ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಒಟ್ಟು 65 ವಾರ್ಡ್ಗಳಿಗೆ 393 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಒಟ್ಟು…
13 ವಾರ್ಡ್ಗಳಲ್ಲಿ ಬಿಎಸ್ಪಿ ಅಭ್ಯರ್ಥಿಗಳ ಸ್ಪರ್ಧೆ
August 24, 2018ಮೈಸೂರು: ವಿಧಾನಸಭೆಯಲ್ಲಿ ಕೇವಲ ಒಂದು ಸ್ಥಾನ ಗಳಿಸಿ, ಸಚಿವ ಸ್ಥಾನವನ್ನು ಗಿಟ್ಟಿಸಿಕೊಳ್ಳುವಲ್ಲಿ ಸಫಲವಾಗಿರುವ ಬಹುಜನ ಸಮಾಜಪಕ್ಷ (ಬಿಎಸ್ಪಿ), ಇದೀಗ ಮೈಸೂರು ಮಹಾನಗರಪಾಲಿಕೆ ಚುನಾವಣೆಯತ್ತ ದೃಷ್ಟಿ ಹರಿಸಿದ್ದು, ಪ್ರಮುಖ ಪಕ್ಷಗಳಿಗೆ ತೀವ್ರ ಸ್ಪರ್ಧೆ ಒಡ್ಡಲು ಸಿದ್ಧವಾಗಿದೆ. ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಒಟ್ಟು 13 ವಾರ್ಡ್ಗಳಲ್ಲಿ ಬಿಎಸ್ಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯಲ್ಲಿ 8, ಚಾಮರಾಜ ಕ್ಷೇತ್ರ ವ್ಯಾಪ್ತಿಯಲ್ಲಿ 2 ಹಾಗೂ ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಯಲ್ಲಿ 3 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಣದಲ್ಲಿರುವ ವಾರ್ಡ್ವಾರು ಅಭ್ಯರ್ಥಿಗಳ ವಿವರ ಕೆಳಕಂಡಂತಿದೆ….
ವಾರ್ಡ್ ನಂ.55ರಲ್ಲಿ ಬಿಜೆಪಿಗೆ ಬಂಡಾಯ ಬಿಸಿ
August 24, 2018ಮೈಸೂರು: ಮೈಸೂರು ನಗರ ಪಾಲಿಕೆ ಚುನಾವಣೆ ಕಾವು ರಂಗೇರುತ್ತಿದ್ದು, ಮೈಸೂರಿನ ಕೆಆರ್ ಕ್ಷೇತ್ರ ವ್ಯಾಪ್ತಿಯ 55ನೇ ವಾರ್ಡಿನಲ್ಲಿ ಬಿಜೆಪಿಗೆ ಬಂಡಾಯದ ಬೀಸಿ ತಲೆ ನೋವಾಗಿ ಪರಿಣಮಿಸಿದೆ. 55ನೇ ವಾರ್ಡಿನ (ಚಾಮುಂಡಿಪುರಂ) ಬಿಜೆಪಿ ಆಕಾಂಕ್ಷಿಯಾಗಿದ್ದ ಮ.ವಿ.ರಾಮ್ಪ್ರಸಾದ್ ಪಕ್ಷದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಕಡೇ ದಿನವಾದ ಇಂದು ಕಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಲ್ಲಿದ್ದ ಪಕ್ಷದ ವರಿಷ್ಠರಿಗೆ ನಿರಾಸೆ ಮೂಡಿಸಿದ್ದಾರೆ. ವಾರ್ಡಿನ ಜನತೆ ಹಾಗೂ ಹಿತೈಷಿಗಳ ಒತ್ತಡಕ್ಕೆ ಮಣಿದು ಸ್ವತಂತ್ರವಾಗಿ…
ಪಾಲಿಕೆ ಒಂದನೇ ವಾರ್ಡ್ನ ಸ್ವತಂತ್ರ ಅಭ್ಯರ್ಥಿ ತನುಜಾ, 42ನೇ ವಾರ್ಡ್ನ ಸ್ವರಾಜ್ ಇಂಡಿಯಾದ ಅಭಿರುಚಿ ಗಣೇಶ್ಗೆ ಮೈಗ್ರಾಪ ಬೆಂಬಲ
