ಮೈಸೂರು:ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 17 ಮಂದಿ ವಿದ್ಯಾರ್ಥಿಗಳಿಗೆ ಹೋಟೆಲ್ ಮಾಲೀಕರ ಸಂಘ ಹಾಗೂ ಧರ್ಮದತ್ತಿ ಸಂಘದ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಹೋಟೆಲ್ ದಿ ಪ್ರೆಸಿಡೆಂಟ್ ಸಭಾಂಗಣದಲ್ಲಿ ಹೋಟೆಲ್ ಮಾಲೀಕರ ಸಂಘ ಹಾಗೂ ಧರ್ಮದತ್ತಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹಾಗೂ ಧರ್ಮದತ್ತಿ ಸಂಘದ ಅಧ್ಯಕ್ಷ ರವಿಶಾಸ್ತ್ರಿ ಸನ್ಮಾನಿಸಿದರು. ನಂತರ ಹೋಟೆಲ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಸಿ.ನಾರಾಯಣಗೌಡ ಮಾತನಾಡಿ, ಹೋಟೆಲ್ ಉದ್ಯಮಿಗಳ ಮಕ್ಕಳು…