ಮೈಸೂರು: ಬಿಜೆಪಿ ನಾಯಕರಲ್ಲಿ ಯಾವುದೇ ಭಿನ್ನಮತವಿಲ್ಲ. ರಾಜ್ಯದಲ್ಲಿ ಬಿಜೆಪಿ ಸ್ಥಿರ ಹಾಗೂ ಅಭಿವೃದ್ಧಿ ಪರ ಸರ್ಕಾರ ನೀಡಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಾಮುಂಡಿಬೆಟ್ಟಕ್ಕೆ ತೆರಳಲು ಮೈಸೂರಿಗೆ ಆಗಮಿಸಿದ್ದ ಅವರು ಬುಧವಾರ ಪತ್ರಕರ್ತ ರೊಂದಿಗೆ ಮಾತನಾಡಿ, ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯಕ್ಕೆ ಒಳ್ಳೆಯದಾಗ ಲೆಂದು ಪ್ರಾರ್ಥಿಸಿದ್ದೇನೆ. ರಾಜ್ಯಕ್ಕೆ ಮಳೆ ಬೆಳೆ ಸಮೃದ್ಧಿಯಾಗಲೆಂದು ಪೂಜೆ ಸಲ್ಲಿಸಿದ್ದೇನೆ. ಮುಂದಿನ ದಿನಗಳಲ್ಲಿ ಒಳಿ ತಾಗಲಿದೆ ಎಂಬ ನಂಬಿಕೆ ಎಂದರು. ಕಳೆದ ವಿಧಾನಸಭಾ…
ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದೇನೆ: ಬಿಎಸ್ವೈ
July 25, 2019ಬೆಂಗಳೂರು, ಜು.24- ರಾಜ್ಯದಲ್ಲಿ 14 ತಿಂಗಳ ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿದ್ದು, ನೂತನ ಸರ್ಕಾರ ರಚಿಸಲು ಸಿದ್ಧರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂ ರಪ್ಪ ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದಾರೆ. ರಾಜ್ಯ ದಲ್ಲಿ ಮೈತ್ರಿ ಸರ್ಕಾರ ಪತನಗೊಂಡಿದ್ದು, ಪರ್ಯಾಯ ಸರ್ಕಾರ ರಚನೆಯ ಹಕ್ಕು ಮಂಡಿಸುವ ಸಂಬಂಧ ಪಕ್ಷದ ಕೇಂದ್ರ ನಾಯಕರ ಸೂಚನೆಗಾಗಿ ಕಾಯುತ್ತಿರುವುದಾಗಿ ಯಡಿಯೂರಪ್ಪ ಅವರು ಬುಧವಾರ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಾಗೆ ಭೇಟಿ ನೀಡಿ, ಆರ್ ಎಸ್ಎಸ್ ನಾಯಕ ರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ…
ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ `9’ರ ಕಂಟಕ ಸಾಬೀತಾಗಿದೆಮಾಜಿ ಸಚಿವ ಎ.ಮಂಜು
July 25, 2019ಮೈಸೂರು,ಜು.24(ಎಂಟಿವೈ)-ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ 9ರ ಕಂಟಕವಿದೆ ಎಂದು ನಾನು ಮೊದಲೇ ಹೇಳಿದ್ದೆ. ಅದು ಸಾಬೀತಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎ.ಮಂಜು ಹೇಳಿದರು. ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಬುಧ ವಾರ ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದ ಅವರು, ದೇವಿಯ ದರ್ಶನ ಪಡೆದ ಬಳಿಕ ಪತ್ರಕರ್ತ ರೊಂದಿಗೆ ಮಾತನಾಡಿ, 1999, 2009, 2019ರಲ್ಲಿ ನಡೆದ ಚುನಾವಣೆಯಲ್ಲಿ ಗೌಡರ ಕುಂಟುಂಬಕ್ಕೆ ಸೋಲಾಗಿದೆ. ಅವರ ಕುಟುಂಬಕ್ಕೆ 9 ಸರಿ ಬರುವು ದಿಲ್ಲ ಎಂದಿದ್ದೆ. ಅದು ಇಂದು ಸಾಬೀತಾಗಿದೆ. ಎಲ್ಲರಿಗೂ ದೇವರು ಇರುತ್ತಾರೆ….
