Tag: Mysuru- Kodagu Lok sabha polls

ಮೈಸೂರು-ಕೊಡಗು ಶೇ.68.85, ಮಂಡ್ಯ ಶೇ. 80.23,  ಚಾಮರಾಜನಗರ ಶೇ.74.11, ಹಾಸನದಲ್ಲಿ ಶೇ.77.28 ದಾಖಲೆ ಮತದಾನ
ಮೈಸೂರು

ಮೈಸೂರು-ಕೊಡಗು ಶೇ.68.85, ಮಂಡ್ಯ ಶೇ. 80.23, ಚಾಮರಾಜನಗರ ಶೇ.74.11, ಹಾಸನದಲ್ಲಿ ಶೇ.77.28 ದಾಖಲೆ ಮತದಾನ

April 19, 2019

ಮೈಸೂರು: ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಚಾಮರಾಜ, ಕೃಷ್ಣರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು. ಒಟ್ಟು 18,95,056 ಮತದಾರರಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಾದ್ಯಂತ ಸ್ಥಾಪಿಸಿದ್ದ ಒಟ್ಟು 2,187 ಮತಗಟ್ಟೆಗಳಲ್ಲೂ ಕುಡಿಯುವ ನೀರು, ಶೌಚಾಲಯ, ರ್ಯಾಂಪ್, ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿತ್ತು. ಪ್ರತೀ ಮತಗಟ್ಟೆಯ ಬಳಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಹೆಸರು, ಕ್ರಮ ಸಂಖ್ಯೆ, ಚಿಹ್ನೆಗಳನ್ನು ಬರೆದು ಅಂಟಿಸಲಾಗಿತ್ತು. ಮತಗಟ್ಟೆ…

ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರ
ಮೈಸೂರು

ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರ

April 19, 2019

ಮೈಸೂರು: ಲೋಕ ಸಮರದ ಮೊದಲ ಹಂತದ ಮತದಾನ ಪೂರ್ಣಗೊಂಡಿದ್ದು, ಇದೀಗ ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದೆ. ಮತದಾರ ಯಾರಿಗೆ ಒಲಿದಿದ್ದಾನೆ ಎಂಬುದು ಮೇ 23ರಂದು ಬಹಿ ರಂಗಗೊಳ್ಳಲಿದೆ. ಇಂದು ರಾತ್ರಿ ವೇಳೆಗೆ ಮತಗಳಿರುವ ಸೀಲ್ ಮಾಡಿದ ಇವಿಎಂಗಳನ್ನು ಆಯಾ ಮಸ್ಟರಿಂಗ್ ಕೇಂದ್ರಗಳಿಗೆ ತಂದು ಪರಿಶೀಲಿಸಿದ ನಂತರ ಮೈಸೂರಿನ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಸುರಕ್ಷಿತವಾಗಿ ಇರಿಸಿ ದಿನದ 24 ಗಂಟೆಯೂ ಮೂರು ಸುತ್ತಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಿಜೆಪಿಯ ಪ್ರತಾಪ್ ಸಿಂಹ, ಕಾಂಗ್ರೆಸ್ಸಿನ…

ಮೈಸೂರಲ್ಲಿ ಜನ ಸಂಚಾರ ವಿರಳ
ಮೈಸೂರು

ಮೈಸೂರಲ್ಲಿ ಜನ ಸಂಚಾರ ವಿರಳ

April 19, 2019

ಮೈಸೂರು: ಲೋಕಸಭಾ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಮೈಸೂರಿನ ಹೃದಯ ಭಾಗಗಳೂ ಸೇರಿದಂತೆ ಹಲ ವೆಡೆ ಜನ ಸಂಚಾರ ವಿರಳವಾಗಿತ್ತು. ಮೈಸೂರಿನ ಕೆಆರ್ ವೃತ್ತ, ಚಾಮರಾಜ ವೃತ್ತ, ದೊಡ್ಡ ಗಡಿಯಾರ ವೃತ್ತ ಸೇರಿದಂತೆ ಸಯ್ಯಾಜಿರಾವ್ ರಸ್ತೆ, ಡಿ. ದೇವರಾಜ ಅರಸು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನಿತ್ಯ ಇರುತ್ತಿದ್ದಷ್ಟು ಜನ ಸಂಚಾರವೇ ಇರಲಿಲ್ಲ. ಬಹುತೇಕರು ಮತದಾನ ಪ್ರಕ್ರಿಯೆಯಲ್ಲಿ ತಲ್ಲೀನರಾದರೆ, ರಜೆಯೊಂದಿಗೆ ಬಿಸಿಲಿನ ಬೇಗೆ ಯಿಂದಲೂ ಅನೇಕರು ಹೊರ ಬಾರದಿರಬಹುದು. ಸಾಮಾನ್ಯವಾಗಿ ನಿತ್ಯ ಇರುತ್ತಿದ್ದ ಜನ ಸಂದಣಿ…

ನೂರಾರು ಮಂದಿಯ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದೇಕೆ?
ಮೈಸೂರು

ನೂರಾರು ಮಂದಿಯ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದೇಕೆ?

April 19, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನೂರಾರು ಮಂದಿ ಮತದಾನದಿಂದ ವಂಚಿತರಾಗಿದ್ದಾರೆ. ಹಲವು ವರ್ಷ ಗಳಿಂದ ಮತದಾನ ಮಾಡಿರುವ ಮತದಾರರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗಿರುವ ಬಗ್ಗೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಗರಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ಅವರು ಮತದಾನ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಮತದಾರರ ಹಕ್ಕು. ಈ ಹಕ್ಕು ಚಲಾವಣೆ ಮಾಡಿ ಪ್ರಜಾಪ್ರಭುತ್ವದಲ್ಲಿ ನಮಗೆ ಇಷ್ಟವಾದ ವ್ಯಕ್ತಿ ಯನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬರ ಕರ್ತ ವ್ಯವೂ ಹೌದು. ಕಳೆದ ಮಹಾನಗರಪಾಲಿಕೆ ಚುನಾ ವಣೆ, ವಿಧಾನ…

ಮೈಸೂರು ಎನ್‍ಆರ್ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಶೇ.60.83 ಮತದಾನ
ಮೈಸೂರು

ಮೈಸೂರು ಎನ್‍ಆರ್ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಶೇ.60.83 ಮತದಾನ

April 19, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆ ಸಂಬಂಧ ಎನ್‍ಆರ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ಶೇ.60.83ರಷ್ಟು ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆಯಿತು. ಗಾಂಧಿನಗರ, ಉದಯಗಿರಿ, ಕ್ಯಾತ ಮಾರನಹಳ್ಳಿ, ಗೌಸಿಯಾನಗರ, ಶಕ್ತಿನಗರ ಸೇರಿದಂತೆ ಕ್ಷೇತ್ರದ ವಿವಿಧೆಡೆಯಲ್ಲಿ ಒಟ್ಟು 282 ಮತಗಟ್ಟೆಗಳಲ್ಲಿ ಕ್ಷೇತ್ರದ ಮತ ದಾರರು ಮತ ಚಲಾಯಿಸಿದರು. ಬೆಳಿಗ್ಗೆ 9 ಗಂಟೆ ವೇಳೆ ಶೇ.4.48 ಮತ ಚಲಾವಣೆ ಆಗುವ ಮೂಲಕ ನಿಧಾನಗತಿಯಲ್ಲಿದ್ದ ಮತದಾನ, ಬೆಳಿಗ್ಗೆ 11ರ ವೇಳೆಗೆ ಶೇ.10.17ರಷ್ಟು ಹೆಚ್ಚಳ ಗೊಂಡಿತು. ಆ ಬಳಿಕ ಮತದಾನದ ಬಿರುಸು ಗೊಂಡಿದ್ದು, ಮಧ್ಯಾಹ್ನ…

ಕೆ.ಆರ್.ಕ್ಷೇತ್ರದಲ್ಲಿ ಆರಂಭದಲ್ಲಿ ಉತ್ಸಾಹ ಬಿಸಿಲೇರುತ್ತಿದ್ದಂತೆ ನಿರುತ್ಸಾಹ
ಮೈಸೂರು

ಕೆ.ಆರ್.ಕ್ಷೇತ್ರದಲ್ಲಿ ಆರಂಭದಲ್ಲಿ ಉತ್ಸಾಹ ಬಿಸಿಲೇರುತ್ತಿದ್ದಂತೆ ನಿರುತ್ಸಾಹ

April 19, 2019

ಮೈಸೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ ಚುರುಕಾಗಿ ಆರಂಭವಾದ ಮತ ದಾನ ಮಧ್ಯಾಹ್ನದ ವೇಳೆಗೆ ಇಳಿಮುಖ ವಾಯಿತು. ಆದರೆ ಮತ್ತೆ ಸಂಜೆ ಬಿರುಸಾಗಿ ಸಾಗಿತು. ಕ್ಷೇತ್ರದ ಎಲ್ಲಾ 270 ಮತಗಟ್ಟೆಗಳಲ್ಲಿಯೂ ಯಾವುದೇ ಗೊಂದಲವಿಲ್ಲದೆ ಶಾಂತಿಯುತ ಶೇ.60.36 ರಷ್ಟು ಮತದಾನ ನಡೆಯಿತು. ಕೆ.ಆರ್.ಕ್ಷೇತ್ರದಲ್ಲಿ 1,20,146 ಪುರು ಷರು, 1,23,568 ಮಹಿಳೆಯರು ಹಾಗೂ 22 ತೃತೀಯ ಲಿಂಗಿಗಳು ಸೇರಿ ಒಟ್ಟು 2,43, 736 ಮತದಾರರಿದ್ದು, ಇಂದು ಬೆಳಿಗ್ಗೆ ಎಲ್ಲ ಮತಗಟ್ಟೆಗಳಲ್ಲಿಯೂ ನಿಗದಿತ ಸಮಯದಲ್ಲಿ ಮತದಾನ ಆರಂಭವಾಯಿತು. ಆರಂಭದಲ್ಲಿ ಮತ…

ಗುರುತಿನ ಚೀಟಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ: ಶಾಸಕ ನಾಗೇಂದ್ರ ಅಸಮಾಧಾನ
ಮೈಸೂರು

ಗುರುತಿನ ಚೀಟಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ: ಶಾಸಕ ನಾಗೇಂದ್ರ ಅಸಮಾಧಾನ

April 19, 2019

ಮೈಸೂರು: ಮತದಾನ ಗುರುತಿನ ಚೀಟಿ ಇದ್ದರೂ ಸಾಕಷ್ಟು ಮತದಾರರನ್ನು ಪಟ್ಟಿಯಲ್ಲಿ ಕೈ ಬಿಡಲಾಗಿದೆ. ಇದಕ್ಕೆ ಚುನಾವಣಾ ಅಧಿಕಾರಿಗಳ ಲೋಪವೇ ಕಾರಣ ಎಂದು ಶಾಸಕ ಎಲ್.ನಾಗೇಂದ್ರ ಹೇಳಿದರು. ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ‘ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿ ಸಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಿದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಸಾಕಷ್ಟು ಮತದಾರರು ಈ ಸಂಬಂಧ ನನಗೆ ಕರೆ ಮಾಡಿ ತಿಳಿಸಿದ್ದಾರೆ. ಅಲ್ಲದೆ ವಿದೇಶದಿಂದ ನನ್ನ ಸ್ನೇಹಿತರು ಮತದಾನ ಮಾಡಲು ಬಂದಿದ್ದರು. ಅವರ ಹೆಸರನ್ನು…

ಕೊಡಗಿನ ಹಿರಿಯ ದಂಪತಿ ಉತ್ಸಾಹ
ಮೈಸೂರು

ಕೊಡಗಿನ ಹಿರಿಯ ದಂಪತಿ ಉತ್ಸಾಹ

April 19, 2019

ಮೈಸೂರು: ಸುಡು ಬಿಸಿಲನ್ನು ಲೆಕ್ಕಿಸದೆ 86ರ ಪ್ರಾಯದ ಕೊಡಗಿನ ದಂಪತಿ ಮತದಾನ ಮಾಡುವ ಮೂಲಕ ಮತದಾನದ ಮಹತ್ವ ಸಾರಿದರು. ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿರ್ಮಲಾ ಶಾಲೆಯ ಮತಗಟ್ಟೆ ಸಂಖ್ಯೆ-84ಕ್ಕೆ ಆಗಮಿಸಿದ ಕೊಡಗು ಮೂಲದ ವಿವಿ ಮೊಹಲ್ಲಾ ನಿವಾಸಿಗಳಾದ ಎಂ.ಎಂ. ನಂಜಪ್ಪ (86) ಹಾಗೂ ಇವರ ಪತ್ನಿ ಚಿಮ್ಮಿ ನಂಜಪ್ಪ (81) ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಸಾಥ್ ನೀಡಿದರು. ಇದೇ ವೇಳೆ ‘ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ನಾವೇ ಮತ ಹಾಕದಿದ್ದರೇ ಮತ್ಯಾರು ಮತ ನೀಡುತ್ತಾರೆ….

ಗೆಲುವು ನಿಶ್ಚಿತ: ವಿಜಯಶಂಕರ್
ಮೈಸೂರು

ಗೆಲುವು ನಿಶ್ಚಿತ: ವಿಜಯಶಂಕರ್

April 19, 2019

ಮೈಸೂರು: ಇಡೀ ಕ್ಷೇತ್ರದಲ್ಲಿ ಎಲ್ಲಿಯೂ ಇವರಿಗೆ ಮತ ಏಕೆ ಹಾಕಬೇ ಕೆಂಬ ನಕಾರಾತ್ಮಕ ಅಭಿಪ್ರಾಯ ವ್ಯಕ್ತವಾಗಿಲ್ಲ. ಹೀಗಾಗಿ ಖಂಡಿತ ಮತ್ತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜನತೆ ಆಶೀರ್ವದಿಸುವ ವಿಶ್ವಾಸವಿದೆ ಎಂದು ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಆಶಾಭಾವನೆ ವ್ಯಕ್ತಪಡಿಸಿದರು. ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗುರುವಾರ ರಾತ್ರಿ `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಸಮಸ್ತ ಸಮಾಜಗಳು ನನಗೆ ಮತದಾನ ಮಾಡುವ ಮೂಲಕ ಬೆಂಬಲ ನೀಡಿರುವ ವಿಶ್ವಾಸ ನನಗಿದೆ. ಕಾಂಗ್ರೆಸ್ ಪರವಾಗಿರುವ ಅಗೋಚರ ಮತದಾರರು ನನ್ನ ಗೆಲುವಿಗೆ…

ಕೊಡಗು ಜಿಲ್ಲೆಯಲ್ಲಿ ಶೇ.74.08 ಮತದಾನ: ಮಡಿಕೇರಿ ವಿಧಾನಸಭಾ ಕ್ಷೇತ್ರ ಶೇ.76.12, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶೇ.72.03
ಕೊಡಗು

ಕೊಡಗು ಜಿಲ್ಲೆಯಲ್ಲಿ ಶೇ.74.08 ಮತದಾನ: ಮಡಿಕೇರಿ ವಿಧಾನಸಭಾ ಕ್ಷೇತ್ರ ಶೇ.76.12, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶೇ.72.03

April 19, 2019

ಮಡಿಕೇರಿ: ಕೊಡಗು ಜಿಲ್ಲೆ ಯಲ್ಲಿ ಲೋಕಸಭಾ ಚುನಾವಣೆಗೆ ಮತ ದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾ ಗಿದೆ. ಜಿಲ್ಲೆಯಲ್ಲಿ ಶೇ.74.08 ರಷ್ಟು ಮತ ದಾನವಾಗಿದ್ದು, ಕಳೆದ ಬಾರಿಗಿಂತ ಶೇ.7.55 ರಷ್ಟು ಮತದಾನ ಏರಿಕೆಯಾಗಿರುವುದು ಗಮನಾರ್ಹವಾಗಿದೆ. ಕಳೆದ 2014 ಲೋಕ ಸಭಾ ಚುನಾವಣೆಯಲ್ಲಿ ಶೇ.66.53ರಷ್ಟು ಮತದಾನವಾಗಿತ್ತು. ಮಡಿಕೇರಿ ತಾಲೂಕಿನಲ್ಲಿ ಒಟ್ಟು 269 ಹಾಗೂ ವಿರಾಜಪೇಟೆಯಲ್ಲಿ 274 ಬೂತ್ ಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 543 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನದ ಪ್ರಕ್ರಿಯೆ ಆರಂಭವಾಯಿತಾದರೂ, ಕೆಲ ಮತಗಟ್ಟೆ ಯಲ್ಲಿ…

Translate »