ಹಾಸನ: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಮಾರ್ಗ ದರ್ಶನದಂತೆ ಮಂಡ್ಯ ಲೋಕಸಭಾ ಕ್ಷೇತ್ರ ಅಭ್ಯರ್ಥಿ ನಿಖಿಲ್ ತಾಯಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಬುಧ ವಾರ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಳೇಕೋಟೆಯಲ್ಲಿನ ಬೆಟ್ಟದ ರಂಗನಾಥಸ್ವಾಮಿ ಹಾಗೂ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ನಿಖಿಲ್ ಮಾತನಾಡಿ, ಫಲಿತಾಂಶದ ಬಗ್ಗೆ ಯಾವುದೇ ಆತಂಕ, ಭಯ ಇಲ್ಲ. ಮಂಡ್ಯದ ಜನರು ಬೆಂಬಲಿಸುವುದು ನಿಶ್ಚಿತ. ನನ್ನ ಪರವಾಗಿ 6 ಮತ್ತು ನನ್ನ ಎದುರಾಳಿ ಪರವಾಗಿ…
ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ: ಮುಖ್ಯಮಂತ್ರಿಗಳ ಸಂದೇಶ
May 23, 2019ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಹೊಂಗನಸಿನೊಂದಿಗೆ ನಮ್ಮ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗುತ್ತಿದೆ. ಈ ಅವಧಿಯಲ್ಲಿ ನಾವು ಮಂಡಿಸಿದ ಎರಡು ಆಯವ್ಯಯಗಳು ನಮ್ಮ ಸರ್ಕಾರದ ಒಲವು, ನಿಲುವುಗಳು, ಸಾಗಬೇಕಾದ ಹಾದಿಯನ್ನು ಸ್ಪಷ್ಟಪಡಿಸಿವೆ. ಈ ಅವಧಿಯಲ್ಲಿ ನಾವು ರೂಪಿಸಿರುವ ಕಾರ್ಯ ಕ್ರಮಗಳು ಜನರಲ್ಲಿ ಜನಪರ ಸರ್ಕಾರ, ರೈತರ ಪರ ವಾದ ಸರ್ಕಾರ, ಎಲ್ಲ ವರ್ಗದವರ ಆಶೋ ತ್ತರಗಳಿಗೆ ಸ್ಪಂದಿಸುವ ಸರ್ಕಾರ ಎಂಬ ಭಾವನೆ ಮೂಡಿಸಿರು ವುದು ತೃಪ್ತಿ ತಂದಿದೆ. ಜೊತೆಗೆ ನಮ್ಮ ಮುಂದಿನ ನಡೆಗೆ ಸ್ಫೂರ್ತಿಯೂ ಆಗಿದೆ….
ಮೈತ್ರಿ ಸರ್ಕಾರದಿಂದ ಪಕ್ಷಗಳಿಗಿಂತ ಜನರಿಗೆ ಆಗುವ ಲಾಭ ಮುಖ್ಯ: ಎಚ್.ವಿಶ್ವನಾಥ್
May 23, 2019ಕೋಲಾರ: ಪದೇಪದೆ ಚುನಾವಣೆಗೆ ಹೋಗಿ ಜನರ ತೆರಿಗೆ ಹಣ ಪೆÇೀಲು ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹೇಳಿದ್ದಾರೆ. ಕೋಲಾರ ದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಏನು ಲಾಭವಾಯಿತು ಎಂಬುದು ಮುಖ್ಯವಲ್ಲ, ಜನರಿಗೆ ಏನು ಲಾಭವಾಗಿದೆ ಎಂಬುದು ಬಹಳ ಮುಖ್ಯವಾಗಿದೆ ಎಂದರು. ಮುಖ್ಯಮಂತ್ರಿ ಕುಮಾರ ಸ್ವಾಮಿ ಹಲವು ಜನ ಕಲ್ಯಾಣ ಕಾರ್ಯಕ್ರಮ ಜಾರಿಗೆ ತರುತ್ತಿರುವಾಗ ಅದನ್ನು ಎರಡೂ ಪಕ್ಷಗಳು ಸೇರಿ ಜನರಿಗೆ ಮುಟ್ಟಿಸುವ ಕೆಲಸ…
ಸಿಎಂ ಮೇಲೆ ಅನುಕಂಪ, ಕೈ ನಾಯಕರ ವಿರುದ್ಧ ಬೇಗ್ ಕೋಪ ತಾಪ, ಸ್ವಪಕ್ಷೀಯರ ವಿರುದ್ಧವೇ ಏಕೆ ಆರೋಪ
May 23, 2019ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ರೋಷನ್ ಬೇಗ್ ಕೈ ಮುಖಂಡರ ವಿರುದ್ಧ ಬಂಡಾಯ ಸಾರಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಬೇಗ್ ಆತುರದ ಹೇಳಿಕ ಕಾಂಗ್ರೆಸ್ ನಾಯಕರನ್ನು ಮುಜುಗರಕ್ಕೀಜಡು ಮಾಡಿದೆ, ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿಲ್ಲವೆಂಬ ಕೋಪಕ್ಕೆ ಬೇಗ್ ರೋಷಾವೇಷ ತೋರಿದ್ದಾರೆ, ಜೊತೆಗೆ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡದೇ ಇರುವುದೇ ರೋಷನ್ ಬೇಗ್ ಅವರ ಆಕ್ರೋಶಕ್ಕೆ ಕಾರಣ ವಾಗಿದೆ….