ಮೈಸೂರಿನ ವಿವಿಧೆಡೆ ಚಾಮುಂಡೇಶ್ವರಿ ತಾಯಿ ವರ್ಧಂತಿ ಆಚರಣೆ
July 25, 2019ಮೈಸೂರು,ಜು.24(ಎಂಟಿವೈ)- ಸಾಂಸ್ಕøತಿಕ ನಗರಿ ಮೈಸೂರಿನ ವಿವಿಧೆಡೆ ಬುಧವಾರ ಚಾಮುಂಡೇಶ್ವರಿ ತಾಯಿ ವರ್ಧಂತಿ ಮಹೋತ್ಸವ ವಿಜೃಂಭಣೆ ಯಿಂದ ನೆರವೇರಿಸಿ, ಸಾರ್ವಜನಿಕರಿಗೆ ಪ್ರಸಾದ ವಿನಿಯೋಗಿಸಲಾಯಿತು. ಚಾಮುಂಡಿಬೆಟ್ಟದಲ್ಲಿ ವರ್ಧಂತಿ ಮಹೋತ್ಸವ ವೈಭವದಿಂದ ಜರುಗಿದರೆ, ಮೈಸೂರಿನ ವಿವಿಧ ದೇವಾಲಯಗಳು, ಆಟೋ ನಿಲ್ದಾಣ, ವಿವಿಧ ಬಡಾವಣೆಗಳ ಯುವಕರ ಸಂಘ, ಭಕ್ತರ ತಂಡಗಳು ಚಾಮುಂಡೇಶ್ವರಿ ದೇವಿಯ ಭಾವಚಿತ್ರವನ್ನು ಅಲಂಕರಿಸಿ ಪೂಜಿಸುವ ಮೂಲಕ ಭಕ್ತಿ ಪ್ರದರ್ಶಿಸಿದರು. ಮೈಸೂರಿನ ಕೆಜಿ ಕೊಪ್ಪಲಿನಲ್ಲಿರುವ ಚಾಮುಂಡೇಶ್ವರಿ ದೇವಾಲಯದಲ್ಲಿ ವರ್ಧಂತಿ ಮಹೋತ್ಸವವು ವಿಜೃಂಭಣೆ ಯಿಂದ ನಡೆಯಿತು. ದೇವಸ್ಥಾನವನ್ನು ವಿವಿಧ ಹೂವುಗಳಿಂದ ಅಲಂಕರಿಸ ಲಾಗಿತ್ತು….
ಒಂದೇ ಟಿಕೆಟ್ನಲ್ಲಿ ಅರಮನೆ, ಮೃಗಾಲಯ ವೀಕ್ಷಣೆ ವ್ಯವಸ್ಥೆ ಕುರಿತು ಚರ್ಚಿಸುವಂತೆ ಅಧಿಕಾರಿಗಳಿಗೆ ಪ್ರವಾಸೋದ್ಯಮ ಕಾರ್ಯದರ್ಶಿ ಸೂಚನೆ
July 25, 2019ಮೈಸೂರು,ಜು.24(ವೈಡಿಎಸ್)-ಪ್ರವಾಸಿ ಗರು ಒಂದೇ ಟಿಕೆಟ್ನಲ್ಲಿ ಅರಮನೆ ಮತ್ತು ಮೃಗಾಲಯ ವೀಕ್ಷಿಸುವಂತೆ ಮಾಡುವ ಕುರಿತು ಚರ್ಚಿಸುವಂತೆ ಪ್ರವಾಸೋಧ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಮೈಸೂರು ಅರಮನೆ ಮಂಡಳಿಯ ಸಭಾಂಗಣದಲ್ಲಿ ಬುಧವಾರ ನಡೆದ ಅರ ಮನೆ-ಮೃಗಾಲಯದ ಅಧಿಕಾರಿಗ ಳೊಂದಿಗಿನ ಸಭೆಯಲ್ಲಿ ಪ್ರವಾಸಿಗರು ಒಂದೇ ಬಾರಿಗೆ ಟಿಕೆಟ್ ಪಡೆದು ಅರಮನೆ ಮತ್ತು ಮೃಗಾಲಯ ವೀಕ್ಷಿಸಲು ಅನುವು ಮಾಡಿಕೊಡುವ ಬಗ್ಗೆ, ಆನ್ಲೈನ್ನಲ್ಲಿ ಟಿಕೆಟ್ ಹೆಚ್ಚು ಖರೀದಿರುವಂತೆ ಮಾಡಲು ಯಾವ ಕ್ರಮ ವಹಿಸಬೇಕು ಮತ್ತಿತರೆ ವಿಷಯಗಳ ಕುರಿತು ಚರ್ಚಿಸಲಾಯಿತು. ಈ ವೇಳೆ…
ಮಾಜಿ ಸಚಿವ ವಿಶ್ವನಾಥ್ ವಿರುದ್ಧ ಹೇಳಿಕೆ: ಸಾರಾ ಮಹೇಶ್ ಬಹಿರಂಗ ಕ್ಷಮೆ ಯಾಚನೆಗೆ ಜೆಡಿಎಸ್ ಮುಖಂಡರ ಆಗ್ರಹ
