ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಫುಟ್ಬಾಲ್ ಮೈದಾನದಲ್ಲಿ ಶನಿವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ 2 ದಿನಗಳ ಪತ್ರಕರ್ತರ ಕ್ರೀಡಾಕೂಟಕ್ಕೆ ರಾಷ್ಟ್ರೀಯ ಕ್ರೀಡಾಪಟುಗಳಾದ ಶೂಟರ್ ರಕ್ಷಿತಶಾಸ್ತ್ರಿ, ವಾಲಿಬಾಲ್ ಆಟಗಾರ್ತಿ ಕುಮಾರಿ ಹನಿ, ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸದಾ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಕ್ರೀಡಾಕೂಟ ಆಯೋಜಿಸಿರುವುದು ಉತ್ತಮವಾಗಿದೆ. ಪತ್ರಕರ್ತರು ಆರೋಗ್ಯದ ಕಡೆಗೆ ಗಮನಹರಿಸಬೇಕು. ಬೆಳಿಗ್ಗೆ ಸಮಯದಲ್ಲಿ ವಾಯುವಿಹಾರ, ವ್ಯಾಯಾಮ ಮಾಡಬೇಕು ಎಂದು ಕಿವಿಮಾತು ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಮಾತನಾಡಿ,…