ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣ ಹಾಗೂ ಅದರಿಂದಾಗುವ ಪ್ರತಿಕೂಲ ಪರಿಸ್ಥಿತಿ ನಿವಾರಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಕೊರೊನಾ ಪರಿಸ್ಥಿತಿ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಡಿಕೆ ಶಿವಕುಮಾರ್, ಕೊರೊನಾ ಸೋಂಕು ಮಹಾ ಮಾರಿಯಾಗಿ ಕಾಡುತ್ತಿದೆ. ಇದನ್ನು ಎಲ್ಲರೂ ಒಟ್ಟಾಗಿ ಎದುರಿಸಬೇಕು. ಈಗಾಗಲೇ ಇದರಿಂದ ಸಾಕಷ್ಟು ನಷ್ಟವಾಗಿದೆ ಮುಂದಿನ ದಿನಗಳಲ್ಲಿ ಇದನ್ನು ಎದುರಿಸಲು…
ಎಸ್ಟಿಗೆ ಪರಿವಾರ, ತಳವಾರ, ಸಿದ್ದಿ ಸಮುದಾಯ ಸೇರ್ಪಡೆ: ಗೆಜೆಟ್ ಪ್ರಕಟಣೆ ಸಂಸದ ಪ್ರತಾಪ್ ಸಿಂಹ ಕೃತಜ್ಞತೆ
March 22, 2020ಮೈಸೂರು,ಮಾ.21- ಪರಿವಾರ, ತಳವಾರ ಹಾಗೂ ಸಿದ್ಧಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ಇಂದು ಗೆಜೆಟ್ ಪ್ರಕಟಣೆಯಾಗಿ ಹೊರಬಿದ್ದಿದೆ. ಇದರೊಂದಿಗೆ ಹಲವಾರು ವರ್ಷಗಳಿಂದ ಸುಮಾರು 20 ಲಕ್ಷ ಜನ ನಡೆಸಿದ್ದ ಹೋರಾಟಕ್ಕೆ ಅಂತಿಮ ಜಯ ಸಿಕ್ಕಂತಾಗಿದೆ. ಈ ಒಂದು ಐತಿಹಾಸಿಕ ನಿರ್ಣಯಕ್ಕೆ ಕಾರಣರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕೃತಜ್ಞತೆ ಸಲ್ಲಿಸಿದ್ದಾರೆ. ಈ…
ಅನಗತ್ಯವಾಗಿ ಹೊರ ಬಂದರೆ ಕೇಸ್ ಹಾಕ್ತೀವಿ ಹುಷಾರ್!
March 22, 2020ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಪ್ರಧಾನಿ ಮೋದಿ ಜನತಾ ಕಫ್ರ್ಯೂಗೆ ಕರೆ ನೀಡಿದ್ದು, ಸಾರ್ವಜನಿಕರು ಅನಗತ್ಯವಾಗಿ ಹೊರ ಬಂದರೆ, ಪ್ರಕರಣ ದಾಖಲಿಸಿ, ಕ್ರಮ ಜರುಗಿಸಲಾಗುವುದು ಎಂದು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಸಿದ್ದಾರೆ. ಅಗತ್ಯವಿಲ್ಲದಿದ್ದರೂ ಸಾರ್ವಜನಿಕರು ಹೊರಗೆ ಬರಬಾರದು. ಅನಗತ್ಯವಾಗಿ ಸಾರ್ವಜನಿಕರು ಬೀದಿಗೆ ಬಂದು ಗುಂಪು ಸೇರು ವುದು, ನಿಂತುಕೊಳ್ಳುವುದು, ಹರಟೆ ಹೊಡೆಯುವುದು ಮಾಡಿ ದರೆ ಕೇಸ್ ಹಾಕಲಾಗುತ್ತದೆ. ಸಾರ್ವಜನಿಕರು ಕಫ್ರ್ಯೂವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಾರ್ವಜನಿಕರು ಮನೆಯಲ್ಲಿಯೇ ಇರಬೇಕು, ಪ್ರವಾಸ, ವಾಕಿಂಗ್, ಕಾರ್ಯಕ್ರಮ ಎಂದು…
ಚೌಡಯ್ಯ ಮೆಮೋರಿಯಲ್ ಹಾಲ್ನ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದ ಪ್ರೇಕ್ಷಕನಲ್ಲಿ ಕೊರೊನಾ!