August 24, 2018ಮೈಸೂರು: ಮೈಸೂರು ನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ 1ನೇ ವಾರ್ಡ್ನ ಸ್ವತಂತ್ರ ಅಭ್ಯರ್ಥಿ ಟಿ.ಸಿ.ತನುಜಾ ಹಾಗೂ 42ನೇ ವಾರ್ಡ್ನ ಸ್ವರಾಜ್ ಇಂಡಿಯಾ ಅಭ್ಯರ್ಥಿ ಅಭಿರುಚಿ ಗಣೇಶ್ ಅವರಿಗೆ ಮೈಸೂರು ಗ್ರಾಹಕರ ಪರಿಷತ್ (ಮೈಗ್ರಾಪ) ಬೆಂಬಲ ಸೂಚಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮೈಗ್ರಾಪ ಅಧ್ಯಕ್ಷ ಎಸ್.ಡಿ.ಸಾಹುಕಾರ್, ಮೈಸೂರು ನಗರದ ಆಡಳಿತ ಯಂತ್ರವಾದ ಪಾಲಿಕೆಯಲ್ಲಿ ಒಳ್ಳೆಯ ಆಡಳಿತ ಕಾಣಬೇಕಾದರೆ ಪ್ರಾಮಾಣಿಕ ಅಭ್ಯರ್ಥಿಗಳು ಆಯ್ಕೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಮೈಗ್ರಾಪ ರೂಪಿಸಿದ್ದ ನಾಗರಿಕ ಪ್ರಣಾಳಿಕೆಗೆ…
19 ವಾರ್ಡ್ಗಳಲ್ಲಿ ಎಸ್ಡಿಪಿಐ ಸ್ಪರ್ಧೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ಗೆ ಸವಾಲು
August 24, 2018ಮೈಸೂರು: ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗೆ ತುರುಸಿನ ಸ್ಪರ್ಧೆ ಒಡ್ಡಿದ್ದ ಎಸ್ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಆ.31ರಂದು ನಡೆಯಲಿರುವ ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಪ್ರಮುಖ ಪಕ್ಷಗಳಿಗೆ ಸವಾಲು ಒಡ್ಡಿದೆ. ಪಾಲಿಕೆಯ 65 ವಾರ್ಡ್ಗಳ ಪೈಕಿ ಪ್ರಮುಖ 19 ವಾರ್ಡ್ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನರಸಿಂಹರಾಜ ಕ್ಷೇತ್ರದಲ್ಲಿ 16 ಮತ್ತು ಚಾಮರಾಜ ಕ್ಷೇತ್ರದಲ್ಲಿ 3 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಕಣದಲ್ಲಿರುವ 19 ವಾರ್ಡ್ಗಳಲ್ಲಿ ಬಹುತೇಕ ಕಡೆಗಳಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇನ್ನೂ…
ಮೈಸೂರು ಪಾಲಿಕೆ ಚುನಾವಣೆ 44 ನಾಮಪತ್ರ ತಿರಸ್ಕøತ
August 22, 2018ಮೈಸೂರು: ಮೈಸೂರು ನಗರ ಪಾಲಿಕೆ ಚುನಾ ವಣೆಗೆ ನಾಮಪತ್ರ ಸಲ್ಲಿಸಿದ್ದ 484 ಅಭ್ಯರ್ಥಿಗಳ ಪೈಕಿ 25 ಅಭ್ಯರ್ಥಿಗಳ 44 ನಾಮಪತ್ರ ತಿರಸ್ಕøತಗೊಂಡಿದ್ದು, 459 ಉಮೇದುವಾರಿಕೆ ಸಿಂಧುವಾಗಿವೆ. ಆ.13ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂದಿನಿಂದ ಕಡೇ ದಿನವಾದ ಸೋಮವಾರದವರೆಗೆ 65 ವಾರ್ಡ್ನಿಂದ 484 ಅಭ್ಯರ್ಥಿಗಳಿಂದ 541 ನಾಮಪತ್ರ ಸಲ್ಲಿಕೆಯಾಗಿದ್ದು, ಇದರಲ್ಲಿ ಕಡೇ ದಿನವಾದ ಸೋಮ ವಾರ 495 ನಾಮಪತ್ರಗಳು ಸಲ್ಲಿಕೆ ಯಾಗಿದ್ದವು. ಚುನಾವಣಾಧಿಕಾರಿಗಳು ಮಂಗಳವಾರ ನಾಮಪತ್ರಗಳ ಪರಿ ಶೀಲನೆ ನಡೆಸಿದ ವೇಳೆ ವಿವಿಧ ಕಾರಣ ಗಳಿಂದ 25…