ಕೊಳ್ಳೇಗಾಲ: ಸಂಸದ ಧ್ರುವನಾರಾಯಣ್ ಆದೇಶದ ಮೇರೆಗೆ ಕಾಡಂಚಿನ ಗ್ರಾಮಗಳ ಸಂಪರ್ಕ ರಸ್ತೆ ಅಭಿವೃದ್ಧಿ ಹಾಗೂ ಕಾಡು ಬಿಟ್ಟು ಹೊರ ಬರುವವರಿಗೂ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಲೆ ಮಹದೇಶ್ವರ ವನ್ಯಜೀವಿ ಅರಣ್ಯ ವಲಯದ ಉಪ ಅರಣ್ಯ ಸಂರಕ್ಷಣಾ ಧಿಕಾರಿ ಏಡುಕೊಂಡಲು ತಿಳಿಸಿದರು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅರಣ್ಯ ಪ್ರದೇಶದ ಕಾಡಂಚಿನ ಗ್ರಾಮಗಳಾದ ದೊಡ್ಡಾಣೆ, ತುಳಸಿಕೆರೆ, ಮೆದುಗನಾಣೆ, ಎಲಚಿಕೆರೆ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಮತ್ತು ರೈತ ಮುಖಂಡ ಹೊನ್ನೂರು ಪ್ರಕಾಶ್…
ವಿದ್ಯಾರ್ಥಿಗಳು ಮಾತೃಭಾಷೆಯ ಜೊತೆಗೆ ಇಂಗ್ಲಿಷ್ ಕಲಿಕೆಗೂ ಗಮನ ಹರಿಸಿ
September 19, 2018ಚಾಮರಾಜನಗರ: ವಿದ್ಯಾರ್ಥಿಗಳು ಮಾತೃ ಭಾಷೆಯ ಜೊತೆಗೆ ಇಂಗ್ಲಿಷ್ ಕಲಿಕೆಗೂ ಗಮನ ಹರಿಸಬೇಕು ಎಂದು ಸಂಸದ ಆರ್.ಧ್ರುವನಾರಾಯಣ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ಕರಿನಂಜನಪುರ ರಸ್ತೆಯಲ್ಲಿ ಇರುವ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜು ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಸಾಂಸ್ಕø ತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಹಿರಿಯರಿಂದ ಕಿರಿಯರಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದು ಸ್ಪರ್ಧಾತ್ಮಕ ಯುಗ. ಈ ಯುಗ ದಲ್ಲಿ ಇಂಗ್ಲಿಷ್ ಬಹಳ ಮುಖ್ಯವಾಗಿದೆ. ವಿದ್ಯಾ ರ್ಥಿಗಳು ಉದ್ಯೋಗ…
ಗ್ರಂಥಾಲಯ ಸೇವೆ ಸದ್ಬಳಕೆಗೆ ಸಲಹೆ
September 8, 2018ಚಾಮರಾಜನಗರ: ಜ್ಞಾನ ಸಂಪಾ ದನೆಗೆ ಅಗತ್ಯವಾಗಿರುವ ಗ್ರಂಥಾಲಯಗಳ ಸೇವೆಯನ್ನು ಪ್ರತಿಯೊಬ್ಬರು ಸದುಪ ಯೋಗ ಮಾಡಿಕೊಳ್ಳಬೇಕೆಂದು ಸಂಸದ ಆರ್.ಧ್ರುವನಾರಾಯಣ ಸಲಹೆ ಮಾಡಿದರು. ನಗರದ ಜಿಲ್ಲಾ ನ್ಯಾಯಾಲಯ ಅವ ರಣದ ಸಂಕೀರ್ಣದಲ್ಲಿ ವಕೀಲರಿಗಾಗಿ ರಾಜ್ಯ ಸರ್ಕಾರದ ಅನುದಾನದಡಿ ವ್ಯವಸ್ಥೆ ಮಾಡಲಾಗಿರುವ ಇ-ಲೈಬ್ರರಿ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಜ್ಞಾನಾರ್ಜನೆಗೆ ಪೂರಕವಾಗಿರುವ ಗ್ರಂಥಾಲಯಗಳು ಪ್ರತಿ ಜಿಲ್ಲೆ, ತಾಲೂಕು ಸೇರಿದಂತೆ ಎಲ್ಲೆಡೆ ಇರಬೇಕು. ಆದರೆ ಗ್ರಂಥಾ ಲಯಗಳಿಗೆ ನಿರೀಕ್ಷಿತ ಅದ್ಯತೆಯನ್ನು ನೀಡ ಲಾಗುತ್ತಿಲ್ಲ. ಅಧ್ಯಯನಕ್ಕೆ ಗ್ರಂಥಾಲಯ ಗಳು ತುಂಬಾ ಅವಶ್ಯಕವಾಗಿದೆ. ಹೀಗಾಗಿ…
ಮಕ್ಕಳನ್ನು ಒಳ್ಳೆಯ ನಾಗರಿಕರನ್ನಾಗಿಸಲು ಶಿಕ್ಷಕರಿಗೆ ಕರೆ
