ರಾಮನಗರ: ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಹಿಂದೆ ಸರಿಯಬೇಕು, ಒಂದೊಮ್ಮೆ ಮೈತ್ರಿ ಮುಂದು ವರಿಸಿದರೆ, ಪಕ್ಷ ನಾಮಾವಶೇಷವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮೇಲ್ಮನೆ ಸದಸ್ಯ ಸಿ.ಎಂ.ಲಿಂಗಪ್ಪ ಶನಿವಾರ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಅತಿ ದೊಡ್ಡ ಪ್ರಮಾದ ಎಸಗಿದೆ ಎಂದು ಅಭಿಪ್ರಾಯಪಟ್ಟರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲನ್ನು ಪ್ರಸ್ತಾಪಿಸಿದ ಲಿಂಗಪ್ಪ, ದೇಶದ ಚುನಾವಣಾ ಇತಿಹಾಸದಲ್ಲಿ ಕಾಂಗ್ರೆಸ್…