ಮೈಸೂರು, ಫೆ. 13- ಈ ಬಾರಿ `ಗಾಂಧಿ ಪಥ’ದಲ್ಲಿ ಸಾಗುವ `ಬಹುರೂಪಿ’ ನಾಟಕೋತ್ಸವ ರಂಗಾಸಕ್ತರ ಕುತೂ ಹಲ ಹೆಚ್ಚಿಸಿದೆ. ರಂಗಭೀಷ್ಮ ಬಿ.ವಿ.ಕಾರಂತ್, ಬಸವ ಲಿಂಗಯ್ಯ, ಪ್ರಸನ್ನ, ಚಿದಂಬರರಾವ್ ಜಂಬೆ ಅವರಂತಹ ರಂಗಶಕ್ತಿ ಮಾದರಿಯಲ್ಲೇ ಹಾಲಿ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಜವಾಬ್ದಾರಿ ನಿರ್ವಹಿಸಿ, `ಬಹು ರೂಪಿ’ಯನ್ನು ಯಶಸ್ವಿಗೊಳಿಸುತ್ತಾರೆಂಬ ವಿಶ್ವಾಸ ರಂಗಾ ಸಕ್ತರು ಹಾಗೂ ರಂಗಕರ್ಮಿಗಳಲ್ಲಿದೆ. ವಿದ್ಯಾರ್ಥಿದೆಸೆಯಿಂದಲೇ ರಂಗಭೂಮಿಗೆ ಅಂಟಿಕೊಂಡು, ಕನ್ನಡ-ಕೊಡವ ರಂಗಭೂಮಿ, ಜಾನಪದ, ಸಾಹಿತ್ಯಕ್ಕೆ ತಮ್ಮದೇ ಕಾಣಿಕೆ ನೀಡುವುದರ ಜೊತೆಗೆ ಆಕಾಶವಾಣಿ, ದೂರದರ್ಶನ, ಕಿರುಚಿತ್ರ, ಚಲನಚಿತ್ರ, ಪತ್ರಿಕೆ…
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
February 14, 2020ಮೈಸೂರು, ಫೆ.13- ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಫೆ.14, 15 ಮತ್ತು 16ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಬೆಳಿಗ್ಗೆ 11.30 ಗಂಟೆಗೆ ತಿ. ನರಸೀಪುರ ತಾಲೂಕಿನ ಮೂಗೂರಿಗೆ ಆಗಮಿಸಿ ಸಾರ್ವಜನಿಕ ರನ್ನು ಭೇಟಿ ಮಾಡುವರು. ಮಧ್ಯಾಹ್ನ 12 ಗಂಟೆಗೆ ಮೂಗೂರಿನ ತ್ರಿಪುರಸುಂದರಿ ಅಮ್ಮನವರ ದೇವಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂ ದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಟಿ.ನರಸೀಪುರಕ್ಕೆ ಆಗಮಿಸಿ ಸಾರ್ವಜನಿಕರನ್ನು ಭೇಟಿ ಮಾಡಿದ ನಂತರ…
ನೂತನ ಸಚಿವರಿಗೆ ಖಾತೆ ಹಂಚಿಕೆ
February 11, 2020ಬೆಂಗಳೂರು,ಫೆ.10-ವಿಧಾನಸಭೆ ಉಪ ಚುನಾ ವಣೆಯಲ್ಲಿ ಗೆಲುವು ಸಾಧಿಸಿದ 10 ಶಾಸಕರನ್ನು ಫೆಬ್ರ ವರಿ 6ರಂದು ಸಂಪುಟಕ್ಕೆ ಸೇರಿಸಿಕೊಂಡ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅವರೆಲ್ಲ ರಿಗೂ ನಾಲ್ಕು ದಿನಗಳ ನಂತರ ಸೋಮವಾರ ಖಾತೆ ಹಂಚಿಕೆ ಮಾಡಿದ್ದಾರೆ. ಅದೇ ವೇಳೆ ಹಾಲಿ ಶಾಸಕರಾಗಿ ದ್ದವರ ಕೆಲವು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ನಿಭಾಯಿಸುತ್ತಿದ್ದ ಜಲಸಂಪ ನ್ಮೂಲ ಖಾತೆಯೇ ಬೇಕೆಂದು ಪಟ್ಟು ಹಿಡಿದಿದ್ದ ರಮೇಶ್ ಜಾರಕಿಹೊಳಿ, ಅದರಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿ ದಂತೆ ಆರೋಗ್ಯ ಖಾತೆ ಬಯಸಿದ್ದ ಡಾ.ಕೆ.ಸುಧಾ ಕರ್, ಬೆಂಗಳೂರು…
