ಮಂಡ್ಯ: ತಾಲೂಕಿನ ಕೀಲಾರ ಗ್ರಾಮದಲ್ಲಿ ಪಕ್ಷೇತರ ಅಭ್ಯರ್ಥಿ ಸುಮ ಲತಾ ಅಂಬರೀಶ್ ಅವರ ರೋಡ್ ಶೋನಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ರೈತ ಸಂಘದ ಬಾವುಟ ಗಳು ರಾರಾಜಿಸಿದವು. ಅಲ್ಲದೇ, ಅವರ ಚಿಹ್ನೆಯಾದ ಕಹಳೆಯನ್ನು ವಿಶೇಷ ವಸ್ತ್ರ ಧರಿಸಿದ್ದ ಇಬ್ಬರು ರೋಡ್ ಶೋನಲ್ಲಿ ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಇಂದು ಬೆಳಿಗ್ಗೆ ಸುಮಲತಾ ಅವರು ಕೀಲಾರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಅಷ್ಟರ ಲ್ಲಾಗಲೇ ನೆರೆದಿದ್ದ ಸಾವಿರಾರು ಕಾರ್ಯಕರ್ತರು ತಮ್ಮ ತಮ್ಮ ಪಕ್ಷಗಳ ಬಾವುಟಗಳನ್ನು ಹಿಡಿದು ರೋಡ್ ಶೋನಲ್ಲಿ ಹೆಜ್ಜೆ ಹಾಕಿದರು….
ಇಂದಿನಿಂದ ರಾಜ್ಯದಲ್ಲಿ ಮೊದಲ ಹಂತದ ಹಣಾಹಣಿ
March 30, 2019ಬೆಂಗಳೂರು: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ, ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಪೂರ್ಣ ಗೊಂಡು, ಮೊದಲ ಹಂತದ ಚುನಾವಣೆಗೆ ಸ್ಪಷ್ಟ ಚಿತ್ರಣ ಹೊರಬಿದ್ದಿದೆ. ಕಾಂಗ್ರೆಸ್ ವರಿಷ್ಠರಿಗೆ ತೀವ್ರ ತಲೆನೋವು ತಂದಿದ್ದ ತುಮ ಕೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಮುದ್ದಹನುಮೇ ಗೌಡ ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆಯುವುದರೊಂದಿಗೆ ಮೈತ್ರಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಲ್ಲಿ ಕಣಕ್ಕಿಳಿದಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು, ಮುದ್ದಹನುಮೇಗೌಡರ ನಿರ್ಧಾರದಿಂದ ನಿರಾಳ ರಾಗಿದ್ದಾರೆ. ಮೊದಲ ಹಂತದಲ್ಲಿ ನಡೆಯುತ್ತಿರುವ…
ಹಳೆಯದ್ದನ್ನು ಮರೆತು ಬಿಜೆಪಿ ಅಭ್ಯರ್ಥಿ ಸೋಲಿಸಲು ಕೆಲಸ ಮಾಡಿ
March 30, 2019ಮೈಸೂರು: ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆಯಾಗಿ ನೀಡಿರುವ ಸಂವಿದಾನ ಉಳಿಸುವು ದರೊಂದಿಗೆ ದೇಶಕ್ಕೆ ಅಪಾಯಕಾರಿಯಾಗಿರುವ ಕೋಮುವಾದಿ ಶಕ್ತಿಗಳು ಬೆಳೆಯುವುದನ್ನು ತಡೆಗಟ್ಟುವ ಜವಾಬ್ದಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ್ದಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಹಳೆಯದ್ದನ್ನೆಲ್ಲಾ ಮರೆತು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸು ವುದನ್ನೇ ಗುರಿಯಾಗಿಸಿಕೊಂಡು ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನ ಹೈವೇ ವೃತ್ತದ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಏರ್ಪ…
ಮೈಸೂರು ಜಿಲ್ಲೆಯ 3 ಕೆರೆಗಳ ಪುನಶ್ಚೇತನ
March 30, 2019ಮೈಸೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ರಾಜ್ಯಾದ್ಯಂತ `ನಮ್ಮೂರು ನಮ್ಮ ಕೆರೆ’ ಯೋಜನೆಯಡಿ 160 ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಮೂರು ಕೆರೆಗಳನ್ನು ಪುನಶ್ಚೇ ತನಗೊಳಿಸಲಾಗುವುದು ಎಂದು ಧರ್ಮ ಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಇಂದಿಲ್ಲಿ ತಿಳಿಸಿದರು. ಮೈಸೂರಿನ ಹಿನಕಲ್ ದೇವರ ಕೆರೆ ಕಾಮಗಾರಿಯನ್ನು ಶುಕ್ರವಾರ ಪರಿ ಶೀಲಿಸಿದ ಅವರು, ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಜನರ ಸಹಭಾಗಿತ್ವದಲ್ಲೇ ಕಾಮಗಾರಿ ನಡೆಸಲಾಗುತ್ತದೆ. ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಸಂಘದಿಂದ ಹೂಳೆತ್ತಲು ಯಂತ್ರೋಪಕರಣಗಳನ್ನು ಒದಗಿಸಲಾಗು ವುದು….
