ದ್ವಿಚಕ್ರ ವಾಹನಗಳ ದುರಸ್ತಿದಾರರ ಕುಂದು ಕೊರತೆ ಸಭೆಯಲ್ಲಿ ಸಂಸದ ಪ್ರತಾಪ ಸಿಂಹ ವಿಷಾದ ಪ್ರಧಾನಿ ಮೋದಿ ನೆರವಿಂದ ರಸ್ತೆ, ರೈಲು, ವಿಮಾನ ಸಂಪರ್ಕ ಸುಧಾರಣೆ ಮೈಸೂರು: ಮೈಸೂರಿನ ಅಭಿವೃದ್ಧಿಗೆ ಬೇರೆ ಜಿಲ್ಲೆ, ರಾಜ್ಯಗಳಿಂದ ಬೆಸೆಯುವ ಸಂಪರ್ಕದ್ದೆ ಸಮಸ್ಯೆಯಾಗಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ನಜರ್ಬಾದಿನ ವಿ.ಕೆ.ಹಾಲ್ನಲ್ಲಿ ಮೈಸೂರು ದ್ವಿಚಕ್ರ ವಾಹನಗಳ ದುರಸ್ತಿದಾರರ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಕುಂದು-ಕೊರತೆಗಳ ಸಭೆಯಲ್ಲಿ ಅವರು ಮಾತನಾಡಿದರು. ಮೈಸೂರಿನ ಸಮಗ್ರ ಅಭಿವೃದ್ಧಿಗೆ ಇತರೆ ನಗರ ಮತ್ತು ರಾಜ್ಯಗಳ ಸಂಪರ್ಕ ಕಲ್ಪಿಸುವ ರಸ್ತೆಗಳ…
ರವಿವರ್ಮ ಚಿತ್ರಕಲಾ ಶಾಲೆಯಲ್ಲಿ ಮುರಳಿಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
July 12, 2018ಮೈಸೂರು: ಮೈಸೂರಿನ ಚಾಮುಂಡಿಪುರಂನಲ್ಲಿರುವ ರವಿವರ್ಮ ಚಿತ್ರಕಲಾ ಶಾಲೆಯಲ್ಲಿ ಟಿ.ಎಸ್.ಮುರಳಿಯವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಪ್ರದರ್ಶನವನ್ನು ಉದ್ಘಾಟಿಸಿದ ಸಂಸದ ಪ್ರತಾಪ್ ಸಿಂಹ, ಕಲೆ ಮತ್ತು ಸಾಹಿತ್ಯ ಎಲ್ಲರಿಗೂ ಒಲಿಯುವುದಿಲ್ಲ. ಅದಕ್ಕೆ ಕಠಿಣ ಪರಿಶ್ರಮ ಅಗತ್ಯವಾಗಿದ್ದು, ಏಕಚಿತ್ತದಿಂದ ಕಲಿತರೆ ಮಾತ್ರ ಸಾಧ್ಯವಾಗುತ್ತದೆ. ಕಲ್ಪನೆಯಲ್ಲಿ ಮೂಡುವ ಅಮೂರ್ತ ರೂಪದ ಸ್ಥಳಗಳನ್ನು ಮೂರ್ತರೂಪಕ್ಕೆ ತರುವ ಕೆಲಸ ಟಿ.ಎಸ್.ಮುರಳಿಯವರಿಂದ ಮಾತ್ರ ಸಾಧ್ಯವಾಗಿದೆ ಮೈಸೂರಿನ ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯವನ್ನು ಚಿತ್ರಿಸಿರುವುದು ಶ್ಲಾಘನೀಯ ಎಂದು ಕಲಾವಿದ ಟಿ.ಎಸ್.ಮುರುಳಿಯವರನ್ನು ಅಭಿನಂದಿಸಿದರು. 40 ಬಗೆಯ ಕಲಾಕೃತಿಗಳು- 5 ದಿನಗಳು…
ವಿಶೇಷ ಸೀರೆಗಳ ಪ್ರದರ್ಶನ, ಮಾರಾಟ `ಸಿಲ್ಕ್ ಇಂಡಿಯಾ-2018ಕ್ಕೆ’ ಚಾಲನೆ
July 12, 2018ಮೈಸೂರು: ನಂಜರಾಜ ಬಹದ್ದೂರ್ ಛತ್ರದಲ್ಲಿ ಹಸ್ತಶಿಲ್ಪಿ ಸಂಸ್ಥೆಯು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ 6 ದಿನಗಳ ಕಾಲ ಆಯೋಜಿಸಿರುವ ಬೃಹತ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ `ಸಿಲ್ಕ್ ಇಂಡಿಯಾ-2018’ಕ್ಕೆ ಬುಧವಾರ ಚಾಲನೆ ದೊರೆಯಿತು. ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚೀಪುರಂ ವರೆಗಿನ ರೇಷ್ಮೆ ಸೀರೆ ಉತ್ಪಾದಕರು, ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು ಭಾಗವಹಿಸಿದ್ದು, ದೇಶದ 20ಕ್ಕೂ ಹೆಚ್ಚು ರಾಜ್ಯಗಳ ನೇಕಾರರು, ಕುಶಲಕರ್ಮಿಗಳು ಉತ್ಪಾದಿಸುವ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಟೆಟ್ ಸಿಲ್ಕ್ ಸೀರೆಗಳು, ಅರಿಣ ರೇಷ್ಮೆ…
ಸೆಪ್ಟೆಂಬರ್ನಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ಆರಂಭ
July 12, 2018ಮೈಸೂರು: ಕೇಂದ್ರ ಸರ್ಕಾರದ ಅನುದಾನದಲ್ಲಿ ಬೆಂಗಳೂರು-ಮೈಸೂರು ನಡುವೆ 10 ಪಥದ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಾಣ ಮಾಡುತ್ತಿದ್ದು, ಸೆಪ್ಟೆಂಬರ್ನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು. ನಂಜರಾಜ ಬಹದ್ದೂರ್ ಛತ್ರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಸಂಪರ್ಕ ಕಲ್ಪಿಸುವುದು ದೊಡ್ಡ ಸಮಸ್ಯೆಯಾಗಿತ್ತು. ಹಾಗಾಗಿ 2014ರಲ್ಲಿ ನರೇಂದ್ರಮೋದಿಯವರು ಪ್ರಧಾನಿಯಾದ ನಂತರ ಮೈಸೂರು-ಬೆಂಗಳೂರು ನಡುವಿನ ಜೋಡಿಹಳಿ ರೈಲುಮಾರ್ಗ ಪೂರ್ಣ ಮತ್ತು ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗಿದೆ ಎಂದರು. ಹಾಗೆಯೇ ರಸ್ತೆಯ ಮೇಲಿನ ಒತ್ತಡವನ್ನು ತಗ್ಗಿಸಲು ಬೆಂಗಳೂರಿನ ಕೆಂಗೇರಿಯ ನೈಸ್ ರಸ್ತೆ…
ಕ್ಯಾನ್ಸರ್ ರೋಗಿ ಚಿಕಿತ್ಸೆಗೆ ಸಂಸದ ಪ್ರತಾಪ್ಸಿಂಹ ನೆರವು
July 10, 2018ಮೈಸೂರು: ಸಂಸದ ಪ್ರತಾಪ್ ಸಿಂಹ ಅವರು, ಕ್ಯಾನ್ಸರ್ನಿಂದ ಬಳಲುತ್ತಿರುವ ಮತ್ತೋರ್ವರ ಚಿಕಿತ್ಸೆಗೆ ನೆರವಾಗಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಕೆ.ಪ್ರಕಾಶ್ ಅವರ ಪತ್ನಿ ವಿಜಯಾ ಅವರ ಚಿಕಿತ್ಸೆಗೆ `ಪ್ರಧಾನ ಮಂತ್ರಿಯವರ ಪರಿಹಾರ ನಿಧಿ’ಯಿಂದ 72,375 ರೂಗಳನ್ನು ಬಿಡುಗಡೆ ಮಾಡಿಸಿ, ಹಸ್ತಾಂತರಿಸಿದ್ದಾರೆ. ಸುಮಾರು 65ರ ವಯೋಮಾನದ ವಿಜಯಾ ಅವರು, ಹಲವು ತಿಂಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು, ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇವರ ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿರುವುದರಿಂದ ಸಂಸದ ಪ್ರತಾಪ್ಸಿಂಹ ಅವರನ್ನು ಭೇಟಿಯಾಗಿ, ಸಹಾಯ ಕೋರಿದ್ದರು. ಇದಕ್ಕೆ…
