ಮೈಸೂರು: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಆರು ಮಂದಿ ಯೋಗ ಸಾಧಕರಿಗೆ ಬುಧವಾರ `ಯೋಗ ಕಲಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಹಿಮಾಲಯ ಕಲಾ ಸಾಹಿತ್ಯ ವೇದಿಕೆ ಹಾಗೂ ಮೈಸೂರು ಯೋಗ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಹಿರಿಯ ಯೋಗಪಟುಗಳಾದ ಮೈಸೂರಿನ ವಿ.ಸೋಮಶೇಖರ್, ರಮೇಶ್, ಕೆಆರ್ ನಗರದ ಪಿ.ಆರ್.ವಿಶ್ವನಾಥಶೆಟ್ಟಿ, ಮೈಸೂರಿನ ಯೋಗಪಟುಗಳಾದ ಶಶಿಕುಮಾರ್, ಎನ್.ಆರ್.ಸಂದೀಪ್, ಕೆ.ಆರ್.ಪಾರ್ವತಮ್ಮ ಅವರಿಗೆ ಯೋಗ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯ ಸಮಾಜ…