March 22, 2020ಬೆಂಗಳೂರು: ಕಳೆದ ಮಾರ್ಚ್ 12ರಂದು ನಗರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಜಾನಪದ ಸಂಗೀತಗಾರ ಮಿರ್ ಮುಕ್ತಿಯಾರ್ ಅಲಿ ಅವರ ಸಂಗೀತ ಕಾರ್ಯ ಕ್ರಮ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಸಮಾರಂಭದಲ್ಲಿ ಯಾರೆಲ್ಲಾ ಬಂದಿದ್ದರು, ಎಷ್ಟು ಜನರಿದ್ದರು ಎಂಬ ಬಗ್ಗೆ ಆರೋಗ್ಯ ಇಲಾಖೆ ಇದೀಗ ಮಾಹಿತಿ ಪತ್ತೆಹಚ್ಚಲು ಹೊರಟಿದೆ. ಈ ಕಾರ್ಯಕ್ರಮವನ್ನು ಆಯೋ ಜಿಸಿದ್ದು ಇಂಡಿಯಾ ಫೌಂಡೇಶನ್ ಫಾರ್ ದ ಆರ್ಟ್ಸ್(ಐಎಫ್ಎ). ಈ ಬಗ್ಗೆ ಪ್ರತಿಕ್ರಿಯಿಸಿದ ಚೌಡಯ್ಯ ಮೆಮೋರಿಯಲ್ ಹಾಲ್ ಅಧ್ಯಕ್ಷ ಸುಬ್ಬರಾಜು ಅರಸ್,…
ಕನಿಷ್ಠ ವಾರಕ್ಕಾಗುವಷ್ಟು ಆಹಾರ ಸಾಮಗ್ರಿ ದಾಸ್ತಾನು ಮಾಡಿಕೊಳ್ಳಿ
March 22, 2020ಬೆಂಗಳೂರು,ಮಾ.21(ಕೆಎಂಶಿ)- ಕನಿಷ್ಠ ಒಂದು ವಾರಕ್ಕೆ ಆಗುವಷ್ಟು ಆಹಾರ ಸಾಮಗ್ರಿಗಳನ್ನು ದಾಸ್ತಾನು ಮಾಡಿಕೊಳ್ಳುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದ್ದಾರೆ. ಕ್ಲಬ್, ಬಾರ್, ಮಾಲ್, ಸಿನಿಮಾ ಮಂದಿರ, ಹವಾ ನಿಯಂತ್ರಿತ ಹೊಟೇಲ್ಗಳನ್ನು ಮುಚ್ಚಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವ ಇಂಗಿತವನ್ನು ಸಚಿ ವರು ವ್ಯಕ್ತಪಡಿಸಿದಂತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದಂತೆ ಎಚ್ಚೆತ್ತಿರುವ ಸರ್ಕಾರ ಮತ್ತಷ್ಟು ಬಿಗಿ ಕ್ರಮಕ್ಕೆ ಮುಂದಾದಂತಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ದಲ್ಲಿ ಆಹಾರದ ಕೊರತೆ…
`ಜನತಾ ಕಫ್ರ್ಯೂ’ಗೆ ಬೆಂಬಲಿಸಿ
March 22, 2020ಮೈಸೂರು, ಮಾ.21(ಎಂಟಿವೈ)- ಕೊರೊನಾ ವೈರಸ್ ತ್ವರಿತ ರೀತಿ ವ್ಯಾಪಿ ಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಭಾನು ವಾರದ (ಮಾ.22) `ಜನತಾ ಕಫ್ರ್ಯೂ’ಗೆ ಎಲ್ಲರೂ ಬೆಂಬಲ ನೀಡಬೇಕು. ಮಹಾ ಮಾರಿ ಕೊರೊನಾದಿಂದ ದೂರ ಉಳಿಯಿರಿ. ಜತೆಗೆ ಒಂದು ದಿನವಾದರೂ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಜಿಲ್ಲೆಯ ಜನತೆಗೆ ಮನವಿ ಮಾಡಿದ್ದಾರೆ. ಕೊರೊನಾ ವೈರಾಣು ಹಾಗೂ ಹಕ್ಕಿ ಜ್ವರ ಭೀತಿ ಹಿನ್ನೆಲೆಯಲ್ಲಿ ಶನಿವಾರ ಮೈಸೂರು ಅರಮನೆಯ ಉಪ…
ಭೂಸ್ವಾಧೀನ ಪ್ರಕ್ರಿಯೆ ಪಾರದರ್ಶಕತೆ ಕಾಯ್ದೆ ಉಲ್ಲಂಘನೆ ಆರೋಪ
March 22, 2020ಮೈಸೂರು, ಮಾ.21(ಪಿಎಂ)- ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ಮತ್ತು ಮೈಸೂರು ತಾಲೂಕಿನ 39 ಕೆರೆಗಳಿಗೆ ನೀರು ತುಂಬಿಸಲು ಹೆಚ್.ಡಿ.ಕೋಟೆ ತಾಲೂಕಿನ ಇಬ್ಜಾಲ (ಕರಿಗಾಲ) ಗ್ರಾಮದ ಬಳಿ ನಿರ್ಮಿಸುತ್ತಿರುವ ಏತ ನೀರಾವರಿ ಯೋಜನೆ ಯಲ್ಲಿ ಏರು ಕೊಳವೆ ಮಾರ್ಗದ (ಪೈಪ್ಲೈನ್) ಕಾಮಗಾರಿ ಸಂಬಂಧ ಆರ್ಎಫ್ಸಿಟಿಎಲ್ಎಆರ್ಆರ್-2013 ಕಾಯ್ದೆ ಉಲ್ಲಂಘಿಸಿ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ರೈತ, ಕೃಷಿ ಕಾರ್ಮಿಕ ಸಂಘಟನೆ (ಆರ್ಕೆಎಸ್) ಆರೋಪಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಸಮಿತಿ ಸದಸ್ಯ…