ಮೋದಿ ಮತ್ತಷ್ಟು ಕಾಲ ಪ್ರಧಾನಿಯಾಗಿರಬೇಕು
July 8, 2018ಮೈಸೂರು: ದೇಶದ ಅಭಿವೃದ್ಧಿ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇನ್ನಷ್ಟು ಕಾಲ ಪ್ರಧಾನಿಯಾಗಿರಬೇಕು ಎಂದು ಮೈಸೂರು ರಾಜವಂಶದ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದಿಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರಿಂದ ಕೇಂದ್ರ ಸರ್ಕಾರದ ಸಾಧನಾ ವಿವರವುಳ್ಳ ಕೈಪಿಡಿ ಸ್ವೀಕರಿಸಿದ ಅವರು, ಮೈಸೂರು ಅರಮನೆ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಈಗಷ್ಟೇ ಪ್ರತಾಪ್ ಸಿಂಹ ಅವರು ಕಳೆದ ನಾಲ್ಕೂವರೆ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಜನಪರ ಯೋಜನೆಗಳನ್ನು…
ಮೈಸೂರು ರಿಂಗ್ ರಸ್ತೆ ಬೀದಿ ದೀಪ ಇನ್ನು ಮೂರು ತಿಂಗಳ ಕಾಲ ಮುಡಾ ನಿರ್ವಹಣೆ
July 6, 2018ಸಂಸದ ಪ್ರತಾಪ್ ಸಿಂಹ ನೇತೃತ್ವದ ಮುಡಾ, ಪಾಲಿಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಮೈಸೂರು: ಮೈಸೂರಿನ ರಿಂಗ್ ರಸ್ತೆಯ ಬೀದಿ ದೀಪ ನಿರ್ವಹಣೆಯನ್ನು ಮೂರು ತಿಂಗಳ ಅವಧಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಹಿಸಿಕೊಳ್ಳಲು ಸಂಸದ ಪ್ರತಾಪ್ ಸಿಂಹ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ಸದ್ಯ ಈ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ವರ್ಷದ ಹಿಂದೆಯಷ್ಟೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ತನ್ನ ಉಸ್ತುವಾರಿಯಲ್ಲಿದ್ದ ಮೈಸೂರು ರಿಂಗ್ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ…
ಮೈಸೂರು ವಿವಿ ಕ್ರಾಫರ್ಡ್ ಭವನ ಬಳಿ, ಕಾರ್ಎಸ್ ರಸ್ತೆ ರೇಲ್ವೆ ಲೆವೆಲ್ ಕ್ರಾಸಿಂಗ್ನಲ್ಲಿ ಮೇಲ್ಸೆತುವೆ, ಕೆಳ ಸೇತುವೆ ನಿರ್ಮಾಣ ಸಂಬಂಧ ಸಂಸದ ಪ್ರತಾಪ್ ಸಿಂಹ ಚರ್ಚೆ
