ನಂಜನಗೂಡು: ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು. ಅವರು ನಗರದ ಕಬಿನಿ ಹೋಟೆಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 68ನೇ ಹುಟ್ಟುಹಬ್ಬದ ಅಂಗವಾಗಿ ಪೌರ ಕಾರ್ಮಿಕರಿಗೆ ಭೋಜನದ ವ್ಯವಸ್ಥೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ವಿನೂತನವಾಗಿ ಆಚರಿಸಿದರು. ಇಂದಿರಾ ಗಾಂಧಿ ಗರೀಭಿ ಹಠಾವೋ ಹೆಸರಿನಲ್ಲಿ ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿರವರು ಸ್ವಚ್ಛತೆಯ ಮಂತ್ರವನ್ನು ಜಪಿಸುತ್ತಾ ಅಧಿಕಾರಕ್ಕೆ ಬಂದವರು. ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದ್ದಲ್ಲದೆ ದೇಶದ ಆರ್ಥಿಕ ಸುಭದ್ರತೆಯೊಂದಿಗೆ ವಿಶ್ವದಲ್ಲೇ ಮುಂಚೂಣಿಗೆ ತರಲು…
ಸಭೆಯಲ್ಲಿ ಶಾಸಕರಿಂದ ಅಧಿಕಾರಿಗೆ ತರಾಟೆ
July 28, 2018ನಂಜನಗೂಡು: ನಗರದ ಗೋದಾಮಿನಿಂದ ನಾಪತ್ತೆಯಾಗಿರುವ ಸುಮಾರು 40 ಲಕ್ಷ ರೂ. ಮೌಲ್ಯದ ಪಡಿತರ ವಸ್ತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ಒದಗಿಸದ ಆಹಾರ ಇಲಾಖೆ ಅಧಿಕಾರಿಯನ್ನು ಶಾಸಕ ಬಿ.ಹರ್ಷ ವರ್ಧನ್ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ನಂಜನಗೂಡು ಮತ್ತು ವರುಣಾ ವಿಧಾನಸಭಾ ಕ್ಷೇತ್ರಗಳ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ 1165 ಕ್ವಿಂಟಾಲ್ ಅಕ್ಕಿ, 198 ಕ್ವಿಂಟಾಲ್ ಗೋಧಿ, 38…
ಜನತೆ, ಕಾರ್ಯಕರ್ತರಿಗೆ ಚಿರಋಣಿ: ಶಾಸಕ ಹರ್ಷವರ್ಧನ್
July 27, 2018ಮಲ್ಕುಂಡಿ: ಬಿಜೆಪಿ ಗೆಲುವಿಗೆ ಸಹಕರಿಸಿದ ಪಕ್ಷದ ಕಾರ್ಯ ಕರ್ತರು ಹಾಗೂ ಕ್ಷೇತ್ರದ ಜನತೆಗೆ ಸದ ಚಿರಋಣಿಯಾಗಿದ್ದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕ ಹರ್ಷವರ್ಧನ್ ತಿಳಿಸಿದರು. ನಂಜನಗೂಡು ತಾಲೂಕಿನ ಹರತಲೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮತದಾರರಿಗೆ ಕೃತಜ್ಞತೆ ಹಾಗೂ ಗ್ರಾಮದ ನಾಯಕರ ಬೀದಿಯಲ್ಲಿ 20 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಮಾಜಿ ಸಚಿವ ಶ್ರೀನಿವಾಸ್ಪ್ರಸಾದ್ ಅವರ ಹಾದಿಯಲ್ಲಿ ನಡೆದು ಅದೇ ರೀತಿಯಾಗಿ ಜನರ ಸಮಸ್ಯೆಗಳನ್ನು ಬಗೆಹರಿಸುತ್ತೇನೆ….