ಮೈಸೂರು: ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯ ಸುಬ್ಬರಾಯನ ಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಬುಧವಾರ ಮೈಸೂರು ನಗರ ಮತ್ತು ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ 72ನೇ ವರ್ಷದ ಮೈಸೂರು ಚಲೋ ಚಳವಳಿ ನೆನಪು ಕಾರ್ಯಕ್ರಮ ನಡೆಸಲಾಯಿತು. ಮೊದಲಿಗೆ ಉದ್ಯಾನದಲ್ಲಿರುವ ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಳಿಕ ತ್ರಿವರ್ಣ ಧ್ವಜ ಹಾರಿಸಲಾಯಿತು. ನಂತರ ಚಾಮರಾಜ ಜೋಡಿ ರಸ್ತೆ ಮೂಲಕ ರಾಮಸ್ವಾಮಿ ವೃತ್ತದವರೆಗೆ ಮೆರವಣಿಗೆಯಲ್ಲಿ ತೆರಳಿ ಅಲ್ಲಿ ರಾಮಸ್ವಾಮಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ವಾತಂತ್ರ್ಯ…