ಗುಂಡ್ಲುಪೇಟೆ: ಸರ್ಕಾರದ ಸವಲತ್ತುಗಳನ್ನು ಸಮರ್ಪಕ ವಾಗಿ ಬಳಸಿಕೊಂಡು ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಮಟ್ಟವನ್ನು ಹೆಚ್ಚಿಸಿಕೊಳ್ಳಿ ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಹೇಳಿದರು. ತಾಲೂಕಿನ ಬೇಗೂರು ಹೋಬಳಿಯ ಯಡವನಹಳ್ಳಿ ಹಾಗೂ ಕೋಟೆಕೆರೆ ಗ್ರಾಮಗಳಲ್ಲಿ ತಲಾ 9.17 ಲಕ್ಷ ರೂ. ವೆಚ್ಚ ದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮಕ್ಕಳ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿ ಗೊಳಿಸುತ್ತಿದೆ. ಬಾಣಂತಿಯರು ಹಾಗೂ ಮಕ್ಕಳಲ್ಲಿ ಉಂಟಾಗುವ ತೊಂದರೆಗಳನ್ನು ತಪ್ಪಿಸಲು…
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
July 8, 2018ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಬಗ್ಗೆ ವ್ಯಾಪಕ ಚರ್ಚೆ ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ತಾಕೀತು ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡ ಸಂಸದ ಧ್ರುವನಾರಾಯಣ ಚಾಮರಾಜನಗರ: ಚಾಮರಾಜನಗರದಿಂದ ಸಂತೇಮರಹಳ್ಳಿ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಈ ಮಾರ್ಗದಲ್ಲಿ ಸೃಷ್ಟಿಯಾ ಗಿದ್ದ ಹಳ್ಳಕ್ಕೆ ಬಿದ್ದು ಇಬ್ಬರು ಪ್ರಾಣ ಕಳೆದು ಕೊಂಡಿದ್ದಾರೆ. ಇದಕ್ಕೆ ಹೊಣೆ ಯಾರು? ಮನುಷ್ಯನ ಪ್ರಾಣಕ್ಕೆ ಬೆಲೆ ಇಲ್ಲವೇ? ಎಂದು ಸಂಸದ ಆರ್.ಧ್ರುವನಾರಾಯಣ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು….
ಗುಂಡ್ಲುಪೇಟೆ ಸಮಗ್ರ ಅಭಿವೃದ್ಧಿಗೆ ಯೋಜನೆ
July 2, 2018ಗುಂಡ್ಲುಪೇಟೆ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜ ನೆಗಳನ್ನು ರೂಪಿಸಲಾಗುತ್ತಿದ್ದು, ಸ್ಪಲ್ಪ ಸಮಯ ಕೊಟ್ಟು ನೋಡಿ ಪಟ್ಟಣವನ್ನು ಮಾದರಿ ಯನ್ನಾಗಿಸುತ್ತೇನೆ ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ಪಟ್ಟಣದ ದ.ರಾ.ಬೇಂದ್ರೆ ನಗರದಲ್ಲಿ ನಿವಾಸಿಗಳಿಂದ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತ ನಾಡಿ, ನಾನು ಸಹ ದ.ರಾ.ಬೇಂದ್ರೆ ಬಡಾ ವಣೆಯ ನಿವಾಸಿಯಾಗಿ ಬಡಾವಣೆಯ ಮೂಲ ಸೌಕರ್ಯದ ಕೊರತೆಯನ್ನು ಅರಿತಿದ್ದೇನೆ. ಆದ್ದರಿಂದ ಮೊದಲ ಹಂತವಾಗಿ ಬಡಾವಣೆಯ ಪ್ರಮುಖ ಎರಡು ರಸ್ತೆ ಗಳನ್ನು ಸುಮಾರು 40 ಲಕ್ಷ ರೂಪಾಯಿ ಗಳ ಅಂದಾಜು…
ಜನರ ಆರೋಗ್ಯ ಸಮಸ್ಯೆಗೆ ಸ್ಪಂದಿಸಲು ಶಾಸಕರ ತಾಕೀತು