July 25, 2019ಮೈಸೂರು,ಜು.24(ಪಿಎಂ)-ಶಾಸಕ ಎ.ಹೆಚ್.ವಿಶ್ವನಾಥ್ ಅವರ ಕುರಿತು ಮಾಜಿ ಸಚಿವ ಸಾ.ರಾ.ಮಹೇಶ್ ತೇಜೋವಧೆ ಮಾಡಿದ್ದು, ಕೂಡಲೇ ಸಾ.ರಾ. ಮಹೇಶ್ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಜೆಡಿಎಸ್ ನಗರ ಪ್ರಧಾನ ಕಾರ್ಯದರ್ಶಿ ರೇವಣ್ಣ ಆಗ್ರಹಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಮತ್ತು ರಾಜಕಾರಣದ ಜೀವನದಲ್ಲಿ ಎಂದೂ ಕಪ್ಪು ಚುಕ್ಕೆ ಹೊಂದದ ಎ.ಹೆಚ್.ವಿಶ್ವನಾಥ್ ಅವರ ಬಗ್ಗೆ ಲಘುವಾಗಿ ಸಾ.ರಾ.ಮಹೇಶ್ ಮಾತನಾಡಿದ್ದಾರೆ. ವಿಶ್ವನಾಥ್ ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಸಾ.ರಾ.ಮಹೇಶ್ ಅವರಿಗಿಲ್ಲ ಎಂದರು. ಸಾ.ರಾ.ಮಹೇಶ್ ಈ…
ಇನ್ನು ಮುಂದೆ ಡಿಎಲ್ ಪಡೆಯಲು 8ನೇ ತರಗತಿ ವಿದ್ಯಾರ್ಹತೆ ಕಡ್ಡಾಯವಿಲ್ಲ
July 25, 2019ಮೈಸೂರು, ಜು. 24(ಆರ್ಕೆ)- ವಾಹನ ಚಾಲಕರಿಗಿದು ಸಿಹಿ ಸುದ್ದಿ. ಇನ್ನು ಮುಂದೆ ಚಾಲನಾ ಪರವಾನಗಿ (ಡಿಎಲ್) ಪಡೆಯಲು 8ನೇ ತರಗತಿ ವಿದ್ಯಾರ್ಹತೆ ಕಡ್ಡಾಯವಿಲ್ಲ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರವು, ಆಟೋ, ಲಾರಿ, ಟ್ಯಾಕ್ಸಿ ಹಾಗೂ ಇನ್ನಿತರ ವಾಹನಗಳ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಜಾರಿಯಲ್ಲಿದ್ದ 8ನೇ ತರಗತಿ ಓದಿರ ಬೇಕೆಂಬ ನಿಯಮವನ್ನು ತೆಗೆದು ಹಾಕಿದೆ ಎಂದು ತಿಳಿಸಿದ್ದಾರೆ. ಕೇಂದ್ರ ರಸ್ತೆ ಸಾರಿಗೆ…
ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಯುವರಾಜ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
July 25, 2019ಮೈಸೂರು,ಜು.24(ಎಂಟಿವೈ)- ಉಪ ನ್ಯಾಸಕರ ಕೊರತೆ ನೀಗಿಸಿ ಕೂಡಲೇ ಉಪ ನ್ಯಾಸಕರ ನೇಮಕ ಮಾಡಿ, ವಿದ್ಯಾರ್ಥಿ ಗಳಿಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಯುವರಾಜ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ತರಗತಿ ಬಹಿಷ್ಕರಿಸಿ ಕಾಲೇಜು ಆವ ರಣದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾಲೇಜು ಆರಂಭವಾಗಿ ಒಂದು ತಿಂಗಳಾದರೂ ಉಪನ್ಯಾಸಕರ ಕೊರತೆ ಯಿಂದ ತರಗತಿಗಳು ಸರಿಯಾಗಿ ನಡೆಯು ತ್ತಿಲ್ಲ. ಸಿಲಬಸ್ ಮುಗಿಯದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿದಿನ ಕಾಲೇಜಿಗೆ ಬಂದು ತರಗತಿಗಳಿಲ್ಲದೆ ವಾಪಸ್ ತೆರಳುವಂತಾಗಿದೆ. ಅಲ್ಲದೆ ಅತಿಥಿ ಉಪ…
ಕಡ್ಡಾಯ ವರ್ಗಾವಣೆ ರದ್ಧತಿಗೆ ಆಗ್ರಹಿಸಿ ಪ್ರೌಢಶಾಲಾ ಶಿಕ್ಷಕರ ಪ್ರತಿಭಟನೆ
July 25, 2019ಮೈಸೂರು,ಜು.24(ಎಂಟಿವೈ)- ಅವೈಜ್ಞಾನಿಕ ಕಡ್ಡಾಯ ವರ್ಗಾವಣೆ ಪದ್ದತಿ ರದ್ದು ಗೊಳಿಸಿ, ಪರಸ್ಪರ ಮತ್ತು ಕೋರಿಕೆ ವರ್ಗಾವಣೆಗೆ ಅವಕಾಶ ಮಾಡಿ ಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಮೈಸೂರು ಜಿಲ್ಲೆಯ ಪ್ರೌಢ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು. ಮೈಸೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯ ಮುಂಭಾಗ ಬುಧ ವಾರ ಪ್ರತಿಭಟನೆ ನಡೆಸಿದ ಶಿಕ್ಷಕರು, ಬೇರಾವುದೇ ಇಲಾಖೆಯಲ್ಲಿ ಇಲ್ಲದ ವರ್ಗಾ ವಣೆ ನೀತಿಯನ್ನು ಶಿಕ್ಷಕರಿಗೆ ಮಾತ್ರ ಜಾರಿಗೆ ತಂದಿದೆ. ಅವೈಜ್ಞಾನಿಕ ವರ್ಗಾ ವಣೆ ಶಿಕ್ಷಕರಿಗೆ ಶಿಕ್ಷೆಯಾಗಿ ಪರಿಣಮಿಸಿದೆ….
ಆ.25ರಿಂದ 27ರವರೆಗೆ ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಟ್ರಾವೆಲ್ ಎಕ್ಸ್ಪೋ
July 25, 2019ಮೈಸೂರು, ಜು.24 (ಆರ್ಕೆ)- ಆಗಸ್ಟ್ 25ರಿಂದ 27ರವರೆಗೆ ಬೆಂಗಳೂ ರಿನ ದಿ ಲಲಿತ ಅಶೋಕ ಹೋಟೆಲಿನಲ್ಲಿ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ-2019(ಏIಖಿಂ) ಏರ್ಪಡಿ ಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ತಿಳಿಸಿದ್ದಾರೆ. ಎಕ್ಸ್ಪೋ ಹಿನ್ನೆಲೆಯಲ್ಲಿ ಮೈಸೂರಿನ ಲಲಿತಮಹಲ್ ಪ್ಯಾಲೇಸ್ ಹೋಟೆಲ್ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಪೂರ್ವಭಾವಿ `ಕನೆಕ್ಟ್’ ಕಾರ್ಯಕ್ರಮ ಉದ್ಘಾಟಿಸಿದ ಅವರು, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಏSಖಿಆಅ) ಹಾಗೂ ಕರ್ನಾಟಕ ಟೂರಿಸಂ ಸೊಸೈಟಿ(ಏಖಿS) ಸಂಯುಕ್ತಾಶ್ರಯದಲ್ಲಿ 3…










