ರಾಮನಾಥಪುರ: ಇಲ್ಲಿಯ ಕೆಎಸ್ಅರ್ಟಿಸಿ ನೂತನ ಬಸ್ ನಿಲ್ದಾಣ, ಸಾರಿಗೆ ಘಟಕ ನಿರ್ಮಾಣಕ್ಕೆ 2 ಕೋಟಿ 62 ಲಕ್ಷ ರೂ ಮಂಜೂರಾಗಿದ್ದು ಕಾಮ ಗಾರಿ ಇಂದಿನಿಂದಲೇ ಪ್ರಾರಂಭವಾಗಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕ ಎ.ಟಿ.ರಾಮಸ್ವಾಮಿ ಸೂಚಿಸಿದರು. ಇಲ್ಲಿನ ಬಸವೇಶ್ವರ ವೃತ್ತದಲ್ಲಿರುವ ಸಾರಿಗೆ ಬಸ್ ನಿಲ್ದಾಣ 4 ಕಡೆಗೆ ಹೋಗುವ ಮುಖ್ಯ ಸರ್ಕಲ್ ಹೊಂದಿದ್ದು ಇಲ್ಲಿಂದ ಮಡಿಕೇರಿ, ಹಾಸನ, ಮೈಸೂರು, ಬೆಂಗ ಳೂರು ಮತ್ತು ಪಿರಿಯಾಪಟ್ಟಣ ಮಾರ್ಗ ಕೇರಳಕ್ಕೆ ಹೋಗುವ ಬಸ್ ನಿಲ್ದಾಣ ಚಿಕ್ಕದಾಗಿದ್ದು, ಸುಸಜ್ಜಿತವಾದ ಬಸ್ ನಿಲ್ದಾಣವನ್ನು…