June 28, 2018ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಗ್ರಾಮಾಂತರ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಕಡ್ಡಾಯ ವಾಗಿ ದೊರಕುವಂತಾಗಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಾಲೂಕು ಆರೋಗ್ಯಾಧಿಕಾರಿಗಳಿಗೆ ತಾಕೀತು ಮಾಡಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋ ಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಇಲಾಖೆಯ ಕುಂದುಕೊರತೆಗಳ ಬಗ್ಗೆ ವಿವರ ಪಡೆದು ಅವರು ಮಾತನಾಡಿದರು. ತಾಲೂಕಿನ ಎಲ್ಲಾ ಆಸ್ಪತ್ರೆಗಳಲ್ಲಿಯೂ ಏನು ಸಮಸ್ಯೆ ಗಳಿವೆ ಎಂಬುದು ನನಗೆ ಗೊತ್ತಿದೆ. ಯಾವುದೇ ವೈದ್ಯರೂ ಸಕಾಲಕ್ಕೆ ಬಾರದೆ ರೋಗಿಗಳು…
ತೆರಕಣಾಂಬಿ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ
June 26, 2018ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದ ಪ್ರಾಥ ಮಿಕ ಆರೋಗ್ಯ ಕೇಂದ್ರಕ್ಕೆ ಸೋಮವಾರ ಶಾಸಕ ಸಿ.ಎಸ್.ನಿರಂಜನಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರದಲ್ಲಿ ಕೇವಲ ಒಬ್ಬರೇ ವೈದ್ಯರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಹಿಳಾ ವೈದ್ಯರು, ತಾಂತ್ರಿಕ ಸಿಬ್ಬಂದಿ ಹಾಗೂ ಶುಶ್ರೂಷಕಿಯರ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ. ಇದ ರಿಂದ ರೋಗಿಗಳು ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಯ ಮೋರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಹೋಬಳಿಯ ಸುತ್ತಲು ಕಾಡಂಚಿನ ಗ್ರಾಮಗಳಿದ್ದು, ವನ್ಯಜೀವಿ ದಾಳಿ ಅಥವಾ ಅಪಘಾತಗಳಿಂದ ಗಾಯಗೊಂಡವರಿಗೆ ಸಕಾಲದಲ್ಲಿ ಚಿಕಿತ್ಸೆ ದೊರಕುತ್ತಿಲ್ಲ. ಹಾಗಾಗಿ,…
ಯೋಗದಿಂದ ರೋಗ ಮುಕ್ತ: ಶಾಸಕ ನಿರಂಜನಕುಮಾರ್
June 21, 2018ಗುಂಡ್ಲುಪೇಟೆ: ಯೋಗಾಭ್ಯಾಸ ಮತ್ತು ಧ್ಯಾನ ಮಾಡುವು ದರಿಂದ ಮಾನಸಿಕ ಸುಸ್ಥಿರತೆ ಹಾಗೂ ಉತ್ತಮ ಆರೋಗ್ಯವನ್ನು ಹೊಂದಬಹು ದಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು. ಪಟ್ಟಣದ ಮದ್ದಾನೇಶ್ವರ ಪ್ರೌಢಶಾಲೆಯ ಆವರಣದಲ್ಲಿರುವ ಮಹಾಮನೆ ಯೋಗ ಕೇಂದ್ರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ಶ್ರೀ ಮದ್ದಾ ನೇಶ್ವರ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದರು. ಇಂದಿನ ಆಹಾರ ಪದ್ಧತಿ ಹಾಗೂ ಜೀವನ ವಿಧಾನಗಳಿಂದ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ಆರೋಗ್ಯ ಸಂಬಂಧಿತ…
ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಉಳಿಸಿ: ಶಾಸಕರ ಕರೆ
June 18, 2018ಗುಂಡ್ಲುಪೇಟೆ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಮಾರಕ ವಾಗುತ್ತಿದೆ. ಆದ್ದರಿಂದ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ನಾವು ನಿಲ್ಲಿಸುವುದ ರೊಂದಿಗೆ ಪರಿಸರದ ಸಮ ತೋಲನೆಯನ್ನು ಕಾಪಾಡಲು ಮುಂದಾಗಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಪಟ್ಟಣದ ಪುರಸಭೆಯ ವತಿಯಿಂದ ಆಯೋಜಿಸಿದ್ದ ಪ್ಲಾಸ್ಟಿಕ್ ನಿಷೇಧ ಹಾಗೂ ಅವುಗಳ ಬಳಕೆಯಿಂದ ಆಗುವ ದುಷ್ಪರಿಣಾಮ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದರು. ನಮ್ಮ ದಿನ ನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ.ಇದರಿಂದ ನಾವು ಪರಿಸರಕ್ಕೆ ಹಾನಿ ಮಾಡುತ್ತಿದ್ದೇವೆ ಎಂದು ಗೊತ್ತಿದ್ದರೂ…
