ಮೈಸೂರು: ಸ್ವಚ್ಛ ಭಾರತ್ ಅಭಿಯಾನದಡಿ ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ.ರಾಮದಾಸ್ ಭಾನುವಾರ ಮೈಸೂ ರಿನ 49ನೇ ವಾರ್ಡ್ ವ್ಯಾಪ್ತಿಯ ಹಲವು ಪ್ರದೇಶ ಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಅಗ್ರಹಾರ ವೃತ್ತ, ವಾಣಿವಿಲಾಸ ಮಾರುಕಟ್ಟೆ, ಮಧ್ವಾಚಾರ್ ರಸ್ತೆ, ನಂಜುಳಿಗೆ ಸುತ್ತಮುತ್ತ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಸ್ವಚ್ಛತಾ ಕಾರ್ಯದ ಜೊತೆಗೆ ಅಲ್ಲಿನ ನಿವಾಸಿ ಗಳಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿ ಸುವ ಪ್ರಯತ್ನ ನಡೆಸಿದರು. ಸಾರ್ವಜನಿಕರು ಮನೆಗಳಲ್ಲಿಯೇ ಹಸಿ ಕಸ, ಒಣ ಕಸ ವಿಂಗ ಡಿಸಿ ಅಲ್ಲಲ್ಲಿ ಇಟ್ಟಿರುವ…
ಡಾಕ್ಟರ್ ಆಫ್ ಪ್ಲಾಂಟ್ ಮೆಡಿಸಿನ್ ಕೋರ್ಸ್ ಆರಂಭಿಸಿ
November 12, 2018ಮೈಸೂರು: ಮೈಸೂರು ವಿಶ್ವವಿದ್ಯಾ ನಿಲಯದಲ್ಲಿ `ಡಾಕ್ಟರ್ ಆಫ್ ಪ್ಲಾಂಟ್ ಮೆಡಿಸಿನ್’ ವಿಷಯ ಕುರಿತಂತೆ ಐದು ವರ್ಷಗಳ ಕೋರ್ಸ್ ಆರಂಭಿಸುವ ಸಂಬಂಧ ಯೋಜನೆಯ ರೂಪುರೇಷೆ ಸಿದ್ಧಪಡಿಸುವಂತೆ ಮೈಸೂರು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಸಲಹೆ ನೀಡಿದರು. ಮೈಸೂರಿನ ಎಂಎಎಸ್ವಿಎಸ್ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರು ವಿವಿಯ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ಲಾಂಟ್ ಕ್ಲಿನಿಕ್ ವತಿಯಿಂದ `ಸಸ್ಯಾರೋಗ್ಯ ತಪಾಸಣೆ ಮತ್ತು ಸಮಗ್ರ ರೋಗ ನಿರ್ವ ಹಣೆ’ ಕುರಿತು ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಾ ಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….
ನಾನು ಮಾಡಿದ ಕೆಲಸವನ್ನು ತಾವು ಮಾಡಿದ್ದು ಎನ್ನುವುದು ನ್ಯಾಯವೇ..
November 11, 2018ಮೈಸೂರು: ಶಾಸಕ ಎಸ್.ಎ.ರಾಮದಾಸ್ ಅವರು ನಾನು ಮಾಡಿದ ಕಾಮಗಾರಿಗಳನ್ನು ತಾವು ಮಾಡಿದ್ದೆಂದು ಹೇಳಿಕೊಳ್ಳುತ್ತಾ ಜನರನ್ನ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕೃಷ್ಣ ರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ವಾಗ್ದಾಳಿ ನಡೆಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮದಾಸ್ ಅವರು ಗೆದ್ದು ಆರು ತಿಂಗಳಾದರೂ ಕ್ಷೇತ್ರಕ್ಕೆ ಒಂದು ರೂಪಾಯಿ ತರದಿದ್ದರೂ, ನಾನು ಮಾಡಿದ ಕಾಮ ಗಾರಿಯನ್ನೇ ತಾವು ಮಾಡಿದ್ದು ಎಂದು ಹೇಳಿಕೊಂಡಿದ್ದಾರೆ. ಮೈಸೂರಿನ ಜೆಎಲ್ಬಿ ರಸ್ತೆಯ ತುಳಸಿದಾಸ್ ಮೋಹನ್ದಾಸ್…
ಕೆ.ಆರ್.ವಿಧಾನಸಭಾ ಕ್ಷೇತ್ರದ ಪಾಲಿಕೆ ವಾರ್ಡ್ಗಳ ಸಮಸ್ಯೆ ಶೀಘ್ರ ಪರಿಹಾರಕ್ಕೆ ಶಾಸಕ ರಾಮದಾಸ್ ಸೂಚನೆ
