ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ ಮುಂಭಾಗದಲ್ಲಿರುವ ರಾಗರಾಗಿಣಿ ಸಂಗೀತ ಮಂಟಪದಲ್ಲಿ ನಮ್ಮ ಕರ್ನಾಟಕ ಸೇನಾ ಪಡೆ ವತಿಯಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಚಾಮುಂಡಿಬೆಟ್ಟದ ಪ್ರಧಾನ ದೀಕ್ಷಿತರಾದ ಡಾ. ಶಶಿ ಶೇಖರ್ ಪುಷ್ಪಾರ್ಚನೆ ಮಾಡಿದರು. ನಂತರ ಮಾತನಾಡಿದ ಅವರು, ಮುಮ್ಮಡಿ ಕೃಷ್ಣರಾಜ ಒಡೆಯರು ಮೈಸೂರು ಮತ್ತು ಚಾಮುಂಡಿಬೆಟ್ಟದ ಅಭಿವೃದ್ಧಿಯನ್ನು ಮಾಡಿದರು. ಮುಮ್ಮಡಿ ಕೃಷ್ಣರಾಜ ಒಡೆಯರು ಚಾಮುಂಡೇಶ್ವರಿ ದೇವಿಯ ಪರಮ ಭಕ್ತರಾಗಿದ್ದರು. ಆದ್ದರಿಂದ ಅವರ…