ಮೈಸೂರು: ಮೈಸೂರು ಲಿಟರರಿ ಅಸೋಸಿಯೇಷನ್(ಒಐಂ) ವತಿ ಯಿಂದ ಮೈಸೂರಿನ ಮಾನಸ ಗಂಗೋತ್ರಿ ಯಲ್ಲಿರುವ ಸೆನೆಟ್ ಭವನದಲ್ಲಿ ಇಂದು 2ನೇ ‘ಮೈಸೂರು ಲಿಟರರಿ ಫೆಸ್ಟ್-2018’ ಯಶಸ್ವಿ ಯಾಗಿ ನಡೆಯಿತು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಮೈಸೂರು ಲಿಟರರಿ ಫೆಸ್ಟ್ ಅನ್ನು ಖ್ಯಾತ ಸಾರೋದ್ ವಾದಕ ಮತ್ತು ಸಾಹಿತಿ ನಾಡೋಜ ಪಂಡಿತ್ ರಾಜೀವ್ ತಾರಾನಾಥ್ ಅವರು ದೀಪ ಬೆಳಗಿ ಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕನ್ನಡ ಸುಂದರ ಭಾಷೆ, ಬಾಳೆಹಣ್ಣು ಸುಲಿದಷ್ಟು ಸುಲಭವಾಗಿರುವ ಈ ಭಾಷೆ…
ಗ್ರಂಥಾಲಯ ಸೌಲಭ್ಯ ಸದ್ಬಳಕೆಗೆ ಸಲಹೆ
August 13, 2018ಮೂಗೂರು: ಗ್ರಾಮದ ಗ್ರಂಥಾಲಯದಲ್ಲಿ ಭಾನುವಾರ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮದ ಮುಖಂಡ ಎಂ.ಕೆ. ಸಿದ್ದರಾಜು ಅವರು ಗ್ರಂಥಾಲಯದ ಪಿತಾಮಹ ರಂಗ ನಾಥನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗ್ರಂಥಾಲಯ ಕಟ್ಟಡ ಮುಜರಾಯಿ ಇಲಾಖೆಯ ಕೊಠಡಿ ಯಲ್ಲಿರುವ ಕಾರಣ ಸೂಕ್ತ ಕಟ್ಟಡ ನಿರ್ಮಾಣ ವಾಗಬೇಕಿದೆ. ಗ್ರಂಥಾಲಯ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿ ಅವರು ಸರ್ಕಾರಿ ಜಾಗ ನೀಡಬೇಕು ಎಂದು ಮನವಿ ಮಾಡಿದರು. ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲೂ ಪುಸ್ತಕ ಗಳನ್ನು ಓದುವ…
ಕರ್ನಾಟಕ ಮುಕ್ತ ವಿವಿ ಸಿಬ್ಬಂದಿ ಸಂಭ್ರಮಾಚರಣೆ
August 11, 2018ಮೈಸೂರು: ಮಾನ್ಯತೆ ರದ್ದುಗೊಳಿಸಿದ್ದರಿಂದ ಕಳೆದ ಮೂರು ವರ್ಷಗಳಿಂದ ಚಟುವಟಿಕೆ ಸ್ಥಗಿತಗೊಂಡು, ಸದಾ ಬಿಕೋ ಎನ್ನುತ್ತಿದ್ದ ಮೈಸೂರಿನ ಮಾನಸಗಂಗೋತ್ರಿ ಆವರಣದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲೀಗ ಸಂತಸ ಮನೆ ಮಾಡಿದೆ. ವಿಜ್ಞಾನ ವಿಷಯಗಳನ್ನೊರತುಪಡಿಸಿ ಇತರ 17 ಕೋರ್ಸುಗಳಿಗೆ ಯುಜಿಸಿ ಮಾನ್ಯತೆ ನೀಡಿ ಗುರುವಾರ ಅಧಿಸೂಚನೆ ಪ್ರಕಟಿಸುತ್ತಿದ್ದಂತೆಯೇ ಮುಕ್ತ ವಿಶ್ವವಿದ್ಯಾನಿಲಯದ ಅಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಮೊಗದಲ್ಲಿ ನಗೆ ಬೀರಿದೆ. ಕಳೆದ ಮೂರು ವರ್ಷಗಳಿಂದ ಪಾಠ ಪ್ರವಚನಗಳು, ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತವಾಗಿದ್ದ ಕಾರಣ ಸಿಬ್ಬಂದಿ ಹಾಗೂ ಪ್ರಾಧ್ಯಾಪಕರು ಚಿಂತೆಗೀಡಾಗಿದ್ದರು. ಹೊಸ…
ಮೈಸೂರು ಮಹಾನಗರ ಪಾಲಿಕೆ ಚುನಾವಣೆ: 65 ವಾರ್ಡ್ಗಳಲ್ಲಿ 725 ಮತಗಟ್ಟೆ ಸ್ಥಾಪನೆ