November 10, 2018ಮೈಸೂರು: ನಗರ ಪಾಲಿಕೆ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಕೆ.ಆರ್.ಕ್ಷೇತ್ರದ ವಾರ್ಡ್ಗಳಲ್ಲಿನ ಸಮಸ್ಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಯಿತು. ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಪಾಲಿಕೆ ಅಧಿಕಾರಿಗಳೊಂದಿಗೆ ಕ್ಷೇತ್ರದ ವಾರ್ಡ್ನಲ್ಲಿನ ಸಮಸ್ಯೆಗಳ ಕುರಿತು ಸಭೆ ನಡೆಸಿ, ಚರ್ಚಿಸಿದರು. ಈ ವೇಳೆ ರಾಮದಾಸ್ ಅವರು ಇಂತಿಂಥ ಕಾಮಗಾರಿಗಳನ್ನು ಇಂತಿಷ್ಟು ದಿನಗಳೊಳಗೆ ಪೂರ್ಣಗೊಳಿಸಿ ವರದಿ ನೀಡುವಂತೆ ಪಾಲಿಕೆ ಆಯುಕ್ತರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಪಾಲಿಕೆಯ ಸೇಸ್ಗಳಿಗೆ ಪ್ರತ್ಯೇಕ ಬ್ಯಾಂಕ್ ಖಾತೆ ಇಲ್ಲದಿರುವುದು ಹಾಗೂ ಪಾಲಿಕೆಯಲ್ಲಿ ಯಾವುದೇ…
ಶಾಸಕ ರಾಮದಾಸ್ರಿಂದ ಬೆಮೆಲ್ ನಗರದಲ್ಲಿ ಸ್ವಚ್ಛತಾ ಅಭಿಯಾನ
November 6, 2018ಮೈಸೂರು: ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಪಾಲಿಕೆಯ 63ನೇ ವಾರ್ಡ್ ವ್ಯಾಪ್ತಿಯ ಬೆಮೆಲ್ ನಗರದಲ್ಲಿ ಸ್ಥಳೀಯರೊಂದಿಗೆ ಸೇರಿ ಸ್ವಚ್ಛತಾ ಅಭಿಯಾನ ನಡೆಸುವ ಮೂಲಕ ಗಮನ ಸೆಳೆದರು. ಬೆಮಲ್ ನಗರದ ಗಣಪತಿ ದೇವಾಲಯದ ಬಳಿ ಯಿಂದ ಸ್ವಚ್ಛತಾ ಅಭಿಯಾನ ಆರಂಭಿಸಿದ ಶಾಸಕ ಎಸ್.ಎ.ರಾಮದಾಸ್ ಅವರು ಪಾಲಿಕೆ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಕಾರ್ಯಕರ್ತರೊಂದಿಗೆ ವಿವಿಧ ರಸ್ತೆಗಳಲ್ಲಿ, ಉದ್ಯಾನವನಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಇದೇ ವೇಳೆ ಮಾತನಾಡಿದ ಎಸ್.ಎ. ರಾಮದಾಸ್ ಅವರು, ಈಗಾಗಲೇ ಸ್ವಚ್ಛತಾ ಅಭಿಯಾನ ಕ್ಷೇತ್ರದಾದ್ಯಂತ ಆರಂಭಿಸಲಾಗಿದ್ದು, ಒಂದೊಂದು…
ಪೌರ ಕಾರ್ಮಿಕರ ಧರಣಿ ಸ್ಥಳಕ್ಕೆ ಶಾಸಕ ರಾಮದಾಸ್ ಭೇಟಿ
October 6, 2018ಮೈಸೂರು: ಮುಷ್ಕರ ನಿರತ ಪೌರಕಾರ್ಮಿಕರನ್ನು ಶುಕ್ರವಾರ ಭೇಟಿ ಮಾಡಿದ ಕೃಷ್ಣ ರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿಕೊಂಡರು. ನಿಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತಿಳಿಸಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನೂ ಭೇಟಿ ಮಾಡಿ ಅವರ ಗಮನಕ್ಕೂ ತಂದಿದ್ದೇನೆ. ಪೌರ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಗಮನಹರಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಲ್ಲೂ ಮನವಿ ಮಾಡಿದ್ದೇವೆ ಎಂದು ರಾಮದಾಸ್, ಪ್ರತಿ ಭಟನಾನಿರತ ಕಾರ್ಮಿಕರಿಗೆ ತಿಳಿಸಿದರು. ನಿಮ್ಮ ಸಮಸ್ಯೆಗಳು,…