Tag: Mysuru

ಕೊಳಚೆ ನಿರ್ಮೂಲನಾ ಮಂಡಳಿಯಿಂದ ನಂಜನಗೂಡಿಗೆ 300 ಮನೆ ಮಂಜೂರು: ಹರ್ಷವರ್ಧನ್
ಮೈಸೂರು

ಕೊಳಚೆ ನಿರ್ಮೂಲನಾ ಮಂಡಳಿಯಿಂದ ನಂಜನಗೂಡಿಗೆ 300 ಮನೆ ಮಂಜೂರು: ಹರ್ಷವರ್ಧನ್

January 25, 2019

ನಂಜನಗೂಡು: ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ನಗರದ ಚಾಮಲಾಪುರದ ಹುಂಡಿ ಮತ್ತು ಅಶೋಕಪುರಂ ಬಡಾವಣೆಗಳಿಗೆ 300 ಮನೆಗಳು ಮಂಜೂರಾಗಿದ್ದು, ಜ.26ರಂದು ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ ಎಂದು ಶಾಸಕ ಬಿ.ಹರ್ಷವರ್ದನ್ ತಿಳಿಸಿದ್ದಾರೆ. ಅಶೋಕಪುರಂ ಬಡಾವಣೆಯಲ್ಲಿ ಗುರುವಾರ ಪಾದಯಾತ್ರೆ ನಡೆಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬದಲಾದ ರಾಜಕೀಯ ವಿದ್ಯಾಮಾನಗಳಿಂದಾಗಿ ಕಳೆದ 15 ದಿನಗಳಿಂದ ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಇಂದಿನಿಂದ ಅಧಿಕಾರಿಗಳೊಂದಿಗೆ ನಗರ ಮತ್ತು ಕ್ಷೇತ್ರಾದ್ಯಂತ ಪ್ರವಾಸ ಕೈಗೊಂಡು ಸಾರ್ವಜನಿಕರ ಸಮಸ್ಯೆಗಳು, ಬಡಾವಣೆಗಳ ಕುಂದು ಕೊರತೆಗಳು…

ವ್ಯಕ್ತಿ ಆತ್ಮಹತ್ಯೆ
ಮೈಸೂರು

ವ್ಯಕ್ತಿ ಆತ್ಮಹತ್ಯೆ

January 25, 2019

ಮೈಸೂರು: ವ್ಯಕ್ತಿ ಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂ ರಿನ ಬೋಗಾದಿಯಲ್ಲಿ ನಡೆದಿದೆ. ಬೋಗಾದಿ 2ನೇ ಹಂತದ ನಿವಾಸಿ ಶಿವಶಂಕರ್ (32) ಆತ್ಮಹತ್ಯೆ ಮಾಡಿ ಕೊಂಡವರು. ಬುಧವಾರ ಪತ್ನಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಎಲೆಕ್ಟ್ರಿಷಿ ಯನ್ ಆಗಿ ಕೆಲಸ ಮಾಡಿಕೊಂಡಿದ್ದ ಶಿವಶಂಕರ್, ಕೆಲ ವರ್ಷಗಳ ಹಿಂದೆ ಆಯತಪ್ಪಿ ಬಿದ್ದಿದ್ದರು. ಚಿಕಿತ್ಸೆ ಪಡೆಯುತ್ತಿ ದ್ದರಾದರೂ ಅವರು ನೆನಪಿನ ಶಕ್ತಿ ಕಳೆದು ಕೊಂಡಿದ್ದರು. ಇದರಿಂದ ಮಾನಸಿಕ ಖಿನ್ನ ತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿ…