ರೋಷನ್ ಬೇಗ್ ಬೆನ್ನಲ್ಲೇ ಕಾಂಗ್ರೆಸ್ಗೆ ಶಾಸಕ ಸುಧಾಕರ್ ಪಂಚ್!
May 23, 2019ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನಾಯಕ ರೋಷನ್ ಬೇಗ್ ಸಮ್ಮಿಶ್ರ ಸರ್ಕಾರದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಕೈ ಪಾಳಯದ ಇರುಸ ಮುರುಸಿಗೆ ಕಾರಣವಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇನ್ನೋರ್ವ ಶಾಸಕ ಸಹ ಇವಿಎಂಗಳನ್ನು ಸಮರ್ಥಿಸಿಕೊಳ್ಳುವ ಮೂಲಕ ತಮ್ಮ ನಾಯಕರನ್ನು ಇನ್ನಷ್ಟು ಮುಜುಗರಕ್ಕೀಡುಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ, ಶಾಸಕ ಡಾ. ಕೆ.ಸುಧಾಕರ್ ಇವಿಎಂಗಳನ್ನು ಸಮರ್ಥಿಸಿಕೊಂಡಿದ್ದು ಚುನಾವಣಾ ಆಯೋಗದ ಪರ ಬ್ಯಾಟ್ ಬೀಸಿದ್ದಾರೆ. ಮಂಗಳವಾರ ಈ ಸಂಬಂಧ ಟ್ವೀಟ್ ಮಾಡಿದ್ದ ಸುಧಾಕರ್ “ವೈಯಕ್ತಿಕವಾಗಿ ನನಗೆ ಗೊಂದಲವಾಗಿದೆ. ಎಕ್ಸಿಟ್…
ಮತ ಎಣಿಕೆಗೆ ಭಾರೀ ಭದ್ರತೆ
May 23, 2019ಮೈಸೂರು: ನಾಳೆ (ಗುರುವಾರ) ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿರುವ ಮತ ಎಣಿಕಾ ಕಾರ್ಯಕ್ಕೆ ಇನ್ನಿಲ್ಲದ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಂದೋಬಸ್ತ್ ಯೋಜನೆ ಕುರಿತು ಡಿಸಿಪಿ ಎಂ.ಮುತ್ತುರಾಜ್, ಇಂದು ಸಂಜೆ ಮತ ಎಣಿಕಾ ಕೇಂದ್ರದ ಬಳಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸುವ ಬಗ್ಗೆ ಹಾಗೂ ನಿಯಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಕುರಿತಂತೆ ಬ್ರೀಫ್ ಮಾಡಿದರು. 6 ಮಂದಿ ಎಸಿಪಿ ಮಟ್ಟದ ಅಧಿಕಾರಿ ಗಳು, 22 ಪೊಲೀಸ್ ಇನ್ಸ್ಪೆಕ್ಟರ್, 23 ಸಬ್ ಇನ್ಸ್ಪೆಕ್ಟರ್, 103…
ಲೋಕಸಭಾ ಚುನಾವಣೆ: ಮತ ಎಣಿಕೆಗೆ ಮುಂಚೆ ವಿವಿ ಪ್ಯಾಟ್ ಸ್ಲಿಪ್ ಎಣಿಕೆಗೆ ವಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ
May 23, 2019ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಒಂದೇ ದಿನ ಬಾಕಿ ಇರುವಾಗಲೇ ವಿಪಕ್ಷಗಳು ಫಲಿತಾಂಶಕ್ಕೆ ಮುನ್ನ ವಿವಿ ಪ್ಯಾಟ್ ಕಾಗದಗಳನ್ನು ಸಂಪೂರ್ಣವಾಗಿ ಲೆಕ್ಕ ಹಾಕಬೇಕೆಂದು ಬೇಡಿಕೆ ಇಟ್ಟಿದ್ದವು. ಆದರೆ ಚುನಾವಣಾ ಆಯೋಗವು ಬೇಡಿಕೆಯನ್ನು ತಿರಸ್ಕರಿಸಿದ್ದು, ಮತ ಎಣಿಕೆಯ ಕಡೇ ಕ್ಷಣದ ತಯಾರಿ ನಡೆದಿರುವಾಗ ಕಾರ್ಯವಿಧಾನದಲ್ಲಿ ಯಾವ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದಿದೆ. 22 ರಾಜಕೀಯ ಪಕ್ಷಗಳ ನಾಯಕರು ಫಲಿತಾಂಶಕ್ಕೆ ಮುನ್ನ ವಿವಿ ಪ್ಯಾಟ್ ಸ್ಲಿಪ್ಗಳನ್ನು ಎಣಿಕೆ ಮಾಡಿ ಖಚಿತಪಡಿಸಿಕೊಳ್ಳಬೇಕೆಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಒಂದೊಮ್ಮೆ ಏನಾದರೂ ವ್ಯತ್ಯಾಸಗಳು ಕಂಡು…
ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸಲು ನನ್ನ ವಿರೋಧವಿದೆ
May 23, 2019ಮೈಸೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಸರ್ಕಾರದ ಪ್ರಸ್ತಾಪಕ್ಕೆ ತಮ್ಮ ವಿರೋಧವಿದೆ ಎಂದು ತಿಳಿಸಿದ ಮಾಜಿ ಮುಖ್ಯಮಂತ್ರಿಗಳೂ ಆದ ರಾಜ್ಯ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಈ ಪ್ರಸ್ತಾಪದ ವಿರುದ್ಧ ಈ ಹಿಂದೆಯೇ ದನಿ ಎತ್ತಿದ್ದೆ. ಈಗಲೂ ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಮಾತ ನಾಡುವುದಾಗಿ ತಿಳಿಸಿದರು. ಮೈಸೂರಿನ ರಾಮಕೃಷ್ಣನಗರದಲ್ಲಿ ಕನ್ನಡ ವಿಕಾಸ ಶೈಕ್ಷಣಿಕ ಸಾಮಾಜಿಕ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಸ್ಥಾಪನೆಗೊಂಡಿರುವ ನೃಪತುಂಗ ಕನ್ನಡ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಕಟ್ಟಡವನ್ನು…
ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಭಕ್ತರ ಮೋಡಿ ಮಾಡಿದ ಸಂಗೀತನಾದ
May 23, 2019ಮೈಸೂರು: ಮೈಸೂರಿನ ಊಟಿ ರಸ್ತೆಯಲ್ಲಿರುವ ಅವಧೂತ ದತ್ತಪೀಠ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಬ್ರಹ್ಮೋತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಆಂಗ್ ಕ್ಲುಂಗ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಭಜನೆ ಭಕ್ತರ ಮನತಣಿಸಿತು. ಡಾ.ಅನುಸೂಯ ಕುಲಕರ್ಣಿ ಅವರ ನೇತೃತ್ವದಲ್ಲಿ ಮೊದಲಿಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ರಚಿತ ‘ಪಾಹಿ ಪಾಹಿ ಗಜಾನನ’ ಹಾಡನ್ನು ಆದಿತಾಳ ದೊಂದಿಗೆ ಸಿಂದೂ ಬೈರವಿ ರಾಗದಲ್ಲಿ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ತೆಲುಗಿನ…
ಮುಂಗಾರು ಪ್ರವೇಶ ವಿಳಂಬ: ರೈತರಲ್ಲಿ ಆತಂಕ ಬೇಡ
May 23, 2019ಮೈಸೂರು: ಪ್ರಸಕ್ತ ಮುಂಗಾರು ಮಾರುತದ ಪ್ರವೇಶ ವಿಳಂಬವಾಗಿದ್ದು, ಕೇರಳಕ್ಕೆ ಜೂ.6ರಂದು ಮುಂಗಾರು ಪ್ರವೇಶಿಸಲಿದೆ. ವಾಡಿಕೆ ಮಳೆ ಶೇ.96ರಷ್ಟು ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವರದಿ ನೀಡಿದ್ದು, ರೈತರು ಆತಂ ಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಮೈಸೂರು ನಾಗನಹಳ್ಳಿ ಕೃಷಿ ಹವಾಮಾನ ವಿಭಾಗದ ಪ್ರಕಟಣೆ ತಿಳಿಸಿದೆ. ಮೇ 26ರವರೆಗೆ ಸಾಧಾರಣ ಮಳೆ ಸಾಧ್ಯತೆ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಮೇ 26 ರವರೆಗೆ ಮೋಡ ಕವಿದ ವಾತಾವರಣ ವಿದ್ದು, ಸಾಧಾರಣ…