ಮೈಸೂರು ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ನೆಲೆ ಸ್ಥಳಾಂತರವಿಲ್ಲ
February 11, 2020ಮೈಸೂರು, ಫೆ.10 – ಬೆಂಗಳೂರಿನ ಯಲ ಹಂಕದಲ್ಲಿರುವ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ತರಬೇತಿ ಕೇಂದ್ರ ವನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾ ಣಕ್ಕೆ ಸ್ಥಳಾಂತರಿಸುವುದಿಲ್ಲ ಎಂದು ನಾಗರಿಕ ವಿಮಾನಯಾನ ರಾಜ್ಯ ಸಚಿವ ಹರ್ದೀಪ್ ಸಿಂಗ್ಪುರಿ ಭರವಸೆ ನೀಡಿದ್ದಾರೆ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಇಂದು ಬೆಳಿಗ್ಗೆ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ, ಐಎಎಫ್ ಹೆಲಿಕಾಪ್ಟರ್ ತರಬೇತಿ ಕೇಂದ್ರವನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸದಂತೆ ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು ಈ ಭರವಸೆ ನೀಡಿದ್ದಾರೆ. ಇದರೊಂ ದಿಗೆ…
ಅರಣ್ಯದಂಚಿನ ಕುಗ್ರಾಮ ಪಚ್ಚೇದೊಡ್ಡಿ ಶಾಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ಕುಮಾರ್ ವಾಸ್ತವ್ಯ
February 11, 2020ಹನೂರು, ಫೆ.10(ಸೋಮು)- ಪ್ರಾಥ ಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಸೋಮವಾರ ತಾಲೂಕಿನ ಕಾಡಂಚಿನ ಪಚ್ಚೇದೊಡ್ಡಿ ಗ್ರಾಮದಲ್ಲಿ ಶಾಲಾ ವಾಸ್ತವ್ಯ ಹೂಡಿದ್ದು, ಅವರಿಗೆ ಭರ್ಜರಿ ಸ್ವಾಗತ ನೀಡಲಾಯಿತು. ಸಂಜೆ 7 ಗಂಟೆಗೆ ಗ್ರಾಮಕ್ಕೆ ಆಗಮಿಸಿದ ಸಚಿವರಿಗೆ ಗ್ರಾಮದ ಮಹಿಳೆಯರು ಹಾಗೂ ಮಕ್ಕಳು ಆರತಿ ಬೆಳಗುವ ಮೂಲಕ ಸ್ವಾಗತ ನೀಡಿದರು. ಗ್ರಾಮದ ಎಲ್ಲಾ ಬೀದಿ ರಸ್ತೆ ಗಳನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ, ಹಸಿರು ತೋರಣ ಕಟ್ಟಿ ಶೃಂಗರಿಸಲಾಗಿತ್ತು. ಗ್ರಾಮಕ್ಕೆ ಭೇಟಿ ನೀಡಿದ…