ಸ್ಮಾರ್ಟ್ ಎಲ್‍ಇಡಿ ಡಿಸ್ಪ್ಲೇ ಬೋರ್ಡ್ ಅಳವಡಿಕೆ
ಮೈಸೂರು

ಸ್ಮಾರ್ಟ್ ಎಲ್‍ಇಡಿ ಡಿಸ್ಪ್ಲೇ ಬೋರ್ಡ್ ಅಳವಡಿಕೆ

January 24, 2019

ಮೈಸೂರು: ಪ್ರಥಮ ಸ್ವಚ್ಛನಗರಿ ಎಂಬ ಬಿರುದನ್ನು ಮತ್ತೆ ಪಡೆಯಲು ಹವಣಿಸುತ್ತಿರುವ ಮೈಸೂರು ಮಹಾನಗರ ಪಾಲಿಕೆಯು, ನಾಗರಿಕರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಇದೀಗ ಎಲ್‍ಇಡಿ ಡಿಸ್ಪ್ಲೇ ಬೋರ್ಡ್‍ಗಳಿಗೆ ಮೊರೆ ಹೋಗಿದೆ. ಎಲೆಕ್ಟ್ರಾನಿಕ್ ಎಲ್‍ಇಡಿ ವೀಡಿಯೋ ವಾಲ್ (ಎಲ್‍ಇಡಿ ಡಿಸ್ಪ್ಲೇ ಬೋರ್ಡ್) ಗಳ ಮೂಲಕ ಸ್ವಚ್ಛತೆ ಕಾಪಾಡುವ ಬಗ್ಗೆ ದೃಶ್ಯಗಳನ್ನು ಪ್ರದರ್ಶಿಸಿ ಜನರಿಗೆ ಮನವರಿಕೆ ಮಾಡಲು ನಗರ ಪಾಲಿ ಕೆಯು ಪ್ರಯತ್ನಿಸುತ್ತಿದೆ. ಕೆಆರ್‍ಎಸ್ ರಸ್ತೆಯ ಒಂಟಿ ಕೊಪ್ಪಲು ಸರ್ಕಲ್, ರೈಲು ನಿಲ್ದಾಣ ಬಳಿ ಜಗಜೀವನ ರಾಮ್ ಸರ್ಕಲ್, ರಾಮಸ್ವಾಮಿ…

ಫೆ.17ರಿಂದ ಟಿ.ನರಸೀಪುರದ ತಿರುಮಕೂಡಲು  ತ್ರಿವೇಣಿ ಸಂಗಮದಲ್ಲಿ ಕುಂಭಮೇಳ
ಮೈಸೂರು

ಫೆ.17ರಿಂದ ಟಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಕುಂಭಮೇಳ

January 24, 2019

ಮೈಸೂರು: ಟಿ.ನರಸೀಪುರದ ತಿರುಮಕೂಡಲು ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 17 ರಿಂದ ಮೂರು ದಿನ ನಡೆಯುವ ಕುಂಭಮೇಳ ಕಾರ್ಯಕ್ರಮವನ್ನು ಉತ್ತರಪ್ರದೇಶ ಪ್ರಯಾಗ್ ರಾಜ್‍ನಲ್ಲಿ ನಡೆಯುವ ಕುಂಭಮೇಳ ಮಾದರಿ ಅದ್ಧೂರಿಯಾಗಿ ಆಚರಿಸಿ, ಕರ್ನಾಟಕದ ಘನತೆ ಹೆಚ್ಚಿಸುವಂತೆ ನಡೆಯಬೇಕೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು. ಕುಂಭಮೇಳ ಕುರಿತು ಬುಧವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಧಾರ್ಮಿಕ ಮುಖಂಡರು, ರಾಜಕೀಯ ಗಣ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಕಾವೇರಿ, ಕಪಿಲಾ, ಸ್ಫಟಿಕ ಸರೋ ವರಗಳ ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳ…

ಗ್ರಾಮೀಣಾಭಿವೃದ್ಧಿಗೆ ಕೇಂದ್ರದ ಅನುದಾನ  ಸರಿಯಾದ ಸಮಯಕ್ಕೆ ದೊರೆಯುತ್ತಿಲ್ಲ
ಮೈಸೂರು

ಗ್ರಾಮೀಣಾಭಿವೃದ್ಧಿಗೆ ಕೇಂದ್ರದ ಅನುದಾನ ಸರಿಯಾದ ಸಮಯಕ್ಕೆ ದೊರೆಯುತ್ತಿಲ್ಲ

January 24, 2019

ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಕೇಂದ್ರ ಸರ್ಕಾರ ನೀಡ ಬೇಕಿರುವ ಅನುದಾನವನ್ನು ಸರಿಯಾದ ವೇಳೆಗೆ ಬಿಡುಗಡೆ ಮಾಡುತ್ತಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ದೂರಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂ ಗಣದಲ್ಲಿ ಬುಧವಾರ ನಡೆದ ಜಿಪಂ ಸಿಇಓ ಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ದಿಂದ ಕುಡಿಯುವ ನೀರು ಪೂರೈಕೆ ಮತ್ತು ನರೇಗಾ ಯೋಜನೆಯಡಿ ಸಾಕಷ್ಟು ಅನುದಾನ ಬರಬೇಕಿದೆ. ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಈ ಹಿಂದೆ ಶೇ.75:25 ಅನುಪಾತದಡಿ ಅನು…

ಮೂಗೂರಿನಲ್ಲಿ ವಿಜೃಂಭಣೆಯ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ
ಮೈಸೂರು

ಮೂಗೂರಿನಲ್ಲಿ ವಿಜೃಂಭಣೆಯ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ

January 24, 2019

ಮೂಗೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಸುಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದಿವ್ಯ ಮಹಾಬ್ರಹ್ಮ ರಥೋತ್ಸವ ಹಾಗೂ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಮಂಗಳವಾರ ಸಂಜೆ 7 ಗಂಟೆಗೆ ದೇವಾಲಯದ ಆವರಣದಲ್ಲಿ ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಂಡಿದ್ದ ಹೂವಿನ ಪಲ್ಲಕ್ಕಿಯಲ್ಲಿ ಶ್ರೀ ತ್ರಿಪುರ ಸುಂದರಿ ಅಮ್ಮನವರ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ವಾದ್ಯ ಮೇಳ, ವೀರಗಾಸೆ ಹಾಗೂ ಡೊಳ್ಳುಕುಣಿತದೊಂದಿಗೆ ಹೊರಟ ಮೆರವಣಿಗೆ ಮಾಡಲಾಯಿತು. ರಥ ಬೀದಿ, ಬಂಡಿ ಬೀದಿ…

ಕುಡಿಯುವ ನೀರು ಪೂರೈಸಲು ತ್ವರಿತವಾಗಿ ಸ್ಪಂದಿಸಿ
ಮೈಸೂರು

ಕುಡಿಯುವ ನೀರು ಪೂರೈಸಲು ತ್ವರಿತವಾಗಿ ಸ್ಪಂದಿಸಿ

January 23, 2019

ಮೈಸೂರು: ಬೇಸಿಗೆ ಆರಂಭವಾಗಿರುವುದರಿಂದ ಕುಡಿಯುವ ನೀರು ಪೂರೈಸಲು ತ್ವರಿತವಾಗಿ ಸ್ಪಂದಿಸ ಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇ ಗೌಡ ಅವರು ಇಲಾಖೆ ಅಧಿಕಾರಿಗಳಿಗೆ ಇಂದಿಲ್ಲಿ ತಾಕೀತು ಮಾಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಜ್ಯದ ಎಲ್ಲಾ 30 ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿಗಳೊಂದಿ ಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯ ಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ರಾಜ್ಯ ದಲ್ಲಿ ಗ್ರಾಮೀಣ ಭಾಗದ ಜನರು…

ಸುಭಾಷ್ ಚಂದ್ರ ಬೋಸರ ವಿಚಾರಧಾರೆ  ಗಂಭೀರವಾಗಿ ಪರಿಗಣಿಸದಿದ್ದರೆ ದೇಶಕ್ಕಿಲ್ಲ ಭವಿಷ್ಯ
ಮೈಸೂರು

ಸುಭಾಷ್ ಚಂದ್ರ ಬೋಸರ ವಿಚಾರಧಾರೆ ಗಂಭೀರವಾಗಿ ಪರಿಗಣಿಸದಿದ್ದರೆ ದೇಶಕ್ಕಿಲ್ಲ ಭವಿಷ್ಯ

January 23, 2019

ಮೈಸೂರು: ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿಚಾರಧಾರೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ ಎಂದು ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೃಷ್ಣ ಅಭಿಪ್ರಾಯಪಟ್ಟರು. ಮೈಸೂರು ಮಾನಸಗಂಗೋತ್ರಿಯ ಮೈಸೂರು ವಿವಿ ಗ್ರಂಥಾಲಯದಲ್ಲಿ ಮೈಸೂರು ವಿವಿ, ನೇತಾಜಿ ಜನ್ಮ ಶತ ಮಾನೋತ್ಸವ ಸಮಿತಿ ಜಂಟಿ ಆಶ್ರಯ ದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 122ನೇ ಜನ್ಮ ಶತಾಬ್ಧಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಭಾಷ್ ಚಂದ್ರ ಬೋಸ್ ಅವರು ಯುವ ಜನರ…

ಮೈಸೂರು ಸಂಚಾರ ಠಾಣೆ ಪೊಲೀಸರಿಂದ ಆಟೋರಿಕ್ಷಾ ತಪಾಸಣೆ ಅಭಿಯಾನ
ಮೈಸೂರು

ಮೈಸೂರು ಸಂಚಾರ ಠಾಣೆ ಪೊಲೀಸರಿಂದ ಆಟೋರಿಕ್ಷಾ ತಪಾಸಣೆ ಅಭಿಯಾನ

January 23, 2019

ಮೈಸೂರು: ಅನುಚಿತ ವರ್ತನೆ, ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ, ಕರೆದಲ್ಲಿಗೆ ಬರದಿರುವ ಹಾಗೂ ಸಂಚಾರ ನಿಯಮ ಉಲ್ಲಂಘಿಸುವ ಆಟೋ ರಿಕ್ಷಾ ಚಾಲಕರಿಗೆ ಪಾಠ ಕಲಿಸಲು ಮುಂದಾಗಿರುವ ನಗರ ಸಂಚಾರ ಪೊಲೀಸರು ಬುಧವಾರ ಮೈಸೂರಿನಲ್ಲಿ ವಿಶೇಷ ಅಭಿಯಾನ ಕೈಗೊಂಡು ನೂರಾರು ಆಟೋರಿಕ್ಷಾಗಳ ತಪಾಸಣೆ ನಡೆಸಿ, ನಿಯಮ ಉಲ್ಲಂಘಿಸಿದ ಚಾಲಕರಿಂದ ದಂಡ ವಸೂಲಿ ಮಾಡಿದರು. ಸಾರ್ವಜನಿಕ ವಲಯದಿಂದ ಹಲವಾರು ದೂರು ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಎಲ್ಲೆಡೆ ಸಂಚಾರ ಪೊಲೀಸರು ಏಕಕಾಲಕ್ಕೆ ಅಭಿಯಾನ ಆರಂಭಿಸಿ, ಆಟೋ ರಿಕ್ಷಾಗಳನ್ನು ತಪಾಸಣೆ ಮಾಡಿದರು. ಈ…

ಮೂರು ವಾರ್ಡ್‍ಗಳಲ್ಲಿ 95 ಲಕ್ಷ ರೂ. ವೆಚ್ಚದ ವಿವಿಧ  ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಾಮದಾಸ್ ಚಾಲನೆ
ಮೈಸೂರು

ಮೂರು ವಾರ್ಡ್‍ಗಳಲ್ಲಿ 95 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಾಮದಾಸ್ ಚಾಲನೆ

January 23, 2019

ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಬುಧವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ಮೂರು ವಾರ್ಡ್‍ಗಳಲ್ಲಿ ಒಟ್ಟು 95 ಲಕ್ಷ ರೂ. ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. 52ನೇ ವಾರ್ಡ್‍ನಲ್ಲಿ ಜೆ.ಸಿ.ನಗರದ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗದ ರಸ್ತೆಗಳಿಗೆ 45 ಲಕ್ಷ ರೂ. ವೆಚ್ಚದ ಡಾಂಬರೀಕರಣ ಕಾಮಗಾರಿ, 51ನೇ ವಾರ್ಡ್ ಎಂ.ಜಿ.ರಸ್ತೆಯಲ್ಲಿ 5.5 ಲಕ್ಷ ರೂ. ವೆಚ್ಚದಲ್ಲಿ ಜೆಎಸ್‍ಎಸ್ ಆಸ್ಪತ್ರೆ ಬಳಿ ಎಲೆತೋಟದ ಹತ್ತಿರ ಚರಂಡಿ ನಿರ್ಮಾಣ ಮತ್ತು 62ನೇ ವಾರ್ಡ್‍ನಲ್ಲಿ ಜೆ.ಪಿ.ನಗರ ಕಂದಾಯ ಕಾಲೋನಿಯಲ್ಲಿ…

1 115 116 117 118 119 194
Translate »