September 6, 2018ಚಾಮರಾಜನಗರ: ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕ ಳಂತೆ ಕಾಣಬೇಕು. ಪ್ರತಿಯೊಬ್ಬ ವಿದ್ಯಾ ರ್ಥಿಯನ್ನೂ ಒಳ್ಳೆಯ ನಾಗರಿಕರನ್ನಾಗಿ ಸೃಷ್ಠಿಸಬೇಕು ಎಂದು ಸಂಸದ ಆರ್.ಧ್ರುವ ನಾರಾಯಣ್ ಶಿಕ್ಷಕರಿಗೆ ಕರೆ ನೀಡಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಜೆ.ಹೆಚ್.ಪಟೇಲ್ ಸಭಾಂಗಣ ದಲ್ಲಿ ಬುಧವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣಾ ಸಮಾರಂಭವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ಶಿಕ್ಷಕರ ಹುದ್ದೆ ಹಾಗೂ ವೈದ್ಯರ ಹುದ್ದೆ ಶ್ರೇಷ್ಠ ಹುದ್ದೆ. ಇದರಲ್ಲಿ ಒಂದು ಹುದ್ದೆ ಯಲ್ಲಿ ಇರುವ ಶಿಕ್ಷಕರು, ಸಮಾಜದ…
ಪಕ್ಷೇತರರ ಸಹಕಾರದಿಂದ ಕಾಂಗ್ರೆಸ್ಗೆ ಅಧಿಕಾರ: ತಿ.ನರಸೀಪುರದಲ್ಲಿ ಸಂಸದ ಧ್ರುವನಾರಾಯಣ್ ವಿಶ್ವಾಸ
September 5, 2018ತಿ.ನರಸೀಪುರ: ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಲ್ಪಮಟ್ಟದ ಹಿನ್ನೆಡೆಯಾಗಿರುವುದರಿಂದ ಪಕ್ಷೇತರರ ಬೆಂಬಲ ಪಡೆದು ಪುರಸಭೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುವುದಾಗಿ ಸಂಸದ ಆರ್.ಧ್ರುವನಾರಾಯಣ ಹೇಳಿದರು. ಪಟ್ಟಣದ ಶ್ರೀ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಪುರಸಭಾ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಪರಿವರ್ತಿತ ಪುರಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿಯನ್ನು ನಿರೀಕ್ಷಿಸಿರಲಿಲ್ಲ. 23 ವಾರ್ಡುಗಳಲ್ಲಿ 10ರಲ್ಲಿ ಕಾಂಗ್ರೆಸ್ ಗೆದ್ದಿದ್ದು, ಅಧಿಕಾರ ಹಿಡಿಯಲು ಮೂವರು ಸದಸ್ಯರ ಬೆಂಬಲ ಬೇಕಿರುವುದರಿಂದ ಪಕ್ಷೇತರರ ಸಹಕಾರ ಪಡೆದುಕೊಳ್ಳಲಾಗುವುದು ಎಂದರು. ಹಿಂದಿನ ಸರ್ಕಾರದ ಅವಧಿಯಲ್ಲಿ…
ಸಂಸದ ಆರ್.ದ್ರುವನಾರಾಯಣ್ ಹುಟ್ಟುಹಬ್ಬ ಪ್ರಯುಕ್ತ ಜು.31 ರಂದು ಬೃಹತ್ ಉದ್ಯೋಗಮೇಳ; 4 ಸಾವಿರ ಉದ್ಯೋಗ ಕೊಡಿಸುವ ಗುರಿ
July 25, 2018ಚಾಮರಾಜನಗರ: ಸಂಸದ ಆರ್.ಧ್ರುವನಾರಾಯಣ್ರವರ 57ನೇ ಜನ್ಮದಿನದ ಪ್ರಯುಕ್ತ ಅವರ ಅಭಿ ಮಾನಿಗಳ ಬಳಗವು ಜು.31 ರಂದು ಮಂಗಳವಾರ ನಗರದ ತಾಲೂಕು ಕಚೇರಿ ಪಕ್ಕದಲ್ಲಿ ಬೃಹತ್ ಉದ್ಯೋಗ ಮೇಳ ವನ್ನು ಹಮ್ಮಿಕೊಂಡಿದ್ದು, 4 ಸಾವಿರ ಉದ್ಯೋಗ ಕೊಡಿಸುವ ಗುರಿ ಹೊಂದ ಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತ ನಾಡಿದರು. ಶಾಲಾ ಮಕ್ಕಳಿಗೆ ಕಣ್ಣಿನ ತಪಾಸಣೆ ಶಿಬಿರ, ಬೃಹತ್ ಉದ್ಯೋಗ ಮೇಳ…
ಜನಸಂಖ್ಯೆ ಪ್ರಮಾಣ ನಿಯಂತ್ರಿಸದಿದ್ದಲ್ಲಿ ಸಮಸ್ಯೆ ಹೆಚ್ಚಳ
July 18, 2018ಚಾಮರಾಜನಗರ: ಮಿತಿ ಮೀರಿದ ಪ್ರಮಾಣದಲ್ಲಿ ಏರುತ್ತಿರುವ ಜನಸಂಖ್ಯೆ ಪ್ರಮಾಣವನ್ನು ನಿಯಂತ್ರಣ ಮಾಡದಿದ್ದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಠಿ ಯಾಗಲಿದೆ ಎಂದು ಸಂಸದ ಆರ್. ಧ್ರುವ ನಾರಾಯಣ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಂದು ಹಮ್ಮಿ ಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾ ಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದಲ್ಲಿ ಜನಸಂಖ್ಯೆ ಹೆಚ್ಚಳ ದೇಶಗಳ ಪೈಕಿ ಚೀನಾ ಮೊದಲ ಸ್ಥಾನದಲ್ಲಿದೆ. ಭಾರತ ನಂತರದ ಸ್ಥಾನದಲ್ಲಿದೆ. ಚೀನಾ ಹಾಗೂ ಭಾರತದ…
