ನವದೆಹಲಿ: ನರೇಂದ್ರ ಮೋದಿ ಅವರು ದೇಶದ 15ನೇ ಪ್ರಧಾನಿಯಾಗಿ ಇಂದು ಗೋಧೂಳಿ ಸಮಯದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಐದು ವರ್ಷ ಪೂರ್ಣ ಗೊಳಿಸಿ ಮತ್ತೊಮ್ಮೆ ಪಟ್ಟಕ್ಕೇರಿದ ಕಾಂಗ್ರೆಸ್ಸೇ ತರ ಪ್ರಧಾನಿ ಎಂಬ ಹೆಗ್ಗಳಿಕೆಯೂ ಮೋದಿ ಅವರ ಪಾಲಾಗಿದೆ. ಇಂದು ಸಂಜೆ 7 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲು ಮೋದಿ ಅವರು ಆಗಮಿಸುತ್ತಿದಂತೆ ರಾಷ್ಟ್ರಪತಿ ಭವನದ ದಶದಿಕ್ಕುಗಳಲ್ಲೂ ಮೋದಿ… ಮೋದಿ… ಜಯಘೋಷ ಮೊಳಗಿತು. ಈ ವೇಳೆ ಈಶ್ವರನ ಹೆಸರಲ್ಲಿ ಗೌಪ್ಯತಾ ವಿಧಿ ಸ್ವೀಕರಿಸಿದ ಮೋದಿ ಅವರು…
ರಾಜ್ಯದಿಂದ ಸದಾನಂದಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ನಿರ್ಮಲಾ ಸೀತಾರಾಮನ್ ಸಂಪುಟ ಸೇರ್ಪಡೆ
May 31, 2019ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 25 ಸ್ಥಾನಗಳಲ್ಲಿ ಗೆಲುವು ತಂದು ಕೊಟ್ಟ ಕರ್ನಾಟಕಕ್ಕೆ ಇಲ್ಲಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ತಮಿಳು ನಾಡಿನ ನಿರ್ಮಲಾ ಸೀತಾರಾಮನ್ ಸೇರಿ 4 ಕೇಂದ್ರ ಸಚಿವ ಸ್ಥಾನಗಳನ್ನು ಮೋದಿ ಸಂಪುಟದಲ್ಲಿ ನೀಡಲಾಗಿದೆ. ಹಿಂದಿನ ಸರ್ಕಾರದಲ್ಲಿ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್, ಹಿಂದಿನ ಸರ್ಕಾರದಲ್ಲಿ ರೈಲ್ವೆ, ಕಾನೂನು, ಸಾಂಖ್ಯಿಕ ಯೋಜನೆ ಜಾರಿ ಹಾಗೂ ರಸಗೊಬ್ಬರ ಖಾತೆಗಳನ್ನು ನಿರ್ವಹಿಸಿದ್ದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದಗೌಡ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ…
ಮೋದಿ ಸಂಪುಟದಲ್ಲಿ ಉ.ಪ್ರದೇಶಕ್ಕೆ ಅಧಿಕ 9 ಸ್ಥಾನ
May 31, 2019ನವದೆಹಲಿ: ಎರಡನೇ ಅವಧಿಯ ನರೇಂದ್ರ ಮೋದಿ ಅವರ ಸರ್ಕಾರದ ಸಚಿವ ಸಂಪುಟದಲ್ಲಿ ಅತೀ ಹೆಚ್ಚು ಸ್ಥಾನ ಸಿಕ್ಕಿರುವುದು ಉತ್ತರ ಪ್ರದೇಶಕ್ಕೆ ಒಟ್ಟು 303 ಸ್ಥಾನಗಳನ್ನು ಪಡೆದಿರುವ ಬಿಜೆಪಿಗೆ ಅತೀ ಹೆಚ್ಚು ಸಂಸದರ ಕೊಡುಗೆ ನೀಡಿದ ಉತ್ತರ ಪ್ರದೇಶಕ್ಕೆ 9 ಸಚಿವ ಸ್ಥಾನ ಸಿಕ್ಕಿದೆ. ಅತಿ ಹೆಚ್ಚು ಮಂತ್ರಿ ಪದವಿ ಪಡೆದ ರಾಜ್ಯಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಮಹಾರಾಷ್ಟ್ರವಿದೆ. ಬಿಜೆಪಿ-ಶಿವಸೇನೆ ಮೈತ್ರಿಯ ರಾಜ್ಯದಿಂದ 8 ಸಂಸದರಿಗೆ ಮಂತ್ರಿ ಪದವಿ ಒಲಿದಿದೆ. ಬಿಹಾರ, ಮಧ್ಯಪ್ರದೇಶ ತಲಾ 5, ಕರ್ನಾ ಟಕ…