ಮೈಸೂರು, ಡಿ.16(ಪಿಎಂ)- ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ದಲಿತ ಸಮುದಾಯದ ಮೇಲೆ ದೌರ್ಜನ್ಯ ನಡೆಸಿದ್ದು, ಈ ಸಂಬಂಧ ಕಠಿಣ ಕಾನೂನು ಕ್ರಮ ಜರುಗಿಸು ವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ದಸಂಸ) ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿ ಸಿದ ಪ್ರತಿಭಟನಾಕಾರರು, ಸಾಲಿಗ್ರಾಮದಲ್ಲಿ ಕ್ಷುಲ್ಲಕ ಕಾರ ಣಕ್ಕೆ ದಲಿತರ ಬಡಾವಣೆಗೆ ನುಗ್ಗಿ ಮನೆಗಳ ಮೇಲೆ ಕಲ್ಲು ಗಳನ್ನು ತೂರಲಾಗಿದೆ. ಮಹಿಳೆಯರು ಮತ್ತು ಮಕ್ಕಳನ್ನು ಎಳೆದಾಡಿ ಮನೆಯಲ್ಲಿದ್ದ ದಿನಬಳಕೆ ವಸ್ತುಗಳನ್ನು ಧ್ವಂಸ ಮಾಡಿ…
ಜೆಎಸ್ಎಸ್ ಮೆಡಿಕಲ್ ಕಾಲೇಜು ಹೌಸ್ ಸರ್ಜನ್ ಡಾ.ಸಾಲ್ವಿಯಾಗೆ ಚಿತ್ರಕಲೆಯಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ
December 17, 2019ಮೈಸೂರು,ಡಿ.16(ಎಸ್ಪಿಎನ್)-ಜೆಎಸ್ಎಸ್ ಮೆಡಿಕಲ್ ಕಾಲೇ ಜಿನ ಹೌಸ್ ಸರ್ಜನ್ ಆಗಿರುವ ಡಾ.ಸಾಲ್ವಿಯಾ ಎಸ್.ರಾಜ್ ಅವರ ‘ಮೇಘಾಲಯದ ಡಬಲ್ ಡೆಕ್ಕರ್ ರೂಟ್ ಬ್ರಿಡ್ಜ್’ ಚಿತ್ರಕಲೆಗೆ ಅಂತರ ರಾಷ್ಟ್ರೀಯ ವಿಶೇಷ ಬಹುಮಾನ ಲಭಿಸಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ದುಷ್ಯಂತ್ ಆರ್ಟ್ ಗ್ಯಾಲರಿ ವತಿಯಿಂದ ಆಯೋಜಿಸಿದ್ದ ಅಂತ ರಾಷ್ಟ್ರೀಯ ಮಟ್ಟದ ಆನ್ಲೈನ್ ಚಿತ್ರ ಕಲಾ (ಲ್ಯಾಂಡ್ಸ್ಕೇಫ್ ಚಿತ್ರಕಲೆ) ಸ್ಪರ್ಧೆಯಲ್ಲಿ ಭಾಗವಹಿಸಿ, ಉದಯೋನ್ಮುಖ ಕಲಾವಿದೆ -2019 ಬಿರುದು ಪಡೆದುಕೊಂಡಿದ್ದಾರೆ. ಈ ಆನ್ಲೈನ್ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ 795 ಮಂದಿ ಚಿತ್ರಕಲಾ ವಿದರು ಭಾಗವಹಿಸಿ ದ್ದರು….
ಸಿಬಿಐ ತನಿಖೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
December 17, 2019ಮೈಸೂರು, ಡಿ.16(ಪಿಎಂ)- ಮೈಸೂರು ವಿವಿಯಲ್ಲಿ ಹಲವು ಅಕ್ರಮಗಳು ನಡೆದಿದ್ದು, ಈ ಸಂಬಂಧ ಸಿಬಿಐ ತನಿಖೆ ನಡೆಸು ವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ವಿವಿಯ ಮುಖ್ಯ ದ್ವಾರದ ಕುವೆಂಪು ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮೈಸೂರು ವಿಶ್ವವಿದ್ಯಾಲಯ ದಲ್ಲಿ 2018-19ನೇ ಸಾಲಿನಲ್ಲಿ 80 ಸಾವಿರಕ್ಕಿಂತ ಹೆಚ್ಚು ಮಂದಿ ಕೆ-ಸೆಟ್ ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ ನೂರಾರು ಅಭ್ಯರ್ಥಿಗಳಿಗೆ ಅರ್ಹತೆ ಇಲ್ಲದಿದ್ದರೂ, ಅರ್ಹತೆ ನೀಡಿ ಅವರನ್ನು ಆಯ್ಕೆ ಮಾಡ ಲಾಗಿದೆ….
ವಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿರುವ ರಾಜೀನಾಮೆ ತಿರಸ್ಕರಿಸಲು ಆಗ್ರಹಿಸಿ ಪತ್ರ ಚಳವಳಿ
December 17, 2019ಮೈಸೂರು, ಡಿ.16(ಪಿಎಂ)- ಮಾಜಿ ಸಿಎಂ ಸಿದ್ದರಾಮಯ್ಯ, ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ತಿರಸ್ಕರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಪತ್ರ ಚಳವಳಿ ನಡೆಸಲಾಯಿತು. ಮೈಸೂರು ನಗರಪಾಲಿಕೆ ಎದುರಿನ ಅಂಚೆ ಪೆಟ್ಟಿಗೆಗೆ ಪತ್ರ ಹಾಕುವ ಮೂಲಕ ರಾಜೀನಾಮೆ ಸ್ವೀಕರಿಸದಂತೆ ಆಗ್ರಹಿಸಲಾಯಿತು. ವೇದಿಕೆ ರಾಜ್ಯಾಧ್ಯಕ್ಷ ಕೆ.ಶಿವರಾಂ ಮಾತನಾಡಿ, ಪ್ರಜಾಪ್ರಭು ತ್ವದ ಉಳಿವಿಗಾಗಿ ಸಿದ್ದರಾಮಯ್ಯನವರು ಪ್ರಸ್ತುತ ರಾಜಕೀಯದಲ್ಲಿ ಮುಂಚೂಣಿಯಲ್ಲಿರ ಬೇಕು. ಇದು ತೀರಾ…
ಮೈಬಿಲ್ಡ್ ವಸ್ತು ಪ್ರದರ್ಶನಕ್ಕೆ ತೆರೆ
December 17, 2019ಮೈಸೂರು, ಡಿ.16(ಎಂಕೆ)- ಮಹಾರಾಜ ಕಾಲೇಜು ಮೈದಾನದಲ್ಲಿ ಬಿಲ್ಡರ್ಸ್ ಅಸೋ ಸಿಯೇಷನ್ ಆಫ್ ಇಂಡಿಯಾ ಮೈಸೂರು ಕೇಂದ್ರ ಆಯೋಜಿಸಿದ್ದ `ಮೈಬಿಲ್ಡ್ 2019’ ಬೃಹತ್ ವಸ್ತು ಪ್ರದರ್ಶನಕ್ಕೆ ಸೋಮವಾರ ತೆರೆಬಿತ್ತು. ಈ ವೇಳೆ ವಸ್ತು ಪ್ರದರ್ಶನದಲ್ಲಿ ತೆರೆಯಲಾಗಿದ್ದ 150ಕ್ಕೂ ಹೆಚ್ಚು ಮಳಿಗೆ ಗಳ ಪೈಕಿ ಉತ್ತಮ ಮಳಿಗೆಗಳಿಗೆ ವಿವಿಧ ವಿಭಾಗಗಳಲ್ಲಿ ಬಹುಮಾನ ನೀಡಲಾಯಿತು. ಪ್ಲಾಟಿನಂ ಸಿಂಗಲ್ ಸ್ಟಾಲ್ ವಿಭಾಗದಲ್ಲಿ ಈ3 ವುಡ್ ಪ್ರಥಮ, ಪಿಯೋನಿಕ್ಸ್ ಗ್ರೂಪ್ ದ್ವಿತೀಯ, ಟಾಟಾ ಪ್ರವೇಶ್ ತೃತೀಯ ಸ್ಥಾನ ಪಡೆದರೆ, ಪ್ಲಾಟಿನಂ ಮಲ್ಟಿ ಸ್ಟಾಲ್ ವಿಭಾಗ…
ನಾಳೆ ಸೈಬರ್ ಭದ್ರತೆ ಕುರಿತ ಸಮ್ಮೇಳನ
December 17, 2019ಮೈಸೂರು, ಡಿ.16(ಆರ್ಕೆಬಿ)- `ಸೈಬರ್ ಸೆಕ್ಯುರಿಟಿ ಮತ್ತು ಐಒಟಿ- ಡೆಸ್ಟಿನೇಷನ್ ಮೈಸೂರು’ ಕುರಿತ ಸಿಐಐ ವಾರ್ಷಿಕ ಐಟಿ/ಐಟಿಇಎಸ್ ಸಮ್ಮೇಳನ ಡಿ.18ರಂದು ಬೆಳಿಗ್ಗೆ 10 ಗಂಟೆಗೆ ಹೆಬ್ಬಾಳದ ಇನ್ಫೋಸಿಸ್ ಬಳಿಯ ಹೋಟೆಲ್ ಕಂಟ್ರಿ ಇನ್ನಲ್ಲಿ ಏರ್ಪಡಿಸಲಾಗಿದೆ ಎಂದು ಸಮ್ಮೇಳನದ sಸಂಚಾಲಕ ಶಂಕರಪ್ರಸಾದ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರನ್ನು ಸೈಬರ್ ಸಿಟಿಯಾಗಿ ಮಾಡಿ ಸೈಬರ್ ಸೆಕ್ಯುರಿಟಿ ಪಾಲಿಸಿ ಯನ್ನು ತರಬೇಕು. ದೇಶದಲ್ಲಿ ಸೈಬರ್ ಸಿಟಿ ಎಂದರೆ ಅದು ಮೈಸೂರು ಎಂಬಂತಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ನಾವು…
ಗೃಹರಕ್ಷಕ ದಳದ ನಿಷ್ಠೆ, ಪ್ರಾಮಾಣಿಕತೆ ಮಾದರಿ
December 17, 2019ಯಳಂದೂರು, ಡಿ.16- ಗೃಹ ರಕ್ಷಕ ದಳದ ಸಿಬ್ಬಂದಿ ನಿಷ್ಠೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಶಾಸಕ ಎನ್.ಮಹೇಶ್ ಬಣ್ಣಿಸಿದರು.ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಗೃಹ ರಕ್ಷಕ ದಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಖಿಲ ಭಾರತ ಗೃಹ ರಕ್ಷಕ ದಳ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ಸಿಬ್ಬಂದಿ ಗಳಿಗಿಂತಲೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿರುವ ಗೃಹ ರಕ್ಷಕ ಸಿಬ್ಬಂದಿ ಗಳಿಗೆ ಯಾವುದೇ ಭದ್ರತೆ ಇಲ್ಲ. ದಿನಗೂಲಿ ನೌಕರರ ರೀತಿಯಲ್ಲಿ…
ಟ್ರಬಲ್ ಶೂಟರ್ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ?
December 16, 2019ಬೆಂಗಳೂರು, ಡಿ.15-ನಾಯಕರ ಕಚ್ಚಾಟದಿಂದ ರಾಜ್ಯದಲ್ಲಿ ಪಕ್ಷದ ಪುನಶ್ಚೇತನಕ್ಕೆ ಕಾಂಗ್ರೆಸ್ ಹೈಕಮಾಂಡ್ ಗಂಭೀರ ಪ್ರಯತ್ನ ಆರಂಭಿಸಿದ್ದು, ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಪಕ್ಷದ ಟ್ರಬಲ್ ಶೂಟರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವ ರಿಗೆ ಕಟ್ಟಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ವಿಪಕ್ಷ ನಾಯಕ ಸ್ಥಾನಕ್ಕೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದಾರೆ….
ಇಂದಿನಿಂದ ಕಾರಂಜಿಕೆರೆ ಉತ್ಸವ ಆರಂಭ
December 16, 2019ಮೈಸೂರು,ಡಿ.15(ಎಂಟಿವೈ)- ಹಲವು ವರ್ಷಗಳ ಬಳಿಕ ಹೂಳೆತ್ತಲಾಗಿರುವ ಮೈಸೂ ರಿನ ಕಾರಂಜಿಕೆರೆ ತುಂಬಿ ತುಳುಕುತ್ತಿರುವ ಹಿನ್ನೆಲೆಯಲ್ಲಿ ಕೆರೆ ಸಂರಕ್ಷಣೆಯ ಮಹತ್ವ, ಪರಿಸರ ಸಮತೋಲನ ಕಾಪಾಡುವಲ್ಲಿ ಕೆರೆ ಗಳು ನಿರ್ವಹಿಸುವ ಪಾತ್ರ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾಳೆ (ಡಿ.16) ಬೆಳಿಗ್ಗೆ 10 ಗಂಟೆಗೆ ಎರಡು ದಿನಗಳ `ಕಾರಂಜಿಕೆರೆ ಉತ್ಸವ’ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಸಾರ್ವಜನಿಕ ರಿಗೆ ಕೆರೆ ಪರಿಸರ, ಜೀವ ವೈವಿಧ್ಯತೆ ಕುರಿತಂತೆ ಮಾಹಿತಿ ನೀಡಲು ಕಾರಂಜಿಕೆರೆ ಉತ್ಸವ ಆಯೋಜಿಸಲಾಗಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು, ಪರಿಸರ ಪ್ರೇಮಿಗಳು…
ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್
December 16, 2019ಬೆಂಗಳೂರು, ಡಿ.15- ಕಳೆದ 5 ದಿನ ಗಳಿಂದ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ. ಈ ಸಂದರ್ಭದಲ್ಲಿ ಆಸ್ಪ ತ್ರೆಯ ವೈದ್ಯರ ಜೊತೆಗೆ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ನಾನೀಗ ಸಂಪೂರ್ಣ ಗುಣಮುಖ ನಾಗಿದ್ದೇನೆ, ಒಂದು ವಾರಗಳ ಕಾಲ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಇನ್ನೊಂದು ವಾರ ಮನೆಯಲ್ಲಿದ್ದು ನಂತರ ಎಂದಿನಂತೆ ರಾಜಕೀಯ ಜೀವನಕ್ಕೆ ಮರಳುವುದಾಗಿ ಹೇಳಿದರು. ನನಗೆ 2000ನೇ ಇಸವಿ ಆಗಸ್ಟ್ ತಿಂಗ ಳಲ್ಲಿ ಎರಡೂ…