ಜಿಲ್ಲಾ ಕ್ರೀಡಾಂಗಣಕ್ಕೆ ಸಂಸದ ಧ್ರುವನಾರಾಯಣ್ ದಿಢೀರ್ ಭೇಟಿ
July 12, 2018ಚಾಮರಾಜನಗರ: ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಮಂಗಳವಾರ ಸಂಜೆ ಸಂಸದ ಆರ್.ಧ್ರುವನಾರಾಯಣ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಕ್ರೀಡಾಂಗಣದಲ್ಲಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ಸಿಂಥೆಟಿಕ್ ಟ್ರ್ಯಾಕ್ ಶೀಘ್ರದಲ್ಲಿಯೇ ಉದ್ಘಾಟಿಸುವ ಬಗ್ಗೆ ಕ್ರಮಕೈಗೊಳ್ಳುವಂತೆ ಸ್ಥಳದಲ್ಲಿಯೇ ಇದ್ದ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚೆಲುವಯ್ಯ ಅವರಿಗೆ ಸೂಚಿಸಿದರು. ಕ್ರೀಡಾಂಗಣದ ಸುತ್ತಲೂ ಆಡಿಟರ್ ಆಗಿರುವ ಸಿ.ಎಂ.ವೆಂಕಟೇಶ್ ಹಾಕಿರುವ ಗಿಡಗಳನ್ನು ಸಂರಕ್ಷಿಸುವಂತೆ ಹಾಗೂ ಸೂಕ್ತ ಭದ್ರತೆ ಕೈಗೊಳ್ಳುವಂತೆ ಸಂಸದರು ಇದೇ ವೇಳೆ ಸೂಚಿಸಿದರು. ಇದಲ್ಲದೇ ನಗರದ ಬಹುತೇಕ ಕಡೆ ಗಿಡಗಳನ್ನು…
ಕೃಷಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್
July 10, 2018ಜಿಲ್ಲೆಯಲ್ಲಿ ಜನರ ಬಹುದಿನಗಳ ಬೇಡಿಕೆ ಈಡೇರಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಾಲೇಜು ಆರಂಭ ಚಾಮರಾಜನಗರ: ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕೃಷಿ ವಿಜ್ಞಾನ ಕಾಲೇಜು ಪ್ರಾರಂಭಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಪ್ರಯತ್ನಗಳು ಸದ್ದಿಲ್ಲದೇ ಸಾಗಿದೆ. ಈ ಮೂಲಕ ಗಡಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಕೊನೆಗೂ ಈಡೇರುವ ಕಾಲ ಸನಿಹವಾಗಿದೆ. ಜಿಲ್ಲೆಯಲ್ಲಿ ಕೃಷಿ ಕಾಲೇಜು ಪ್ರಾರಂಭಿ ಸುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈಗಾಗಲೇ ಗ್ರೀನ್ಸಿಗ್ನಲ್ ನೀಡಿದ್ದಾರೆ. ಇದಕ್ಕೆ ಸಹಿಯನ್ನು ಸಹ ಹಾಕಿದ್ದಾರೆ. ಸರ್ಕಾರ ಆರ್ಥಿಕ…
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
July 8, 2018ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಬಗ್ಗೆ ವ್ಯಾಪಕ ಚರ್ಚೆ ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ತಾಕೀತು ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡ ಸಂಸದ ಧ್ರುವನಾರಾಯಣ ಚಾಮರಾಜನಗರ: ಚಾಮರಾಜನಗರದಿಂದ ಸಂತೇಮರಹಳ್ಳಿ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಈ ಮಾರ್ಗದಲ್ಲಿ ಸೃಷ್ಟಿಯಾ ಗಿದ್ದ ಹಳ್ಳಕ್ಕೆ ಬಿದ್ದು ಇಬ್ಬರು ಪ್ರಾಣ ಕಳೆದು ಕೊಂಡಿದ್ದಾರೆ. ಇದಕ್ಕೆ ಹೊಣೆ ಯಾರು? ಮನುಷ್ಯನ ಪ್ರಾಣಕ್ಕೆ ಬೆಲೆ ಇಲ್ಲವೇ? ಎಂದು ಸಂಸದ ಆರ್.ಧ್ರುವನಾರಾಯಣ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು….