ಮೈಸೂರು: ಸ್ವಚ್ಛ ನಗರಿ ಖ್ಯಾತಿ ಪಡೆದಿರುವ ಮೈಸೂರು ನಗರದಲ್ಲಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಮಹಾನಗರ ಪಾಲಿಕೆ ಮುಂದಾಗಿದೆ. ಇಂಟರ್ನೆಟ್ ಸಂಪರ್ಕ ಹೊಂದಿರುವ ವೈಫೈ ಸೌಲಭ್ಯ ದೊಂದಿಗೆ ನಿರ್ಮಿಸಲುದ್ದೇಶಿಸಿರುವ ಶೌಚಾಲಯಗಳಲ್ಲಿ ರೆಸ್ಟ್ ರೂಂ, ಮಹಿಳೆಯರಿಗಾಗಿ ಮಗುವಿಗೆ ಹಾಲು ಕುಡಿಸುವ ಕೊಠಡಿ (ಬ್ರೆಸ್ಟ್ ಫೀಡಿಂಗ್ ರೂಂ), ಕೈತೊಳೆಯುವ ಸೌಲಭ್ಯ ಕಲ್ಪಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ಡಿ.ಜಿ. ನಾಗರಾಜು ತಿಳಿಸಿದರು. ಮಳೆ ನೀರು ಶೇಖರಣೆ ಮತ್ತು ಮರು ಬಳಕೆ ವ್ಯವಸ್ಥೆ ಮೂಲಕ ನೀರಿನ ಸಂರಕ್ಷ ಣೆಗೆ…
ಒಂದೇ ಕಾಮಗಾರಿಗೆ ಎರಡು ಬಿಲ್: 1.40 ಕೋಟಿ ಗುಳುಂ
January 30, 2019ಮೈಸೂರು: ಒಂದೇ ಕಾಮಗಾರಿಗೆ 2 ಬಾರಿ ಬಿಲ್ ನೀಡುವ ಮೂಲಕ 1.40 ಕೋಟಿ ರೂ. ಭ್ರಷ್ಟಾಚಾರ ನಡೆಸಿರುವ ಸಂಗತಿ ಮೈಸೂರು ನಗರಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಬಯಲಾಗಿದೆ. ನಗರಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ ದಲ್ಲಿ ಮಂಗಳವಾರ ಮೇಯರ್ ಪುಷ್ಪಲತಾ ಜಗನ್ನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಒಂದೇ ಕಾಮಗಾರಿಗೆ 2 ಬಾರಿ ಬೋಗಸ್ ಬಿಲ್ ನೀಡಿ, 1.40 ಕೋಟಿ ರೂ. ಭ್ರಷ್ಟಾಚಾರ ನಡೆಸಿರುವ ಆರೋಪದಡಿ ವಲಯ ಕಚೇರಿ-1ರ ಸಹಾಯಕ ಆಯುಕ್ತ ಸುನಿಲ್ ಬಾಬು ಹಾಗೂ ಕಿರಿಯ ಇಂಜಿನಿಯರ್ ಮೋಹನ್…
ಮೈಸೂರಲ್ಲಿ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ಗಳ ಹುದ್ದೆಗೆ ಲಿಖಿತ ಪರೀಕ್ಷೆ
January 28, 2019ಮೈಸೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಮತ್ತು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಇಂದು ಮೈಸೂರಲ್ಲಿ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ನಡೆಯಿತು. ಮೈಸೂರಿನ ಮಹಾರಾಜ, ಮಹಾಜನ, ವಿದ್ಯಾವರ್ಧಕ, ಮಹಾರಾಣಿ ಸೇರಿದಂತೆ ಒಟ್ಟು 20 ಕೇಂದ್ರಗಳಲ್ಲಿ ಕೊಠಡಿಗೆ 20 ಮಂದಿಯಂತೆ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಮೈಸೂರಲ್ಲಿ 58 ಕಾನ್ಸ್ಟೇಬಲ್ ಮತ್ತು 14 ಮಹಿಳಾ ಕಾನ್ಸ್ಟೇಬಲ್ಗಳ ಹುದ್ದೆ ಗಾಗಿ ಒಟ್ಟು 9998 ಮಂದಿಗೆ ಪ್ರವೇಶ ಪತ್ರ ನೀಡಲಾಗಿತ್ತು. ಪ್ರತೀ ಪರೀಕ್ಷಾ ಕೊಠಡಿ ಯಲ್ಲಿ…
150 ಕೋಟಿ ಮೌಲ್ಯದ ದೊಡ್ಡಕೆರೆ ಆಸ್ತಿ ಮೈಸೂರು ಜಿಲ್ಲಾಡಳಿತದ ವಶಕ್ಕೆ
January 11, 2019ಮೈಸೂರು: ಮೈಸೂರಿನ ಮಹಾತ್ಮಗಾಂಧಿ ರಸ್ತೆಯಲ್ಲಿ ಸರ್ವೆ ನಂ 1ರಲ್ಲಿ 150 ಕೋಟಿ ರೂ. ಮೌಲ್ಯದ 11 ಎಕರೆ 38 ಗುಂಟೆ ಸರ್ಕಾರಿ ಭೂಮಿಗೆ ಹಾಕಲಾಗಿದ್ದ ಬೇಲಿಯನ್ನು ಗುರುವಾರ ಜಿಲ್ಲಾಡಳಿತ ಕಾರ್ಯಾಚರಣೆ ನಡೆಸಿ ತೆರವು ಗೊಳಿಸುವ ಮೂಲಕ ವಶಕ್ಕೆ ಪಡೆಯಿತು. ಮಹಾತ್ಮಗಾಂಧಿ ರಸ್ತೆಯಲ್ಲಿ ಮಾಲ್ ಆಫ್ ಮೈಸೂರು ಹಾಗೂ ತರಕಾರಿ ಸಗಟು ಮಾರುಕಟ್ಟೆ ನಡುವೆ ಇರುವ ದೊಡ್ಡಕೆರೆಗೆ ಸೇರಿರುವ 11 ಎಕರೆ 38 ಗುಂಟೆ ಭೂಮಿಗೆ ದೊಡ್ಡಕೆರೆ ಟ್ಯಾಂಕ್ ಬಂಡ್ ಸೈಟ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ ಬೇಲಿ ಹಾಕಿ…
ಡಿ.ದೇವರಾಜ ಅರಸು, ಅಶೋಕ ರಸ್ತೆಗಳಲ್ಲಿ ‘ಪೇ ಅಂಡ್ ಪಾರ್ಕ್’ ವ್ಯವಸ್ಥೆ ಜಾರಿಗೆ ನಿರ್ಧಾರ
December 4, 2018ಮೈಸೂರು: ಮೈಸೂರಿನ ಪ್ರಮುಖ ವಾಣಿಜ್ಯ ವಹಿವಾಟು ಮಾರ್ಗಗಳಾದ ಡಿ.ದೇವರಾಜ ಅರಸು ರಸ್ತೆ ಹಾಗೂ ಅಶೋಕ ರಸ್ತೆಯಲ್ಲಿ ತಮ್ಮ ವಾಹನ ನಿಲುಗಡೆ ಶುಲ್ಕ ಪಾವತಿಸಲು ಸಿದ್ಧರಾಗಿ ಮಾಲೀಕರೇ. ಏಕೆಂದರೆ ಈ ಎರಡೂ ರಸ್ತೆಗಳಲ್ಲಿ ಕಾರು ಹಾಗೂ ದ್ವಿಚಕ್ರವಾಹನಗಳಿಗೆ ‘ಪೇ ಅಂಡ್ ಪಾರ್ಕ್’ ವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮೈಸೂರು ಮಹಾನಗರ ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ. ಬೆಳಿಗ್ಗೆಯಿಂದ ಸಂಜೆವರೆಗೆ ಕಾರುಗಳನ್ನು ನಿಲ್ಲಿಸುವುದು, ಅಡ್ಡಾದಿಡ್ಡಿ ನಿಲುಗಡೆ ಹಾಗೂ ದ್ವಿಚಕ್ರವಾಹನಗಳ ಕಳ್ಳ ತನಗಳಂತಹ ಪ್ರಕರಣಗಳಿಂದ ಸಾರ್ವಜನಿಕರಿಗುಂಟಾ ಗುತ್ತಿರುವ ತೊಂದರೆ ತಪ್ಪಿಸಿ, ವ್ಯವಸ್ಥಿತ ಹಾಗೂ ಸುರಕ್ಷಿತ…
ಪುರಭವನ ಆವರಣ ವಾಹನ ಮಾಲೀಕರ ಸುಲಿಗೆಗೆ ಬ್ರೇಕ್
November 24, 2018ಮೈಸೂರು: ವಾಹನ ಸವಾರರಿಂದ ಸುಲಿಗೆ ಮಾಡುತ್ತಿದ್ದ ಪುರಭವನದ ಆವರಣದಲ್ಲಿ ಪಾರ್ಕಿಂಗ್ ಗುತ್ತಿಗೆಯನ್ನು ಮೈಸೂರು ನಗರ ಪಾಲಿಕೆ ಶುಕ್ರವಾರ ರದ್ದು ಮಾಡಿದ್ದು, ಮುಂದಿನ ದಿನಗಳಲ್ಲಿ ಪಾಲಿಕೆಯ ವತಿಯಿಂದಲೇ ಪಾರ್ಕಿಂಗ್ ವ್ಯವಸ್ಥೆ ಮುಂದುವರೆಸುವ ಆಲೋಚನೆ ಮಾಡುತ್ತಿದೆ. ನಾಡಹಬ್ಬ ದಸರಾ ಮಹೋತ್ಸವದ ವೇಳೆ ಮೈಸೂರಿಗೆ ಬರುವ ಪ್ರವಾಸಿಗರ ವಾಹನ ನಿಲುಗಡೆಗೆ ಸಮಸ್ಯೆ ಉಂಟಾಗು ವುದನ್ನು ತಡೆಗಟ್ಟಲು ಪುರಭವನದಲ್ಲಿ ನಗರ ಪಾಲಿಕೆ ಮಾಡಿದ್ದ ತಾತ್ಕಾಲಿಕ ವಾಹನ ನಿಲುಗಡೆಯ ವ್ಯವಸ್ಥೆಯನ್ನು ನಿರ್ವಹಿಸಲು ಗುತ್ತಿಗೆ ಪಡೆದಿದ್ದ ಗುತ್ತಿಗೆ ದಾರರು ಪಾಲಿಕೆ ನಿಗದಿಪಡಿಸಿದ್ದ ಶುಲ್ಕ ಕ್ಕಿಂತ ಹೆಚ್ಚುವರಿ…
ಅಧಿಕ ಹಸಿ ಕಸ ಉತ್ಪತ್ತಿಯಾಗುವ ಸ್ಥಳದಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಕಾ ಘಟಕ ಕಡ್ಡಾಯ
October 30, 2018ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಸ ನಿರ್ವಹಣೆ ಸಮಸ್ಯೆ ಉಲ್ಬಣಿಸದಂತೆ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ನಗರಪಾಲಿಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, 50 ಕೆಜಿಗಿಂತ ಹೆಚ್ಚಾಗಿ ಹಸಿ ಕಸ ಉತ್ಪತ್ತಿಯಾಗುವ ಸ್ಥಳಗಳಲ್ಲಿ ಮುಂದಿನ ಆರು ತಿಂಗಳಲ್ಲಿ ಕಡ್ಡಾಯವಾಗಿ ಕಾಂಪೋಸ್ಟ್ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸುವ ಸಂಬಂಧ ಆದೇಶ ಹೊರಡಿಸಲು ನಿರ್ಧರಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸ ನಿರ್ವಹಣೆಯ ಸಮಸ್ಯೆ ಸರ್ಕಾರ ಹಾಗೂ ಬಿಬಿಎಂಪಿಗೆ ತೀವ್ರ ತಲೆನೋವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನಿರ್ದೇಶನವೊಂದನ್ನು ನೀಡಿದ್ದು, ಹೆಚ್ಚಾಗಿ ಕಸ ಸಂಗ್ರಹವಾಗುವ…
ಸಚಿವರ ಮನವೊಲಿಕೆ ಯತ್ನ ವಿಫಲ