August 11, 2018ಮೈಸೂರು: ಆಗಸ್ಟ್ 31ರಂದು ನಡೆಯಲಿರುವ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ 65 ವಾರ್ಡ್ಗಳ ಚುನಾವಣೆಗೆ ಒಟ್ಟು 725 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಅಡಿಷನಲ್ ಡಿಸಿ ಟಿ.ಯೋಗೇಶ್ ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ 3,97,692 ಮಹಿಳೆಯರೂ ಸೇರಿದಂತೆ ಒಟ್ಟು 7,99,422 ಮತದಾರರು ಹಕ್ಕು ಚಲಾಯಿಸಲಿದ್ದು, ವಿಧಾನಸಭಾ ಚುನಾವಣೆ ವೇಳೆ ಪರಿಷ್ಕರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಹೆಸರಿರುವವರೆಲ್ಲರೂ ಪಾಲಿಕೆ ಚುನಾವಣೆಯಲ್ಲಿ ಮತ ಹಾಕಲು ಹಕ್ಕುಳ್ಳವರಾಗಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತೀ ಮತಗಟ್ಟೆಗೆ ಓರ್ವ ಅಧ್ಯಕ್ಷಾಧಿಕಾರಿ (Returning…
ಉತ್ತರ ಬೃಂದಾವನಕ್ಕೆ ಪ್ರವೇಶ ನಿಷೇಧ: ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತ
August 11, 2018ಮೈಸೂರು: ಕೃಷ್ಣರಾಜ ಸಾಗರ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಮುಂಜಾಗ್ರತೆಯಾಗಿ ಉತ್ತರ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಹಾರಂಗಿ ಅಣೆಕಟ್ಟೆಯಿಂದ 20,000 ಕ್ಯೂಸೆಕ್ಸ್ ನೀರನ್ನು ಬಿಡುತ್ತಿರುವ ಕಾರಣ ಕೆಆರ್ಎಸ್ ಅಣೆಕಟ್ಟೆಯಿಂದ 70 ಸಾವಿರ ಕ್ಯೂಸೆಕ್ಸ್ ನೀರನ್ನು ಇಂದು ಮುಂಜಾನೆ ಯಿಂದ ಕಾವೇರಿ ನದಿಗೆ ಬಿಡಲಾಗುತ್ತಿದೆ. 40,000 ಕ್ಯೂಸೆಕ್ಸ್ಗಿಂತ ಹೆಚ್ಚು ನೀರನ್ನು ಹೊರ ಬಿಟ್ಟಲ್ಲಿ ಬೃಂದಾವನದ ಉತ್ತರ ಭಾಗದ ಎಡಮುರಿಗೆ ನೀರು ತುಂಬುವುದರಿಂದ ಅಪಾಯ ತಪ್ಪಿಸುವ ಸಲುವಾಗಿ ಬೋಟಿಂಗ್ ಪಾಯಿಂಟ್ನಿಂದ ಉತ್ತರ ಬೃಂದಾವನಕ್ಕೆ ಪ್ರವಾಸಿಗರು ಪ್ರವೇಶಿಸದಂತೆ…
ಕೊನೆ ಆಷಾಢ ಶುಕ್ರವಾರ: ಚಾಮುಂಡಿಬೆಟ್ಟದಲ್ಲಿ ಜನ ಸಾಗರ
August 11, 2018ಮೈಸೂರು: ಆಷಾಡ ಮಾಸದ ಕೊನೆ ಶುಕ್ರವಾರವಾದ ಇಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ನಾಡದೇವಿ ದರ್ಶನ ಪಡೆದು ಸಂಭ್ರಮಿಸಿದರು. ಮೋಡ ಮುಸುಕಿದ ವಾತಾವರಣ, ಕೊರೆಯುವ ಚಳಿ ಹಾಗೂ ತುಂತುರು ಮಳೆಯ ನಡುವೆ ಮುಂಜಾನೆ 3 ಗಂಟೆಯಿಂದಲೇ ಭಕ್ತರು ದೇವಾಲಯದ ಮುಂದೆ ಸರದಿ ಸಾಲಿನಲ್ಲಿ ನಿಂತು ಆಷಾಡ ಮಾಸದ ಕೊನೆ ಶುಕ್ರವಾರ ಪೂಜಾ ಸಂಭ್ರಮವನ್ನು ಕಣ್ತುಂಬಿಕೊಂಡು ಹರ್ಷ ವ್ಯಕ್ತಪಡಿಸಿದರು. ಸರದಿ ಸಾಲಿನಲ್ಲಿದ್ದ ನೂರಾರು ಭಕ್ತರು ನಾಡದೇವಿಗೆ ಜೈಕಾರ ಹಾಕಿ,…
ಸಿಎಂ ಪ್ರವಾಸ ಕಾರ್ಯಕ್ರಮ
August 10, 2018ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಗಸ್ಟ್ 10 ರಿಂದ 12ರವರೆಗೆ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 10ರಂದು ರಾತ್ರಿ 10 ಗಂಟೆಗೆ ರಸ್ತೆ ಮೂಲಕ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಆ.11ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಇಸ್ರೇಲ್ ಮಾದರಿ ಕೃಷಿಗೆ ರೈತರೊಂದಿಗೆ ಭತ್ತ ನಾಟಿ ಮಾಡುವ ಮೂಲಕ ಚಾಲನೆ ನೀಡಿ ಸಾರ್ವಜನಿಕ…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೀವ ವಿಮಾ ನಿಗಮ ಪ್ರತಿನಿಧಿಗಳ ಪ್ರತಿಭಟನೆ
August 9, 2018ಮೈಸೂರು: ವಿಮಾ ಕಂತಿನ ಮೇಲೆ ಜಿಎಸ್ಟಿ ವಿಧಿಸಿರುವುದನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆಯ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಬನ್ನಿಮಂಟಪದಲ್ಲಿರುವ ಭಾರತೀಯ ಜೀವ ವಿಮಾ(ಎಲ್ಐಸಿ) ನಿಗಮದ ಕಚೇರಿ ಬಳಿ ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿದ ಎಲ್ಐಸಿ ಪ್ರತಿನಿಧಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಿಮೆ ಕಂತಿನ ಮೇಲೆ ಜಿಎಸ್ಟಿ ವಿಧಿಸಿರುವು ದನ್ನು ವಿರೋಧಿಸಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ…
ತಂದೆಗೆ ‘ಲಿವರ್’ ನೀಡಲು ಮುಂದಾಗಿರುವ ಮಗ
August 9, 2018ಮೈಸೂರ: ಅಪ್ಪ ಆರೋಗ್ಯವಾಗಿದ್ದಾಗಲೇ ಸರಿಯಾಗಿ ಊಟೋಪಚಾರ ಮಾಡದ ಜನರಿರುವ ಮಧ್ಯೆಯೇ ಲಿವರ್ ಸಮಸ್ಯೆಯಿಂದ ಬಳಲು ತ್ತಿರುವ ಅಪ್ಪನ ಪ್ರಾಣವನ್ನು ಉಳಿಸಲು ಪುತ್ರನೇ ತನ್ನ ಲಿವರ್ ನೀಡಲು ಮುಂದಾಗುವ ಮೂಲಕ ಕರ್ಣನ ದಾನಶೂರತೆ ಮೆರೆದಿದ್ದಾರೆ. ನಗರದ ವೀರನಗೆರೆಯ ನಿವಾಸಿ, ಚಿನ್ನ- ಬೆಳ್ಳಿ ವ್ಯಾಪಾರಿ ಅಶೋಕ್ ಜೈನ್(78) ಎಂಬುವರ ಪುತ್ರ ಪ್ರೀತೇಶ್ ಜೈನ್ ತಂದೆ ಯನ್ನು ಉಳಿಸಲು ಲಿವರ್ ನೀಡಲು ಮುಂದಾಗಿದ್ದಾರೆ. ಕಳೆದ 8 ವರ್ಷದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅಶೋಕ್ ಜೈನ್ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಮೈಸೂರು ಅರಮನೆ ದರ್ಬಾರ್ ಹಾಲ್ನಲ್ಲಿ ನಟಿ ನಿಧಿ ಸುಬ್ಬಯ್ಯ ಫೋಟೋ ಶೂಟ್ ಪ್ರಕರಣ
August 5, 2018ಮೈಸೂರು: ಮೈಸೂರು ಅರಮನೆ ಮತ್ತೆ ಸುದ್ದಿಯಾಗಿದೆ. ಪ್ರತಿಷ್ಠಿತರಿಗಾಗಿ ಭದ್ರತಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ. ದರ್ಬಾರ್ ಹಾಲ್ನಲ್ಲಿ ಚಿತ್ರನಟಿ ನಿಧಿ ಸುಬ್ಬಯ್ಯ ಅವರು ತೆಗೆಸಿಕೊಂಡಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅರಮನೆಯ ದರ್ಬಾರ್ ಹಾಲ್ನಲ್ಲಿ ಫೋಟೊ ನಿಷೇಧವಾಗಿದ್ದರೂ ನಟಿ ನಿಧಿ ಸುಬ್ಬಯ್ಯ ಅವರಿಗೆ ಅಲ್ಲಿ ಫೋಟೋ ಶೂಟ್ಗೆ ಅನುಮತಿ ನೀಡಿದವರು ಯಾರು? ಎಂಬ ಪ್ರಶ್ನೆ ಕಾಡುತ್ತಿದ್ದು, ಸಾರ್ವಜನಿಕರಿಗೆ ಒಂದು ನಿಯಮ, ಗಣ್ಯರಿಗೆ ಒಂದು ನಿಯಮ ಅನುಸರಿಸುತ್ತಿ…