ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ಸೆಣಸಾಡಿ, ನಂತರವೂ ಹಾವು-ಮುಂಗುಸಿ ಯಂತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಕೊನೆಗೂ ಒಂದೂವರೆ ದಶಕದ ನಂತರ ಸಂದಿಸಿದ್ದಾರೆ. ಇದೀಗ ಒಂದಾಗಿ ಲೋಕಸಭಾ ಚುನಾವಣಾ ಪ್ರಚಾರ ನಡೆಸಲು ಮುಂದಾಗಿದ್ದಾರೆ. ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಅವರ ಮನೆಯಲ್ಲಿ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಜಿಟಿಡಿ ಮತ್ತು ಸಿದ್ದರಾಮಯ್ಯ ಮುಖಾಮುಖಿಯಾಗಿದ್ದರು. ಸಚಿವ ಜಮೀರ್ ಅಹಮದ್ ಖಾನ್, ಮಾಗಡಿ ಬಾಲಕೃಷ್ಣ ಹಾಗೂ ಇತರ ಕಾಂಗ್ರೆಸ್…
ಪಾದಯಾತ್ರೆ ಮೂಲಕ ಮತ ಯಾಚನೆ
April 5, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಪರವಾಗಿ ಪ್ರಗತಿಪರರು ಪ್ರಚಾರ ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ, ಕರ್ನಾಟಕ ದಲಿತ ವೆಲ್ಫೇರ್ ಟ್ರಸ್ಟ್, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಕಾರ್ಯಕರ್ತರು ಗುರುವಾರ ಅಗ್ರಹಾರ ಸುತ್ತಮುತ್ತ ಪಾದಯಾತ್ರೆ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮತ ಯಾಚಿಸಿದರು. ಮೈಸೂರಿನ ಅಗ್ರಹಾರ ನೂರೊಂದು ಗಣಪತಿ ದೇವಸ್ಥಾನದ ಬಳಿ ಸೇರಿದ ನೂರಕ್ಕೂ ಹೆಚ್ಚು ಕಾರ್ಯಕರ್ತರು ದೇಶದ ಹಿತ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್…
ಸ್ಥಳೀಯ ಮೈತ್ರಿ ಸಮನ್ವಯತೆ ವಿಚಾರದಲ್ಲಿ ಸಚಿವ ಜಿಟಿಡಿ ಬೇಸರ
April 2, 2019ಮೈಸೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮ ಪರಿ ಪಾಲನೆಯ ಆದೇಶ ನೀಡಿದ್ದರೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಉಭಯ ಪಕ್ಷಗಳ ನಡುವೆ ಸಮನ್ವಯತೆ ಮೂಡಿರಲಿಲ್ಲ. ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಿ.ಹೆಚ್.ವಿಜಯಶಂಕರ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರದಲ್ಲಿ ಉಭಯ ಪಕ್ಷಗಳ ನಡು ವಿನ ಅಂತರ ಹೆಚ್ಚಾದಂತೆ ಕಂಡು ಬಂದಿತ್ತು. ಇದಕ್ಕೆ ಇಂಬು ನೀಡುವಂತೆ ಸ್ಥಳೀಯವಾಗಿ ಜೆಡಿಎಸ್ ಪ್ರಭಾವಿ ನಾಯಕರಾಗಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ…
ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್ಸಿಂಹ, ವಿಜಯಶಂಕರ್ ಸೇರಿ ಕಣದಲ್ಲಿ 22 ಮಂದಿ
March 30, 2019ಮೈಸೂರು: ಮೈಸೂರು-ಕೊಡಗು ಲೋಕ ಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದವರ ಪೈಕಿ ಮೂವರು ಪಕ್ಷೇತರರು ಇಂದು ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದರು. ಪಿ.ಎಸ್.ಯಡೂರಪ್ಪ, ಎಂ.ಖಲೀಲ್ ಹಾಗೂ ಎಂ. ಶ್ರೀನಿವಾಸ್, ಶುಕ್ರವಾರ ಮಧ್ಯಾಹ್ನ ಮೈಸೂರು ಜಿಲ್ಲಾ ಚುನಾವಣಾ ಧಿಕಾರಿ ಅಭಿರಾಂ ಜಿ. ಶಂಕರ್ ಅವರಿಗೆ ಅರ್ಜಿ ಸಲ್ಲಿಸಿ, ತಮ್ಮ ಉಮೇದುವಾರಿಕೆ ವಾಪಸ್ ಪಡೆದುಕೊಂಡರು. ಇದರಿಂದಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಲ್ಲಿ ಬಿಜೆಪಿಯ ಪ್ರತಾಪ್ಸಿಂಹ, ಕಾಂಗ್ರೆಸ್ನ ಸಿ.ಹೆಚ್. ವಿಜಯ ಶಂಕರ್, ಬಿಎಸ್ಪಿಯ ಬಿ.ಚಂದ್ರ ಸೇರಿದಂತೆ ಒಟ್ಟು…
5 ನಾಮಪತ್ರ ತಿರಸ್ಕøತ, 25 ಕ್ರಮಬದ್ಧ
March 28, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಸಲ್ಲಿಸಿದ್ದ 30 ಮಂದಿ ಪೈಕಿ ಐವರು ಅಭ್ಯರ್ಥಿ ಗಳ ನಾಮಪತ್ರಗಳು ತಿರಸ್ಕøತಗೊಂಡಿವೆ. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿತ್ತು. ಕಾಂಗ್ರೆಸ್ಸಿನ ಸಿ.ಹೆಚ್.ವಿಜಯ ಶಂಕರ್, ಬಿಜೆಪಿಯ ಪ್ರತಾಪ್ ಸಿಂಹ, ಬಿಎಸ್ಪಿಯ ಬಿ.ಚಂದ್ರ ಸೇರಿದಂತೆ ಒಟ್ಟು 30 ಅಭ್ಯರ್ಥಿಗಳಿಂದ 50 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಧಿಕಾರಿ ಅಭಿರಾಂ ಜಿ.ಶಂಕರ್ ಸಾಮಾನ್ಯ ವೀಕ್ಷಕರು, ನೀತಿ ಸಂಹಿತೆ ನೋಡಲ್ ಅಧಿಕಾರಿಗಳು, ಅಭ್ಯರ್ಥಿಗಳು ಮತ್ತು ಚುನಾ ವಣಾ ಏಜೆಂಟರ್ಗಳ…
ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಮತ್ತು ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ನಾಮಪತ್ರ ಸಲ್ಲಿಕೆ
March 26, 2019ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಅವರು ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿ ಇರುವಂತೆ, ಇಂದು ನಾಮಪತ್ರಗಳನ್ನು ಸಲ್ಲಿಸಿದರು. ಬೆಳಿಗ್ಗೆ 11.50 ಗಂಟೆ ವೇಳೆಗೆ ಮೈಸೂ ರಿನ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರತಾಪ್ಸಿಂಹ, ಮಾಜಿ ಉಪಮುಖ್ಯ ಮಂತ್ರಿ ಆರ್.ಅಶೋಕ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಹಾಗೂ ಎಸ್.ಎ.ರಾಮದಾಸ್ ಅವರೊಂದಿಗೆ ಚುನಾವಣಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ನಂತರ…