ಮೈಸೂರು: 2014ರ ಲೋಕ ಸಭಾ ಚುನಾವಣೆಯಲ್ಲಿ ಮೋದಿ ಅವರ ಸಾಧನೆ ಬಿಂಬಿ ಸಲು ಗುಜರಾತ್ ಮಾದರಿ ಎಂದು ಹೇಳುತ್ತಿದ್ದೆವು. ಈ ಚುನಾವಣೆಯಲ್ಲಿ ಭಾರತದ ಅಭಿವೃದ್ಧಿ ಬಗ್ಗೆ ಇಡೀ ವಿಶ್ವವೇ ಕೊಂಡಾಡುತ್ತಿರುವುದು ನಮ್ಮ-ನಿಮ್ಮೆಲ್ಲರ ಸುದೈವ ಎಂದು ಸಂಸದ ಪ್ರತಾಪ ಸಿಂಹ ಅಭಿಪ್ರಾಯಪಟ್ಟರು. ಮೈಸೂರಿನ ರಾಜೇಂದ್ರಭವನದಲ್ಲಿ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ವಿಜಯ ಲಕ್ಷ್ಯ-2019ರ ಶೀರ್ಷಿಕೆಯಡಿ ಆಯೋಜಿಸಿದ್ದ ಯುವ ಮೋರ್ಚಾ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಹಿಂದಿನ ಚುನಾವಣೆಯಲ್ಲಿ ಮೋದಿ ಗುಜರಾತಿನ ಮುಖ್ಯ ಮಂತ್ರಿಯಾಗಿದ್ದರು. ಆಗ ದೇಶಕ್ಕೆ ಗುಜರಾತ್…
ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿ ಸಮಗ್ರ ಅಭಿವೃದ್ಧಿ
February 23, 2019ಮೈಸೂರು: ಕೇಂದ್ರ ಸರ್ಕಾರದ ಪ್ರವಾ ಸೋದ್ಯಮ ಸಚಿವಾಲಯದ ಪ್ರಸಾದ್ (Pilgrimage Rejuvenation and Spiritual Augmentation Drive) ಯೋಜನೆಯಡಿ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಸಂಸದ ಪ್ರತಾಪ್ ಸಿಂಹ ಅವರ ಪ್ರಯತ್ನದಿಂದಾಗಿ ಪ್ರಸಾದ ಯೋಜನೆಯಡಿ ಮೈಸೂರಿಗೆ 100 ಕೋಟಿ ರೂ. ಯೋಜನೆ ಮಂಜೂರಾಗಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ, ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರು ಚಾಮುಂಡಿಬೆಟ್ಟ ಹಾಗೂ ಶ್ರೀ ಚಾಮುಂಡೇ ಶ್ವರಿ ದೇವಸ್ಥಾನವನ್ನು ಅಭಿವೃದ್ಧಿಗೊಳಿಸಿ…
ಶೀಘ್ರವೇ ಮಂಡ್ಯದಲ್ಲೂ ಪಾಸ್ಪೋರ್ಟ್ ಸೇವಾ ಕೇಂದ್ರ
February 23, 2019ಸಿಐಐ ಯಂಗ್ ಇಂಡಿಯನ್ಸ್ ಮೈಸೂರು 2.0 ಔದ್ಯಮಿಕ ಶೃಂಗಸಭೆಯಲ್ಲಿ ಸಂಸದ ಪ್ರತಾಪ ಸಿಂಹ ಮೈಸೂರು: ಶೀಘ್ರ ದಲ್ಲೇ ಮಂಡ್ಯದಲ್ಲೂ ಪಾಸ್ಪೋರ್ಟ್ ಸೇವಾ ಕೇಂದ್ರ ಆರಂಭಿಸಲಾಗುವುದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಹೇಳಿದರು. ನಗರದ ಖಾಸಗಿ ಹೋಟೆಲ್ನಲ್ಲಿ ಕಾನ್ಫೆ ಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಹಾಗೂ ಯಂಗ್ ಇಂಡಿಯನ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ `ಮೈಸೂರು 2.0’ ಔದ್ಯಮಿಕ ಶೃಂಗಸಭೆ ಯಲ್ಲಿ ಮಾತನಾಡಿದ ಅವರು, ನಾನು ಸಂಸದನಾಗುವ ಮುನ್ನ ನಗರದ ರಿಂಗ್ ರಸ್ತೆ ಕಾಮಗಾರಿ ಅರ್ಧಕ್ಕೇ ನಿಂತು…
ಶೀಘ್ರವೇ ಕಾಚೀಗೂಡ-ಬೆಂಗಳೂರು ರೈಲು ಮೈಸೂರಿಗೆ ವಿಸ್ತರಣೆ
February 7, 2019ನವದೆಹಲಿ: ಕಾಚೀಗೂಡ-ಬೆಂಗ ಳೂರು ನಡುವೆ ಸಂಚರಿಸುತ್ತಿರುವ ಡೈಲಿ ಎಕ್ಸ್ಪ್ರೆಸ್ ಟ್ರೈನನ್ನು ಮೈಸೂರುವರೆಗೆ ವಿಸ್ತರಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸಂಸದ ಪ್ರತಾಪ್ ಸಿಂಹ ಅವರಿಗೆ ಭರವಸೆ ನೀಡಿದ್ದಾರೆ. ಬುಧವಾರ ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿದ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ, ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾ ಸೋದ್ಯಮ ಹಾಗೂ ಕೈಗಾರಿಕೋದ್ಯಮದ ಅಭಿವೃದ್ಧಿ ಹಾಗೂ ಪ್ರತಿನಿತ್ಯ ಪ್ರಯಾಣಿ ಸುವ ಪ್ರಯಾಣಿಕರ ಅನುಕೂಲ ದೃಷ್ಟಿ ಯಿಂದ ಕಾಚೀಗೂಡ-ಬೆಂಗಳೂರು ಟ್ರೈನ್ನ್ನು ಮೈಸೂರುವರೆಗೆ ವಿಸ್ತರಿಸ ಬೇಕೆಂದು ಮನವಿ…
ಕೇಂದ್ರ ಬಜೆಟ್ ಸಿಎಂ ಕುಮಾರಸ್ವಾಮಿಗೆ ಅರ್ಥವಾಗದಿದ್ದರೂ ಸಾಮಾನ್ಯ ಜನರಿಗೆ ತಿಳಿದಿದೆ
February 3, 2019ಮೈಸೂರು: ಕೇಂದ್ರ ಬಜೆಟ್ ಅನ್ನು ಟೀಕಿಸಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ಸಿಂಹ, ಕುಮಾರಸ್ವಾಮಿ ಅಂತಹವರಿಗೆ ಬಜೆಟ್ನಲ್ಲಿ ಕಲ್ಪಿಸಿರುವ ತೆರಿಗೆ ವಿನಾಯಿತಿ ಮಹತ್ವ ಅರ್ಥ ಆಗುವುದಿಲ್ಲ. ಆದರೆ ಇದರಿಂದ ಅನುಕೂಲ ಪಡೆಯುವ ಸಾಮಾನ್ಯ ಜನರಿಗೆ ಅದು ಅರ್ಥವಾಗುತ್ತದೆ ಎಂದು ತಿರುಗೇಟು ನೀಡಿದರು. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಮಂಡಿಸಿದ ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯಲ್ ಅನುಭವಿ ಚಾರ್ಟರ್ಡ್ ಅಕೌಂಟೆಂಟ್. ಅವರು ಮೊದಲ ಬಾರಿಗೆ ಎಲ್ಲರಿಗೂ ಅನುಕೂಲ…
ಎಲ್ಲಾ ಕುಟುಂಬಕ್ಕೂ ಸೂರು ಕಲ್ಪಿಸುವುದು ಮೋದಿ ಕನಸು
