ಮೈಸೂರು: ಮೈಸೂರು ಮತ್ತು ಚಾಮ ರಾಜನಗರ ಜಿಲ್ಲಾ ಸಹಕಾರ (ಎಂಸಿಡಿಸಿಸಿ) ಬ್ಯಾಂಕ್ ಚುನಾವಣೆಗೆ ಎದುರಾಗಿದ್ದ ವಿಘ್ನವನ್ನು ಹೈಕೋರ್ಟ್ ನಿವಾರಣೆ ಮಾಡಿದ್ದು, ಈಗಾಗಲೇ ಹೊರಡಿಸಿರುವ ಅಧಿಸೂಚನೆಯಂತೆ ನ.12ಕ್ಕೆ ಚುನಾವಣೆ ನಡೆಯಲು ಗ್ರೀನ್ ಸಿಗ್ನಲ್ ನೀಡಿದೆ. ಚುನಾವಣೆಗೆ ಹೈಕೋರ್ಟ್ನ ತಡೆಯಾಜ್ಞೆ ಇರುವುದನ್ನು ಉಲ್ಲೇಖಿಸಿ ಸಹಕಾರ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಯನ್ನು ಸ್ಥಗಿತಗೊಳಿಸುವಂತೆ ನ.7ರಂದು ಸೂಚನೆ ನೀಡಿತ್ತು. ಆದರೆ, ಈಗ ಹೈಕೋರ್ಟ್ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿರುವ ಕಾರಣ ನಿಗದಿಯಂತೆ ನ.12ರಂದು ಮೈಸೂರಿನ ನಂಜ ರಾಜ ಬಹದ್ದೂರ್ ಛತ್ರದಲ್ಲಿ ಎಂಸಿ…