ಮೈಸೂರು, ಡಿ.8(ಪಿಎಂ)- ಕೇಂದ್ರ ಸರ್ಕಾರ ಜಾರಿಗೊಳಿಸಿ ರುವ ಮೂರು ಕೃಷಿ ಸಂಬಂಧಿತ ಕಾಯ್ದೆಗಳು ರೈತ ವಿರೋಧಿ ಯಾಗಿವೆ ಎಂದು ಆರೋಪಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಮಂಗಳವಾರದ ಭಾರತ ಬಂದ್ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತಲ್ಲದೆ, ಮೈಸೂರು ನಗರದ ಹೃದಯ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಬಂದ್ ಭಾಗಶಃ ಯಶಸ್ವಿಯಾಗಿದೆ. ನಗರದ ಕೇಂದ್ರ ಭಾಗವಾದ ಕೆಆರ್ ವೃತ್ತ, ಜಯಚಾಮ ರಾಜ ಒಡೆಯರ್ ವೃತ್ತ, ದೊಡ್ಡ ಗಡಿಯಾರ ಹಾಗೂ ಚಿಕ್ಕ ಗಡಿಯಾರದಲ್ಲಿ ಮಧ್ಯಾಹ್ನ 12ರವರೆಗೆ ಬಹುತೇಕ ಅಂಗಡಿ…