July 5, 2018ಮೈಸೂರು: ಸುಗಮ ಸಂಚಾರಕ್ಕೆ ಅನುವು ಮಾಡುವ ನಿಟ್ಟಿನಲ್ಲಿ ಮೈಸೂರು ವಿವಿ ಕ್ರಾಫರ್ಡ್ ಭವನ ಹಿಂಭಾಗ ಹಾಗೂ ಕೆಆರ್ಎಸ್ ರಸ್ತೆಯಲ್ಲಿ ಹಾದು ಹೋಗಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ಗಳಿಗೆ ಮೇಲ್ಸೆತುವೆ ಇಲ್ಲವೇ ಕೆಳಸೇತುವೆ ನಿರ್ಮಿಸುವ ಸಂಬಂಧ ಸಂಸದ ಪ್ರತಾಪ್ ಸಿಂಹ ಬುಧವಾರ ರೇಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಸಭಾಂಗಣದಲ್ಲಿ ಮೈಸೂರು ಮಹಾನಗರಪಾಲಿಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರೈಲ್ವೆ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿ ಕಾಮಗಾರಿ ಆರಂಭಿಸಲು ಇರುವ ತೊಡಕು ನಿವಾರಣೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ…
ಹಿನಕಲ್ ರಿಂಗ್ರೋಡ್ ಜಂಕ್ಷನ್ನ ಫ್ಲೈಓವರ್ ಕಾಮಗಾರಿ ಅಕ್ಟೋಬರ್ನಲ್ಲಿ ಪೂರ್ಣ
July 4, 2018ಮೈಸೂರು: 2016ರ ಜೂನ್ ಮಾಹೆಯಲ್ಲಿ ಆರಂಭವಾಗಿದ್ದ ಮೈಸೂರಿನ ಹಿನಕಲ್ ರಿಂಗ್ರೋಡ್ ಜಂಕ್ಷನ್ ನಲ್ಲಿ ಫ್ಲೈಓವರ್ ನಿರ್ಮಾಣ ಕಾಮಗಾರಿ 2018ರ ಅಕ್ಟೋಬರ್ ವೇಳೆಗೆ ಪೂರ್ಣ ಗೊಳ್ಳಲಿದೆ. ಗ್ರೇಡ್ ಸೆಪರೇಟರ್ ಹೆಸರಿನಲ್ಲಿ ಆರಂಭವಾಗಿರುವ ಈ ಯೋಜನೆ ಇದೀಗ ಫ್ಲೈಓವರ್ ಆಗಿ ಪರಿವರ್ತನೆಯಾಗಿದ್ದು, 14.81 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗೆ 2016ರ ಏಪ್ರಿಲ್ 27ರಂದು ಕಾರ್ಯಾದೇಶ (Work order) ನೀಡಲಾಗಿತ್ತಾದರೂ, ಸಂಚಾರ ದಟ್ಟಣೆ, ಪೈಪ್ ಲೈನ್ಗಳ ಸ್ಥಳಾಂತರ ಹಾಗೂ ಕೆಲ ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದರಿಂದ ಈ ಯೋಜನಾ ವೆಚ್ಚ 19.4…
ರಿಂಗ್ ರಸ್ತೆಯಲ್ಲಿ ಬಾರ್ಗಳಿಂದ ಅಪಘಾತ: ಸಂಸದ ಪ್ರತಾಪ್ ಸಿಂಹ ಅಸಮಾಧಾನ
July 4, 2018ಮೈಸೂರು: ರಿಂಗ್ ರಸ್ತೆಯಲ್ಲಿ ತಲೆ ಎತ್ತಿರುವ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ವೈನ್ ಸ್ಟೋರ್ಗಳಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿನಕಲ್ ಬಳಿ ರಿಂಗ್ ರೋಡ್ ಜಂಕ್ಷನ್ನಲ್ಲಿ ಫ್ಲೈಓವರ್ ಕಾಮಗಾರಿ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಿಂಗ್ ರಸ್ತೆ ಇರುವುದು ಮೈಸೂರು ನಗರದ ವಾಹನ ದಟ್ಟಣೆ ತಪ್ಪಿಸುವುದಕ್ಕೆ. ಅಪಘಾತಗಳನ್ನು ನಿಯಂತ್ರಿಸಿ ಜನರ ಪ್ರಾಣ ಉಳಿಸಬೇಕೆಂಬ ಉದ್ದೇಶದಿಂದ ನಿರ್ಮಾಣವಾದ ರಿಂಗ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಇಲ್ಲಿ ಬಾರ್ ಮತ್ತು…