February 2, 2019ಹುಣಸೂರು: ಎರಡು ಸಾವಿರದ ಇಪ್ಪತ್ತೆರಡಕ್ಕೆÉ್ಕ ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸುವ ವಜ್ರ ಮಹೋತ್ಸವದ ಅಚರಣೆ ಸಂದರ್ಭದಲ್ಲಿ ದೇಶದಲ್ಲಿನ ಯಾವುದೇ ಕುಟುಂಬಗಳು ಸ್ವಂತ ಸೂರಿನಿಂದ ವಂಚಿತರಾಗಿರಬಾರದು ಎಂಬುದು ಪ್ರಧಾನಿ ಮೋದಿ ಅವರ ಕನಸಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಅವಾಸ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಂಸದ ಪ್ರತಾಪ್ಸಿಂಹ ತಿಳಿಸಿದರು. ನಗರದ ಪೌರಕಾರ್ಮಿಕರ ಕಾಲೋನಿಯಲ್ಲಿ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಲಿಯಿಂದ ನಗರದ ಪೌರಕಾರ್ಮಿಕರ ಕಾಲೋನಿ, ಸರಸ್ವತಿಪುರಂ, ರೆಹಮತ್ ಮೊಹಲ್ಲಾ…
ಅಸ್ತಿತ್ವ ಉಳಿಸಿಕೊಳ್ಳಲು ಪ್ರಿಯಾಂಕಾ ಕರೆ ತರುತ್ತಿದ್ದಾರೆ
January 25, 2019ಮೈಸೂರು: ಉತ್ತರ ಪ್ರದೇಶದಲ್ಲಿ ರಾಜಕೀಯ ಅಸ್ತಿತ್ವ ಉಳಿಸಿ ಕೊಳ್ಳಲು ಕಾಂಗ್ರೆಸ್ನವರು ಪ್ರಿಯಾಂಕಾಗಾಂಧಿ ಅವರನ್ನು ಕರೆ ತರುತ್ತಿದ್ದಾರೆ ಎಂದು ಸಂಸದ ಪ್ರತಾಪ್ಸಿಂಹ ವ್ಯಂಗ್ಯವಾಡಿದ್ದಾರೆ. ಮೈಸೂರಿನ ರೈಲು ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಬರ್ಟ್ವಾದ್ರಾ ಎಂಬ ಕರಪ್ಷನ್ ಬ್ಯಾಗೇಜ್ ಹಿಡಿದು ಕೊಂಡು ಪ್ರಿಯಾಂಕಾಗಾಂಧಿ ರಾಜಕೀಯಕ್ಕೆ ಬರುತ್ತಿದ್ದಾರೆ ಎಂದರು. ಉತ್ತರ ಪ್ರದೇಶದಲ್ಲಿ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಕಾಂಗ್ರೆಸ್ ಅನ್ನು ತಮ್ಮ ಜೊತೆ ಸೇರಿಸಿಕೊಳ್ಳುತ್ತಿಲ್ಲವಾದ್ದರಿಂದ ಅಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ಪ್ರಿಯಾಂಕಾ ಗಾಂಧಿಯಿಂದ…
20 ಕೋಟಿ ವೆಚ್ಚದಲ್ಲಿ ಮೈಸೂರು ರೈಲು ನಿಲ್ದಾಣ ಅಭಿವೃದ್ಧಿ: ಸಿಂಹ
January 17, 2019ಮೈಸೂರು: 20 ಕೋಟಿ ರೂ. ಅನುದಾನದಲ್ಲಿ ಮೈಸೂರು ಕೇಂದ್ರ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಇಂದಿಲ್ಲಿ ತಿಳಿಸಿದ್ದಾರೆ. ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದಲ್ಲಿ ವಿಶ್ವ ಮಾನವ ರೈಲು ಗಾಡಿಯ ಸೇವೆಯ ಅಂತರ ವಿಸ್ತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈಗಾ ಗಲೇ ಮೈಸೂರು ರೈಲು ನಿಲ್ದಾಣದ ಅಭಿ ವೃದ್ಧಿ, ಹೊಸ ರೈಲು ಗಾಡಿಗಳ ವಿಸ್ತರಣೆ ಹಾಗೂ ನಾಗನಹಳ್ಳಿ ಬಳಿ ಸ್ಯಾಟಲೈಟ್ ರೈಲು ಟರ್ಮಿನಲ್ಗಳಂತಹ ಮಹತ್ವದ ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ಇದೀಗ ಮೈಸೂರು ಕೇಂದ್ರ…
ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ವಿಮಾ ಕಾರ್ಡ್ ವಿತರಣೆ
January 6, 2019ಮೈಸೂರು: ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ನೆರವಿ ನೊಂದಿಗೆ ಜಾರಿಗೆ ತಂದಿರುವ ‘ಆಯುಷ್ಮಾನ್ ಭಾರತ’-ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಕಾರ್ಡು ಹೊಂದಿ ರುವ ಎಲ್ಲ ಕುಟುಂಬಗಳಿಗೆ ಆರೋಗ್ಯ ವಿಮಾ ಕಾರ್ಡ್ಗಳನ್ನು ವಿತರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರತಿಯೊಬ್ಬ ಪ್ರಜೆಗೂ ಉಚಿತ ಆರೋಗ್ಯ ಸೇವೆ ಒದಗಿಸಬೇ ಕೆಂಬ ಸದುದ್ದೇಶದಿಂದ ಜಾರಿಗೆ ತಂದಿ ರುವ ಯೋಜನೆಗೆ…
ಚೆನ್ನೈ-ಬೆಂಗಳೂರು ಸೂಪರ್ ಫಾಸ್ಟ್ ರೈಲು ಮೈಸೂರಿಗೆ, ಇತರೆ ಮೂರು ರೈಲು ಅಶೋಕಪುರಂ ಸ್ಟೇಷನ್ಗೆ ವಿಸ್ತರಣೆ
December 27, 2018ಮೈಸೂರು: ಚೆನ್ನೈ-ಬೆಂಗಳೂರು ಸೂಪರ್ ಫಾಸ್ಟ್ ರೈಲು ಮೈಸೂರಿಗೂ ಹಾಗೂ ಮೈಸೂರು-ಬೆಂಗಳೂರು ನಡುವೆ ಈಗಾಗಲೇ ಸಂಚರಿಸುತ್ತಿರುವ ರೈಲುಗಳ ಪೈಕಿ 3 ರೈಲುಗಳ ಸೇವೆಯನ್ನು ಮೈಸೂರಿನ ಅಶೋಕಪುರಂವರೆಗೆ ವಿಸ್ತರಿಸುವ ಭರವಸೆಯನ್ನು ಕೇಂದ್ರದ ರೈಲ್ವೆ ಸಚಿವ ಪಿಯೂಷ್ ಗೋಯಲ್ ನೀಡಿದ್ದಾರೆ. ಇಂದು ಮೈಸೂರಿಗೆ ಆಗಮಿಸಿದ್ದ ಸಚಿವರಿಗೆ ಸಂಸದ ಪ್ರತಾಪ್ ಸಿಂಹ ಅವರು ಮನವಿ ಸಲ್ಲಿಸಿ, ಸಾಂಸ್ಕೃತಿಕ ನಗರಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಪ್ರವಾಸಿಗರಿಗೆ ಅನುಕೂಲವಾಗುವಂತೆ ಹಾಲಿ ಚೆನ್ನೈ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ಅನ್ನು ಮೈಸೂರಿಗೆ ವಿಸ್ತರಿಸುವಂತೆ ಕೋರಿದರು. ಅಲ್ಲದೆ ಈಗಾಗಲೇ…