ಇಂದು ಮತ ಎಣಿಕೆ: ಒಂದೇ ಗಂಟೆಯಲ್ಲಿ ಫಲಿತಾಂಶ ಪ್ರಕಟ
February 11, 2020ಮೈಸೂರು, ಫೆ. 10(ಆರ್ಕೆ)- ಭಾನುವಾರ ನಡೆದ ಮೈಸೂರು ಮಹಾನಗರಪಾಲಿಕೆ 18ನೇ ವಾರ್ಡ್ ಉಪ ಚುನಾವಣೆ ಮತ್ತು ಹುಣಸೂರು ನಗರಸಭೆಯ 31 ವಾರ್ಡ್ಗಳ ಮತ ಎಣಿಕೆ ಕಾರ್ಯ ಮಂಗಳವಾರ ನಡೆಯಲಿದೆ. ಪಾಲಿಕೆ ಉಪಚುನಾವಣೆಯ ಮತ ಎಣಿಕೆಯು ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸರ್ಕಾರಿ ಸಂಸ್ಕøತ ಪಾಠಶಾಲೆಯಲ್ಲಿ ನಾಳೆ (ಫೆ. 11) ನಡೆದರೆ, ಹುಣ ಸೂರು ನಗರಸಭೆ ಚುನಾವಣೆಯ ಮತ ಎಣಿಕೆ ಅಲ್ಲಿನ ನಗರಸಭಾ ಕಾರ್ಯಾಲಯ ದಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂ ತೆರೆದು ಇವಿಎಂಗಳಲ್ಲಿ ದಾಖ ಲಾಗಿರುವ…
ಫಲಿತಾಂಶ ಮುನ್ನಾ ದಿನ ರಸ್ತೆ ಅಪಘಾತದಲ್ಲಿ ಹುಣಸೂರು ನಗರಸಭೆ ಜೆಡಿಎಸ್ ಅಭ್ಯರ್ಥಿ ಸಾವು
February 11, 2020ಹುಣಸೂರು, ಫೆ. 10(ಕೆಕೆ)- ಹುಣಸೂರು ನಗರಸಭೆಯ 17ನೇ ವಾರ್ಡ್ ಜೆಡಿಎಸ್ ಅಭ್ಯರ್ಥಿ ಹೊನ್ನಲಗಯ್ಯ(54) ರಸ್ತೆ ಅಪಘಾತದಲ್ಲಿ ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ನಗರಸಭೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇವರು, ಮಂಗಳವಾರ ನಡೆಯಲಿ ರುವ ಮತ ಎಣಿಕೆಯಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ, ಫಲಿತಾಂಶಕ್ಕೂ ಮುನ್ನವೇ ಅವರು ದುರಂತ ಸಾವಿಗೀಡಾಗಿದ್ದಾರೆ. ಹುಣಸೂರು ನಗರ ಹೊರವಲಯದ ಬಾಚಳ್ಳಿ ರಸ್ತೆಯಲ್ಲಿರುವ ತಮ್ಮ ಜಮೀನಿನಲ್ಲಿದ್ದ ಪತ್ನಿಯನ್ನು ಕರೆತರಲು ಸೋಮವಾರ ಸಂಜೆ ಬೈಕ್ನಲ್ಲಿ (ಕೆಎ 09-ಹೆಚ್ಜೆ 2910) ತೆರಳುತ್ತಿದ್ದಾಗ ಚಿಕ್ಕಹುಣಸೂರು ಕೆರೆ ಬಳಿನಿಯಂತ್ರಣ…
ಮೀಸಲಾತಿ ಮಾನವ ಹಕ್ಕಾಗಿ ಪರಿಣಮಿಸಿದೆ: ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಪ್ರತಿಪಾದನೆ
