ಮದ್ದೂರು: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿದ್ದಾರೆ. ಈ ಬಗ್ಗೆ ಆತಂಕ ಬೇಡ. ಆದರೆ ಕಾಲಾವಕಾಶ ಬೇಕು ಎಂದು ಶಾಸಕ ಸುರೇಶ್ಗೌಡ ತಿಳಿಸಿದರು. ತಾಲೂಕಿನ ಕಿರಂಗೂರು ಗ್ರಾಮದಲ್ಲಿ ನಡೆದ ತೋಪಿನ ತಿಮ್ಮಪ್ಪ ದೇವರ ಹರಿಸೇವೆ ಯಲ್ಲಿ ಮಾತನಾಡಿದ ಅವರು, ಸಿಎಂ ಅವರು ಸಿದ್ದರಾಮಯ್ಯರ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವ ಜೊತೆಗೆ ರೈತರ ಸಾಲ ಮನ್ನಾ ಮಾಡಿ ದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ರೈತರಿಗೆ ಹಾಗೂ ಎಲ್ಲ ಸಮುದಾಯಗಳಿಗೆ ಉಪಯುಕ್ತ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂದು…