ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ದಾರರು ನೀಡಿರುವ ಮತದಾನದ ತೀರ್ಪು ಮತಯಂತ್ರಗಳಲ್ಲಿ ಭದ್ರವಾಗಿರುವ ಬೆನ್ನಲ್ಲೇ ವಿಜೇತ ಅಭ್ಯರ್ಥಿ ಯಾರಾಗಬಹುದೆನ್ನುವ ಲೆಕ್ಕಾಚಾರಗಳು ಗರಿ ಗೆದರಲಾರಂಭಿಸಿದೆ. ಈ ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಅವರ ನಡುವೆ ನೇರಾನೇರ ಹಣಾಹಣಿ ನಡೆದಿ ರುವುದರಿಂದ, ಇವರಿಬ್ಬರಲ್ಲಿ ವಿಜಯ ಮಾಲೆ ಯಾರ ಕೊರಳಿಗೆ ಬೀಳಬಹುದೆ ನ್ನುವ ವಿಶ್ಲೇಷಣೆಗಳು ಜಿಲ್ಲೆಯಲ್ಲಿ ನಡೆ ಯುತ್ತಿದೆ. ಜಿಲ್ಲೆಯಲ್ಲಿ 4,40,730 ಮತ ದಾರರಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ…
ಮತಯಂತ್ರಗಳಿರುವ ಮೈಸೂರು ಮಹಾರಾಣಿ ವಾಣಿಜ್ಯ ಕಾಲೇಜಿನ ಸ್ಟ್ರಾಂಗ್ ರೂಂಗಳಿಗೆ ಭಾರೀ ಭದ್ರತೆ
April 20, 2019ಮೈಸೂರು: ಮತಗಳು ದಾಖಲಾಗಿರುವ ಇವಿಎಂಗಳನ್ನು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಸ್ಟ್ರಾಂಗ್ ರೂಂ ಗಳಲ್ಲಿರಿಸಿ, ಭದ್ರಪಡಿಸಲಾಗಿದೆ. ಗುರುವಾರ ನಡೆದ ಮೈಸೂರು-ಕೊಡಗು ಲೋಕ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಳಕೆಯಾದ ಇವಿಎಂಗಳನ್ನು ರಾತ್ರಿಯೇ ಪೊಲೀಸ್ ಸರ್ಪ ಗಾವಲಿನಲ್ಲಿ ಟ್ರಕ್ಗಳಲ್ಲಿ ತಂದು ಇಲ್ಲಿ ಇರಿಸಲಾ ಗಿತ್ತು. ಸುರಕ್ಷತೆ ದೃಷ್ಟಿಯಿಂದ ಮಡಿಕೇರಿ ಮತ್ತು ವಿರಾಜ ಪೇಟೆ ವಿಧಾನಸಭಾ ಕ್ಷೇತ್ರಗಳ ಇವಿಎಂ ಗಳನ್ನು ಇಂದು ಬೆಳಿಗ್ಗೆ ಮೈಸೂರಿಗೆ ತಂದ ಸಹಾ ಯಕ ಚುನಾವಣಾಧಿಕಾರಿಗಳು, ಪೊಲೀಸ್ ಭದ್ರತೆ ಯೊಂದಿಗೆ ಇಲ್ಲಿನ…
ರಿಲ್ಯಾಕ್ಸ್ ಮೂಡ್ನಲ್ಲಿ ಅಭ್ಯರ್ಥಿಗಳು, ಕುಟುಂಬ ಸದಸ್ಯರು…
April 20, 2019ಮೈಸೂರು: ಈಗ ರಿಲ್ಯಾಕ್ಸ್ ಮೂಡ್ನಲ್ಲಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್, ಶುಕ್ರವಾರ ಬೆಳಿಗ್ಗೆ ತಮ್ಮ ಕುಟುಂಬ ಸದಸ್ಯರೊಂದಿಗೆ ಉಪಹಾರ, ಬಂದವರಿಗೆ ಉಪಚಾರ, ಸಮಾ ಲೋಚನೆಯಲ್ಲಿ ಕಾಲ ಕಳೆದರು. ಸುಡು ಬಿಸಿಲಿನ ನಡುವೆಯೂ ಕಳೆದ 15 ದಿನ ಗಳಿಂದ ನಿರಂತರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಈ ಇಬ್ಬರು ಅಭ್ಯರ್ಥಿಗಳು ಮತದಾನ ಮುಗಿಯುತ್ತಿದ್ದಂತೆ ಶುಕ್ರವಾರ ಬೆಳಿಗ್ಗೆ ವಿಶ್ರಾಂತಿಗೆ ಹೊರಳಿದರು. ತಮ್ಮ ಕುಟುಂಬ ಸದಸ್ಯರೊಂದಿಗೆ ಸಂತಸದ ಕಾಲ ಕಳೆದರು. ಹಾಲಿ ಸಂಸದರೂ ಆದ…
ಹುಣಸೂರಲ್ಲಿ ಶೇ.77.45 ಮತದಾನ: ಕೆಲವೆಡೆ ಬಹಿಷ್ಕಾರದ ಬೆದರಿಕೆ, ಅಧಿಕಾರಿಗಳಿಂದ ಮನವೊಲಿಕೆ
April 19, 2019ಹುಣಸೂರು: ಮೈಸೂರು-ಕೊಡಗು ಲೋಕಾಸಭಾ ಕ್ಷೇತ್ರದಲ್ಲಿ ಗುರುವಾರ ಚುನಾವಣೆಗೆ ತಾಲೂಕಿನಲ್ಲಿ ಶೇ.77.45ರಷ್ಟು ಮತದಾನವಾಗಿದೆ. ಈ ಮಧ್ಯೆ, ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ತಾಲೂಕಿನ ತಿಪ್ಪಲಾಪುರ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದರು. ನಂತರ ಅಧಿಕಾರಿಗಳು ಮನವೊಲಿಸಿದ ಬಳಿಕ ಗ್ರಾಮಸ್ಥರು ಮತದಾನ ಮಾಡಿದರು. ಬಿಲ್ಲೇನಹೊಸಳ್ಳಿ ಜನರೂ ಗ್ರಾಮಕ್ಕೆ ರಸ್ತೆ, ಬೀದಿದೀಪ, ಕುಡಿಯುವ ನೀರು ನೀಡುವವರೆಗೂ ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಮಧ್ಯಾಹ್ನ 3 ಗಂಟೆಗೆ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಚಂದ್ರಶೇಖರಯ್ಯ ಭರವಸೆ ನೀಡಿದ ನಂತರ 3.30ರ ಬಳಿಕ…
ಸಿದ್ದು-ಜಿಟಿಡಿ ಮತ್ತೆ ಭಲೇ ಜೋಡಿ
April 15, 2019ಮೈಸೂರು: ಬಿಜೆಪಿಯನ್ನು ಮಣಿಸಿ, ಮೈತ್ರಿ ಪಕ್ಷದ ಪ್ರಾಬಲ್ಯ ಮೆರೆಯಲು ಸಿದ್ದರಾಮಯ್ಯ-ಜಿ.ಟಿ.ದೇವೇಗೌಡರ ಜೋಡಿ ಭಾನುವಾರ ಚಾಮುಂಡೇಶ್ವರಿ ಕ್ಷೇತ್ರದ ವಿವಿಧೆಡೆ ಒಟ್ಟಿಗೆ ಪ್ರಚಾರ ಕೈಗೊಂಡು ಸಂಚಲನ ಮೂಡಿಸಿದೆ. ಬಿಜೆಪಿ ಮಣಿಸಲು ದೋಸ್ತಿ ನಾಯಕರು ಒಟ್ಟಾಗಿ ಕೈ ಹಿಡಿದು ಮೈತ್ರಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು, ಹುಮ್ಮಸ್ಸು ಮೂಡಿಸಿದ್ದಾರೆ. ಇವರನ್ನು ನೋಡಿ ಜನತಾ ಪರಿವಾರದ ಅದೆಷ್ಟೋ ಹಳೆ ತಲೆಗಳು ಈ ಜೋಡಿಯ ಹಿಂದಿನ ಮೋಡಿಯನ್ನು ಮೆಲುಕು ಹಾಕಿದವು. ಸಿದ್ದರಾಮಯ್ಯ ಮತ್ತು ಜಿ.ಟಿ. ದೇವೇಗೌಡ ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಪ್ರಭಾವಿ ನಾಯಕರು. ಈ…
ಸಿದ್ದರಾಮಯ್ಯ ವಿರುದ್ಧ ಪ್ರತಾಪಸಿಂಹ ಟೀಕೆಗೆ ಕಾಂಗ್ರೆಸ್ ಖಂಡನೆ
April 12, 2019ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ನಗರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಸಂಸದ ಪ್ರತಾಪಸಿಂಹ ಮಾಡಿರುವ ಆರೋಪವನ್ನು ಮೈಸೂರಿನ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್. ರಾಜೇಶ್ ಖಂಡಿಸಿದರು. ಮೈಸೂರು ಜಿಲ್ಲಾ ಪತ್ರ ಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಮೈಸೂರು-ಕೊಡಗು ಸಂಸದರಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲರಾಗಿರುವ ಪ್ರತಾಪಸಿಂಹ, ಅನಗತ್ಯವಾಗಿ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಹುಣಸೂರು ಮತ್ತು ಮಡಿಕೇರಿಯಲ್ಲಿ ಕೋಮುವಾದಕ್ಕೆ ಬೆಂಬಲ ನೀಡಿ,…
ವಿಜಯಶಂಕರ್ ಪರ ಜೆಡಿಎಸ್, ಕಾಂಗ್ರೆಸ್ ಮುಖಂಡರ ರೋಡ್ ಶೋ
April 12, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮೈಸೂರಿನ ಜನತಾನಗರ, ಟಿಕೆ ಬಡಾವಣೆ ಹಾಗೂ ಶಾರದಾದೇವಿ ನಗರದಲ್ಲಿ ಗುರುವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ರೋಡ್ ಶೋ ನಡೆಸಿ ಮತ ಯಾಚಿಸಿ ದರು. ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಎರಡೂ ಪಕ್ಷಗಳ ಮುಖಂಡರು, ಸಿ.ಹೆಚ್.ವಿಜಯ ಶಂಕರ್ ಬೆಂಬಲಿಸುವಂತೆ ಜನತೆಯಲ್ಲಿ ಮನವಿ ಮಾಡಿ ದರು. ಹಿರಿಯ ನಟ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಖ್ಯಮಂತ್ರಿ ಚಂದ್ರು, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಎಂಸಿ…
ಸಿದ್ದರಾಮಯ್ಯ ನಡೆಸಿದ ಅಸಮಾಧಾನಿತ ಮಂಡ್ಯ ಕಾಂಗ್ರೆಸ್ ಮುಖಂಡರ ಸಭೆ ವಿಫಲ
April 8, 2019ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಪುತ್ರ ಸ್ಪರ್ಧಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಮಗ್ಗುಲ ಮುಳ್ಳಾಗಿ ಪರಿಣಮಿಸಿದೆ. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಇಂದು ಕರೆದಿದ್ದ ಮಂಡ್ಯ ಜಿಲ್ಲೆಯ ಅಸಮಾ ಧಾನಿತ ಮುಖಂಡರ ಸಂಧಾನ ಸಭೆ ವಿಫಲವಾಗಿದೆ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಅಂಬರೀಶ್ ಪತ್ನಿ ಸುಮಲತಾ ಸ್ಪರ್ಧಿಸುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ಈಗಾಗಲೇ ಹಲವಾರು ಕಾಂಗ್ರೆಸ್ ಮುಖಂ ಡರು ಹಾಗೂ…
ನಾಳೆ ಮೈಸೂರಿಗೆ ಪ್ರಧಾನಿ ಮೋದಿ
April 8, 2019ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಮೈಸೂರಿಗೆ ಆಗಮಿಸುವರು. ವಿಶೇಷ ವಿಮಾನದಲ್ಲಿ ಚಿತ್ರ ದುರ್ಗ ಜಿಲ್ಲೆಯಿಂದ ಮಂಗಳವಾರ 4.40 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಮಂತ್ರಿಗಳು ಅಲ್ಲಿಂದ ರಸ್ತೆ ಮೂಲಕ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಲಿರುವ ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರ ಗಳ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪ್ ಸಿಂಹ ಹಾಗೂ ವಿ. ಶ್ರೀನಿವಾಸಪ್ರಸಾದ್ ಅವರ ಪರ ಚುನಾವಣಾ ಪ್ರಚಾರದ ಸಭೆಯಲ್ಲಿ ಭಾಗವಹಿಸಿ ಸಂಜೆ 4.50 ಗಂಟೆಗೆ ಭಾಷಣ ಮಾಡುವರು….
ಮೈಸೂರಲ್ಲೂ ಮೈತ್ರಿ ಮುನಿಸು
April 6, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಪರ ಕೆಲಸ ಮಾಡಲು ಜೆಡಿಎಸ್ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಸಂಬಂಧ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯನ್ನು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಲೀ ರುಚಿ ಹೋಟೆಲಿ ನಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರು ಇಂದು ಕರೆದಿದ್ದರು. ಸಭೆಯಲ್ಲಿ ವಿಷಯ ಪ್ರಸ್ತಾಪಿಸುತ್ತಿದ್ದಂತೆಯೇ ಸಚಿವರಿಬ್ಬರ ಸಮ್ಮುಖದಲ್ಲೇ ತೀವ್ರ ಆಕ್ರೋಶ ವ್ಯಕ್ತವಾಯಿತು. ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡರು ಮಾತನಾಡುತ್ತಿದ್ದಂತೆಯೇ…