ಮೈಸೂರು: ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಇಂದು ಮಂಚೇಗೌಡನಕೊಪ್ಪಲಿನಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಬೆಳಿಗ್ಗೆ 7.30 ಗಂಟೆಗೆ ಮುಡಾ, ಪಾಲಿಕೆ, ವಾಣಿವಿಲಾಸ ವಾಟರ್ ವಕ್ರ್ಸ್, ಆರೋಗ್ಯಾಧಿಕಾರಿಗಳೊಂದಿಗೆ ಮಂಚೇಗೌಡನಕೊಪ್ಪಲು ಮತ್ತು ಸುತ್ತಲಿನ ಬಡಾವಣೆಗಳಲ್ಲಿ ನಾಗರಿಕ ಸೌಲಭ್ಯಗಳನ್ನು ಪರಿಶೀಲಿಸಿದರು. ಎಂ.ಜಿ.ಕೊಪ್ಪಲಿನ ದೊಡ್ಡ ಮೋರಿಯಲ್ಲಿ ನೀರು ಹರಿದು ಹೋಗಲು ಅಡ್ಡಿಯಾಗಿ ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯರು ದೂರು ನೀಡಿದರು. ಕುಡಿಯುವ ನೀರು ಸರಬರಾಜು ಯೋಜನೆಗಾಗಿ ಹೊಸದಾಗಿ ಪೈಪ್ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದು ಮುಚ್ಚದೇ ಬಿಟ್ಟಿರುವುದರಿಂದ ವಾಹನ ಸಂಚಾರಕ್ಕೆ…