ಕ್ಷೇತ್ರದ ಉಳಿದ ಕೆರೆಗಳಿಗೆ ನೀರು ತುಂಬಿಸುವ ಚಿಂತನೆ ಇದೆ
June 18, 2018ಗುಂಡ್ಲುಪೇಟೆ: ಕ್ಷೇತ್ರದಲ್ಲಿನ ಉಳಿದ ಕೆರೆಗಳಿಗೆ ನೀರು ತುಂಬಿಸುವುದು, ಶುದ್ಧ ಕುಡಿ ಯುವ ನೀರು, ಉತ್ತಮ ರಸ್ತೆ ಹಾಗೂ ಚರಂಡಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದೇನೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹರವೆ ಹೋಬಳಿಯ ಕಲ್ಪುರ, ದೇಶೀಗೌಡನಪುರ, ಮಲೆಯೂರು ಹಾಗೂ ಹರವೆ ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗಳಿಗೆ ತೆರಳಿದ ಶಾಸಕ ಸಿ.ಎಸ್. ನಿರಂಜನಕುಮಾರ್ ಮತದಾರರಿಗೆ ಕೃತಜ್ಞತೆ ಅರ್ಪಿಸಿ ಮಾತನಾಡಿ, ಕುಡಿಯುವ ನೀರಿನ ಕೊರತೆ, ಅಂತರ್ಜಲ ಇಳಿಕೆ ಮುಂತಾದ ಕಾರಣಗಳಿಂದ ಬರಪೀಡಿತ ಹೋಬಳಿಯ…
ಕಳಗಸಾಪುರಕ್ಕೆ ಶಾಸಕ ನಿರಂಜನ್ ಕುಮಾರ್ ಭೇಟಿ
June 13, 2018ಗುಂಡ್ಲುಪೇಟೆ: ಕ್ಷೇತ್ರದ ಶಾಸಕ ಸಿ.ಎಸ್. ನಿರಂಜನಕುಮಾರ್ ತಾಲೂಕಿನ ಬಂಡೀಪುರ ಹುಲಿ ಯೋಜನೆಯ ಅರಣ್ಯ ಪ್ರದೇಶದೊಳಗಿರುವ ಶ್ರೀ ಕಳಗಸಾಪುರ ಮಾರಮ್ಮನವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಕಾಡಂಚಿನ ಗ್ರಾಮಗಳ ಜನರಿಂದ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಹುಲಿ ಯೋಜನೆಯ ಓಂಕಾರ್ ವಲಯದ ಅರಣ್ಯ ಪ್ರದೇಶ ದಲ್ಲಿರುವ ಶ್ರೀ ಕಳಗಸಾಪುರ ಮಾರಮ್ಮನವರ ದೇವಸ್ಥಾನದ ಸುತ್ತಲಿನ ಬರಗಿ, ದೇಶೀಪುರ, ಮಂಚಹಳ್ಳಿ, ಆಲತ್ತೂರು, ಹಸಗೂಲಿ, ಹೆಗ್ಗಡಹಳ್ಳಿ ಮುಂತಾದ ಹಲವಾರು ಗ್ರಾಮಗಳ ಜನರ ಆರಾಧ್ಯ ದೇವತೆಯಾಗಿದ್ದು, ಇಲ್ಲಿಗೆ ಪ್ರತಿ ವರ್ಷವೂ ಎಲ್ಲಾ ಗ್ರಾಮಗಳ…
ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ಪತ್ರಕರ್ತರ ಕಚೇರಿಯಲ್ಲಿ ಶಾಸಕ ನಿರಂಜನ್ಕುಮಾರ್ ಹೇಳಿಕೆ
May 27, 2018ಗುಂಡ್ಲುಪೇಟೆ: ಪಟ್ಟಣದ ಅಬ್ದುಲ್ ನಜೀರ್ ಸಾಬ್ ಜೋಡಿ ರಸ್ತೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನಿಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಪಟ್ಟಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ಪತ್ರಕರ್ತರಿಂದ ಸನ್ಮಾನ ಸ್ವೀಕ ರಿಸಿ ಅವರು ಮಾತನಾಡಿದರು. ಜೋಡಿ ರಸ್ತೆಯ ಕಾಮಗಾರಿ ಬಹಳ ಮಂದಗತಿಯಲ್ಲಿ ಸಾಗುತ್ತಿದೆ. ಗುದ್ದಲಿ ಪೂಜೆ ಸಮಯದಲ್ಲಿ 3 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದರು. ಆದರೆ, ಕಾಮಗಾರಿ ಪ್ರಾರಂಭ ವಾಗಿ ಆರೇಳು ತಿಂಗಳಾದರೂ ಪೂರ್ಣ ಗೊಂಡಿಲ್ಲ….