ಮಂಡ್ಯ: ಮಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಕಂಡು ಆಕ್ರೋಶಗೊಂಡ ಮಂಡ್ಯ ಜಿಲ್ಲಾ ಉಸ್ತುವಾರಿ, ಸಣ್ಣ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲಾಸ್ಪತ್ರೆ ಆವರಣದಲ್ಲಿಂದು ನಡೆಯಿತು. ಇಂದು ಬೆಳಗ್ಗೆ ವಿ.ಸಿ.ಫಾರಂ ಗೇಟ್ ಬಳಿ ಅಪಘಾತದಲ್ಲಿ ಮೃತಪಟ್ಟವರನ್ನು ನೋಡಲು ಮಿಮ್ಸ್ನ ಶವಾಗಾರಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆಯಿತು. ಏನಿದು ಘಟನೆ: ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅವರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಹೆರಿಗೆ ವಾರ್ಡ್ ಬಳಿ ಬಾಣಂತಿಯರ ಸಂಬಂಧಿಕರಿಗೆ…