ಇಂದು ಮಾರುಕಟ್ಟೆ ಸೇವೆಗಳು ಸ್ಥಗಿತ
March 22, 2020ಮೈಸೂರು,ಮಾ.21-ಕೊರೊನಾ ವೈರಸ್ ಶಂಕಿತ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಮಾ.22ರಂದು ಬೆಳಿಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಜನತಾ ಕಫ್ರ್ಯೂ ಜಾರಿಯಾಗುವುದರಿಂದ ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಗೊಳ ಪಡುವ ದೇವರಾಜ ಮಾರುಕಟ್ಟೆ, ಮಂಡಿ ಮಾರುಕಟ್ಟೆ, ವಾಣಿವಿಲಾಸ ಮಾರುಕಟ್ಟೆ, ಇನ್ನಿತರೆ ಮಾರುಕಟ್ಟೆಯ ಎಲ್ಲಾ ಮಳಿಗೆಗಳು ತಮ್ಮ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸುವಂತೆ ಸೂಚಿಸಿದ್ದು, ನಗರದ ಸಾರ್ವ ಜನಿಕರು ಜನರಿಂದ ಜನರಿಗಾಗಿ ಜಾರಿಯಾಗುತ್ತಿರುವ ಜನತಾ ಕಫ್ರ್ಯೂ ದಲ್ಲಿ `ಕೊರೊನಾ ವಿರುದ್ಧ ಒಂದಾಗೋಣ ಮನೆಯಲ್ಲೇ ಇರೋಣ-ಕೊರೊನಾ ತಡೆಯೋಣ’ ಎಂಬ ಧ್ಯೇಯದೊಂದಿಗೆ ಕಫ್ರ್ಯೂನಲ್ಲಿ…
ಕೊರೊನಾ ಸೈನಿಕರಾಗಲು ಉತ್ಸುಕರಾದ ಮೈಸೂರು ಸ್ವಯಂ ಸೇವಕರು
March 22, 2020ಮೈಸೂರು,ಮಾ.21-ಕೋವಿಡ್-19 ವೈರಸ್ ಹರಡುವಿಕೆ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ವದಂತಿ ಹರಡುತ್ತಿದ್ದು, ಇದರ ಪರಿಣಾಮ ಸರ್ಕಾರದ ವಿವಿಧ ಇಲಾಖೆ ಗಳ ಆಡಳಿತ ವ್ಯವಸ್ಥೆಗೆ ಅಡಚಣೆ ಉಂಟಾ ಗಿದೆ. ಇದನ್ನು ತಪ್ಪಿಸುವ ಸಲುವಾಗಿ ಕೊರೊನಾ ಯೋಧರನ್ನು ನೇಮಿಸಲಾ ಗಿದೆ ಎಂದು ವಾರ್ತಾ ಮತ್ತು ಸಾರ್ವ ಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಆರ್.ರಾಜು ಹೇಳಿದರು. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂ ಗಣದಲ್ಲಿ ಶನಿವಾರ ಕೊರೊನಾ ಸೈನಿಕರ ಸ್ವಯಂ ಸೇವಕರೊಂದಿಗೆ ಚರ್ಚಿಸಿದ ಅವರು, ಕೊರೊನಾ…
ಕೊರೊನಾ ಪೀಡೆ; ಜನರಿಗೆ ನೆರವಾಗಲು ಬಿಜೆಪಿ `ಕಾರ್ಯಪಡೆ’
March 22, 2020ಮೈಸೂರು,ಮಾ.21(ಪಿಎಂ)- ಕೊರೊನಾ ಹರಡುವಿಕೆ ತಡೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕೆ ಕರೆ ನೀಡಿರುವ `ಜನತಾ ಕಫ್ರ್ಯೂ’ಗೆ ಮೈಸೂ ರಿನ ಜನತೆ ಬೆಂಬಲ ನೀಡಬೇಕೆಂದು ಬಿಜೆಪಿಯ ಮೈಸೂರು ನಗರ ಘಟಕ ಮನವಿ ಮಾಡಿದೆ. ಜತೆಗೆ, ಕೊರೊನಾ ಸಮಸ್ಯೆ ಇರುವವರೆಗೂ ಹಿರಿಯ ನಾಗರಿಕರು, ಅನಾರೋಗ್ಯ ಪೀಡಿತರು ಹಾಗೂ ಮಕ್ಕಳ ತುರ್ತು ಅಗತ್ಯಗಳಿಗೆ ಸ್ಪಂದಿಸಲು ನಗರದ ಎಲ್ಲಾ ವಾರ್ಡ್ಗಳಲ್ಲಿ `ಕಾರ್ಯಪಡೆ’ ಯನ್ನು ರಚಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಿಜೆಪಿ ನಗರಾಧ್ಯಕ್ಷ ಟಿ.ಎಸ್….