February 11, 2020ಮೈಸೂರು,ಫೆ.10(ಎಂಟಿವೈ)- ಮೀಸಲಾತಿ ಮಾನವ ಹಕ್ಕಾಗಿ ಮಾರ್ಪಟ್ಟಿರುವ ಕಾಲಘಟ್ಟದಲ್ಲಿ ಸುಪ್ರಿಂ ಕೋರ್ಟ್ ಇತ್ತೀಚೆಗೆ `ಮೀಸಲಾತಿ ಮೂಲಭೂತ ಹಕ್ಕಲ್ಲ’ ಎಂದು ನೀಡಿರುವ ತೀರ್ಪು ಅತೀವ ನೋವನ್ನು ತಂದಿದೆ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ವಿಷಾದಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ತಮ್ಮದೇ ನೇತೃತ್ವದ ಆಯೋಗವು ಸೋಮವಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಅಭಿಪ್ರಾಯ ಸಂಗ್ರಹಿಸಲು ಮೈಸೂರು ವಿಭಾಗ ಮಟ್ಟದ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆಗೆ…
ಮೈಸೂರಲ್ಲಿ ದಕ್ಷಿಣ ವಲಯ ಇಲಾಖಾ ವರಿಷ್ಠಾಧಿಕಾರಿಗಳೊಂದಿಗೆ ಡಿಜಿಪಿ ಪ್ರವೀಣ್ ಸೂದ್ ಪ್ರಥಮ ಸಭೆ
February 11, 2020ಮೈಸೂರು, ಫೆ. 10(ಆರ್ಕೆ)- ರಾಜ್ಯದ ಪೊಲೀಸ್ ಮುಖ್ಯಸ್ಥರಾಗಿ ಅಧಿಕಾರ ವಹಿಸಿ ಕೊಂಡ ನಂತರ ಮೊದಲ ಬಾರಿ ಡಿಜಿ ಹಾಗೂ ಐಜಿಪಿ ಪ್ರವೀಣ್ಸೂದ್ ಇಂದು ಮೈಸೂರಿಗೆ ಭೇಟಿ ನೀಡಿದ್ದರು. ಅವರು ಐಜಿಪಿ ಕಚೇರಿ ಮಿನಿ ಸಭಾಂಗಣದಲ್ಲಿ ದಕ್ಷಿಣ ವಲಯ ಇಲಾಖಾ ವರಿಷ್ಠಾಧಿಕಾರಿ ಗಳೊಂದಿಗೆ ಸಭೆ ನಡೆಸಿದರು. ಬೆಳಿಗ್ಗೆ 8.45 ಗಂಟೆಗೆ ಆಗಮಿಸಿದ ಪ್ರವೀಣ್ ಸೂದ್ರನ್ನು ದಕ್ಷಿಣ ವಲಯ ಐಜಿಪಿ ವಿಪುಲ್ಕುಮಾರ್ ಹಾಗೂ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಮೈಸೂ ರಿನ ನಜರ್ಬಾದ್ನಲ್ಲಿರುವ ಎಸ್ಪಿ ಕಚೇರಿ ಎದುರಿನ ಹಿರಿಯ ಪೊಲೀಸ್…
ಮೈಸೂರು ವಿವಿ ಸಿಡಿಎಸ್ಎಸ್ ಕಾರ್ಯಕ್ರಮ ವಿಸ್ತರಣೆಗೆ ಸರ್ಕಾರದ ನೆರವು
February 11, 2020ಮೈಸೂರು, ಫೆ.10(ಪಿಎಂ)- ಮೈಸೂರು ವಿವಿಯ `ಶಾಲೆಗಳಲ್ಲಿ ವಿಜ್ಞಾನಾಭಿವೃದ್ಧಿ ಸಮಿತಿ (ಸಿಡಿ ಎಸ್ಎಸ್)’ ಶಾಲಾ ಮಕ್ಕಳಿಗೆ ವಿಜ್ಞಾನದಲ್ಲಿ ಆಸಕ್ತಿ ಬೆಳೆಸಲು ನಡೆಸುತ್ತಿರುವ ಕಾರ್ಯ ಚಟುವಟಿಕೆ ಯನ್ನು ಇಡೀ ರಾಜ್ಯದಲ್ಲಿ ವಿಸ್ತರಿಸಲು ಸರ್ಕಾರ ದಿಂದ ಅಗತ್ಯ ನೆರವು ದೊರಕಿಸಿಕೊಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಭರವಸೆ ನೀಡಿದರು. ಮೈಸೂರಿನ ಮಾನಸ ಗಂಗೋತ್ರಿಯ ವಿಜ್ಞಾನ ಭವನ ದಲ್ಲಿ ಮೈಸೂರು ವಿವಿ ಶಾಲೆಗಳಲ್ಲಿ ವಿಜ್ಞಾನಾಭಿವೃದ್ಧಿ ಸಮಿತಿ (ಸಿಡಿಎಸ್ಎಸ್), ದೂರದರ್ಶನ ಕೇಂದ್ರದ ಚಂದನ ವಾಹಿನಿ ಜಂಟಿ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ…










