ಮೈಸೂರು: ಮೈಸೂರು ಮತ್ತು ಚಾಮರಾಜ ನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ (ಎಂಸಿಡಿಸಿಸಿ) ಅಧ್ಯಕ್ಷರಾಗಿ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್ಗೌಡ ಅವಿರೋಧವಾಗಿ ಆಯ್ಕೆಗೊಂಡರು. ಹುಣಸೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತ ಕ್ಷೇತ್ರದಿಂದ ನ.12ರಂದು ನಡೆದ ನಿರ್ದೇಶಕರ ಚುನಾವಣೆಯಲ್ಲೂ ಅವಿರೋಧವಾಗಿ ಆಯ್ಕೆಯಾಗಿದ್ದ ಜಿ.ಡಿ.ಹರೀಶ್ಗೌಡ, ಇದೀಗ ಅಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂಜನಗೂಡು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಗೊಂಡಿದ್ದ ಬಿ.ಎನ್.ಸದಾನಂದ ಇದೇ ವೇಳೆ…
ಮೈಸೂರು
ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ
November 10, 2018ಮೈಸೂರು: ಮೈಸೂರು ಮತ್ತು ಚಾಮ ರಾಜನಗರ ಜಿಲ್ಲಾ ಸಹಕಾರ (ಎಂಸಿಡಿಸಿಸಿ) ಬ್ಯಾಂಕ್ ಚುನಾವಣೆಗೆ ಎದುರಾಗಿದ್ದ ವಿಘ್ನವನ್ನು ಹೈಕೋರ್ಟ್ ನಿವಾರಣೆ ಮಾಡಿದ್ದು, ಈಗಾಗಲೇ ಹೊರಡಿಸಿರುವ ಅಧಿಸೂಚನೆಯಂತೆ ನ.12ಕ್ಕೆ ಚುನಾವಣೆ ನಡೆಯಲು ಗ್ರೀನ್ ಸಿಗ್ನಲ್ ನೀಡಿದೆ. ಚುನಾವಣೆಗೆ ಹೈಕೋರ್ಟ್ನ ತಡೆಯಾಜ್ಞೆ ಇರುವುದನ್ನು ಉಲ್ಲೇಖಿಸಿ ಸಹಕಾರ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಯನ್ನು ಸ್ಥಗಿತಗೊಳಿಸುವಂತೆ ನ.7ರಂದು ಸೂಚನೆ ನೀಡಿತ್ತು. ಆದರೆ, ಈಗ ಹೈಕೋರ್ಟ್ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿರುವ ಕಾರಣ ನಿಗದಿಯಂತೆ ನ.12ರಂದು ಮೈಸೂರಿನ ನಂಜ ರಾಜ ಬಹದ್ದೂರ್ ಛತ್ರದಲ್ಲಿ ಎಂಸಿ…