ಮೈಸೂರು,ಡಿ.೧(ಆರ್ಕೆಬಿ)- ಕಾಂಗ್ರೆಸ್ ದುರಾಡಳಿತ ದಿಂದ ಬೇಸತ್ತಿರುವ ದಲಿತರು, ಹಿಂದುಳಿದವರು ಬಿಜೆಪಿ ಯತ್ತ ಮುಖ ಮಾಡಿದ್ದಾರೆ. ಇದೇ ರೀತಿ ಮುಂದುವರಿದರೆ ಕಾಂಗ್ರೆಸ್ಗೆ ಪ್ರಾದೇಶಿಕ ಪಕ್ಷದ ಮಾನ್ಯತೆ ಪಡೆದುಕೊಳ್ಳಲೂ ಸಾಧ್ಯವಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣ ದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಬುಧವಾರ ಆಯೋಜಿಸಿದ್ದ ಮೋರ್ಚಾದ ಮೈಸೂರು ನಗರ, ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಪ್ರಮುಖರ ಚಿಂತನಾ ಸಭೆಯನ್ನು…
ಸಿದ್ದರಾಮಯ್ಯರ ಮುಗಿಸಲು ಬಿಜೆಪಿ, ಜೆಡಿಎಸ್ ಸಂಚು
December 2, 2021ಡಾ.ಹೆಚ್.ಸಿ.ಮಹದೇವಪ್ಪ ಆರೋಪ ಮಾಜಿ ಸಿಎಂ ಸಿದ್ದರಾಮಯ್ಯನವರ `ಕೈ’ ಬಲಪಡಿಸಲು ಡಾ.ತಿಮ್ಮಯ್ಯ ಗೆಲ್ಲಿಸಿ ಡಾ.ಹೆಚ್.ಸಿ.ಮಹದೇವಪ್ಪ ಆರೋಪ ಮಾಜಿ ಸಿಎಂ ಸಿದ್ದರಾಮಯ್ಯನವರ `ಕೈ’ ಬಲಪಡಿಸಲು ಡಾ.ತಿಮ್ಮಯ್ಯ ಗೆಲ್ಲಿಸಿ ಮೈಸೂರು, ಡಿ.೧(ಜಿಎ)- ಬಿಜೆಪಿ, ಜೆಡಿಎಸ್ನವರು ಹೊಂದಾಣಿಕೆ ಮಾಡಿಕೊಂಡು ಸಿದ್ದರಾಮಯ್ಯನವರ ನಾಯಕತ್ವವನ್ನೇ ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಆದರೆ ಅವರ ಆಟ ನಡೆಯುವುದಿಲ್ಲ. ಸಿದ್ದರಾಮಯ್ಯನವರ ಕೈಬಲಪಡಿಸಲು ಡಾ.ಡಿ.ತಿಮ್ಮಯ್ಯನವರನ್ನು ಗೆಲ್ಲಿಸಬೇಕೆಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕರೆ ನೀಡಿದರು. ಚಾಮುಂಡೇಶ್ವರಿ ಕ್ಷೇತ್ರದ ಕೇರ್ಗಳ್ಳಿಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಗೆ…
ಪರಿಷತ್ ಚುನಾವಣೆ; ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ವೈಯಕ್ತಿಕ ನಿಂದನೆ ಆರೋಪ
December 2, 2021ಜೆಡಿಎಸ್ನಿಂದ ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಡಿಸಿಗೆ ದೂರು ಮೈಸೂರು,ಡಿ.೧(ಪಿಎಂ)-ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿ ವೈಯಕ್ತಿಕವಾಗಿ ನಿಂದಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚುನಾ ವಣೆಯ ಮಾದರಿ ನೀತಿ ಸಂಹಿತೆ ನಿಯಮ-೨ರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಬುಧವಾರ ಜೆಡಿಎಸ್ ರಾಜ್ಯ ವಕ್ತಾರರೂ ಆದ ಪಕ್ಷದ…