October 6, 2018ಮೈಸೂರು: ಖಾಯಂ ಮಾಡಬೇಕು. ಬೆಳಗಿನ ಉಪಾಹಾರಕ್ಕೆ ಹಣ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮೂರು ದಿನದಿಂದ ಮೈಸೂರು ಮಹಾನಗರಪಾಲಿಕೆ ಎದುರು ಅನಿರ್ದಿಷ್ಟಾವಧಿಯ ಮುಷ್ಕರ ನಡೆಸುತ್ತಿರುವ ಪೌರ ಕಾರ್ಮಿಕರ ಮನವೊಲಿಸುವ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಪ್ರವಾಸೋದ್ಯಮ ಸಚಿವರ ಯತ್ನ ವಿಫಲವಾಯಿತು. ಹೀಗಾಗಿ ತಮ್ಮ ಬೇಡಿಕೆ ಈಡೇರದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ಮುಷ್ಕರ ನಿರತರು ಪ್ರತಿಭಟನೆ ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಕೈಗೊಂಡಿರುವ ತೀರ್ಮಾನವನ್ನು ಜಾರಿಗೊಳಿಸುವ ಜತೆಗೆ ಇಂದಿರಾ ಕ್ಯಾಂಟೀನ್…
ಬಲ್ಲಾಳ್ ಸರ್ಕಲ್ ಬಳಿ ಸೆಪ್ಟೆಂಬರ್ ಮೊದಲ ವಾರ ಫುಡ್ ಜೋನ್ ಆರಂಭ
August 18, 2018ಮೈಸೂರು: ರಸ್ತೆ ಬದಿ ಆಹಾರ ಪದಾರ್ಥ ವ್ಯಾಪಾರಿಗಳಿಗಾಗಿ ಮೈಸೂರಿನ ಬಲ್ಲಾಳ್ ಸರ್ಕಲ್ ಬಳಿ ಪಾಲಿಕೆ ನಿರ್ಮಿಸಿರುವ ಫುಡ್ ಜೋನ್ ಸೆಪ್ಟೆಂಬರ್ ಮೊದಲ ವಾರ ಆರಂಭವಾಗಲಿದೆ ಎಂದು ಪಾಲಿಕೆ ಅಪರ ಆಯುಕ್ತ ರವೀಂದ್ರ ತಿಳಿಸಿದ್ದಾರೆ. ಮೈಸೂರು ನಗರದಾದ್ಯಂತ ಬಹುತೇಕ ಎಲ್ಲಾ ರಸ್ತೆಗಳ ಫುಟ್ಪಾತ್ಗಳ ಮೇಲೆ ಪಾನಿಪೂರಿ, ಗೋಬಿ ಮಂಚೂರಿ, ಫಾಸ್ಟ್ ಫುಡ್ ಅಂಗಡಿಗಳನ್ನು ನಡೆಸುತ್ತಿದ್ದು, ತ್ಯಾಜ್ಯ ವಸ್ತುಗಳನ್ನು ಅಲ್ಲಿಯೇ ಬಿಟ್ಟು ಹೋಗುತ್ತಿರುವುದರಿಂದ ಸ್ವಚ್ಛ ನಗರಿಯಲ್ಲಿ ಅಶುಚಿತ್ವಗೊಳ್ಳುತ್ತಿದೆಯಲ್ಲದೇ, ಫುಟ್ಪಾತ್ಗೆ ಅಳವಡಿಸಿರುವ ಟೈಲ್ಸ್ ಮೇಲೆ ಎಣ್ಣೆ ಮತ್ತಿತರ ಪದಾರ್ಥಗಳು ಚೆಲ್ಲಿ ಹಾಳಾಗುತ್ತಿರುವುದು…
ಆ.31 ಮೈಸೂರು ಮಹಾನಗರ ಪಾಲಿಕೆ ಚುನಾವಣೆ
August 10, 2018ಅದರಂತೆ ಆಗಸ್ಟ್ 13ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಆಗಸ್ಟ್ 20 ನಾಮಪತ್ರ ಸಲ್ಲಿಸಲು ಕಡೇ ದಿನವಾಗಿರುತ್ತದೆ. ಆಗಸ್ಟ್ 21 ನಾಮಪತ್ರಗಳ ಪರಿಶೀಲನೆ, 23ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕಡೇ ದಿನವಾಗಿರುತ್ತದೆ. ಆಗಸ್ಟ್ 31ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದಲ್ಲಿ ಸೆ.2ರಂದು ಮರು ಮತದಾನವಾಗಬೇಕಿದೆ. ಸೆಪ್ಟೆಂಬರ್ 3ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಮಹಾನಗರಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಸೆಪ್ಟೆಂಬರ್…