ಶ್ರಮ, ಪ್ರಯತ್ನದಿಂದ ಸ್ವಾವಲಂಬನೆ: ಡಿ.ವೀರೇಂದ್ರ ಹೆಗ್ಗಡೆ ಅಭಿಮತ
March 30, 2019ಮೈಸೂರು: ಪ್ರತಿ ಪ್ರಜೆಯೂ ಶ್ರಮ ಜೀವನ ಮತ್ತು ಪ್ರಯತ್ನದಿಂದ ಸ್ವಾವಲಂಬಿ ಗಳಾಗಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕರೆ ನೀಡಿದರು. ಮೈಸೂ ರಿನ ಇಲವಾಲ ಹೋಬಳಿ ಚಿಕ್ಕನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಆನಂ ದೂರು ಗ್ರಾಪಂ ಸಹಯೋಗದಲ್ಲಿ ನಿರ್ಮಾಣಗೊಂಡಿ ರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು. ಮಾನವ ದುಡಿಮೆಗೆ ಯಾವುದೇ ಧರ್ಮವನ್ನು ಅವಲಂಬಿಸುವುದಿಲ್ಲ. ದೇವರಲ್ಲಿ ಭಕ್ತಿ ಇರಲಿ, ಆದರೆ ಶ್ರಮದ ದುಡಿಮೆಗೆ ಬದಲಾಗಿ ದೇವರ ಮೇಲೆ ಭಾರ ಹಾಕಿ…
ಚುನಾವಣಾ ಆಯೋಗದಿಂದ ಮುಕ್ತ, ನ್ಯಾಯಸಮ್ಮತ ಚುನಾವಣೆ
March 30, 2019ಮೈಸೂರು: ಚುನಾ ವಣಾ ಆಯೋಗ ಇದುವರೆಗೆ ನಡೆದ ವಿಧಾನಸಭೆ, ಲೋಕಸಭೆ ಚುನಾ ವಣೆಗಳನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ ಅಭಿಪ್ರಾಯಪಟ್ಟರು. ಮೈಸೂರು ವಿ.ವಿ ಕಾನೂನು ಶಾಲೆ ವತಿ ಯಿಂದ ಮಾನಸಗಂಗೋತ್ರಿ ಕಾನೂನು ಶಾಲೆಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳ ಲಾಗಿದ್ದ ‘ಚುನಾವಣೆ ಸುಧಾರಣೆಗಳು’ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದ ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಒಂದಾದ ಭಾರತದ ಚುನಾ ವಣೆ ಜವಾಬ್ದಾರಿ ವಹಿಸಿರುವ…
ಕುಟುಂಬ ವ್ಯವಸ್ಥೆ ಪಿತೃ ಪ್ರಧಾನವಾದ ನಂತರ ಮಹಿಳೆಯರ ಮೇಲೆ ವ್ಯಾಪಕ ದಬ್ಬಾಳಿಕೆ
March 30, 2019ಮೈಸೂರು: ಕುಟುಂಬ ವ್ಯವಸ್ಥೆ ಪಿತೃಪ್ರಧಾನವಾದ ನಂತರ ಮಹಿಳೆಯರ ಮೇಲೆ ನಿಯಂ ತ್ರಣ, ದಬ್ಬಾಳಿಕೆ ವ್ಯಾಪಕವಾಯಿತು ಎಂದು ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪದ್ಮಾಶೇಖರ್ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ವಿಭಾಗದ ವತಿ ಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಇಂದು ಏರ್ಪಡಿಸಿದ್ದ ಲಿಂಗ ಸೂಕ್ಷ್ಮತಾ ತರಬೇತಿ ಕಾರ್ಯಕ್ರಮ ಉದ್ಘಾ ಟಿಸಿ ಮಾತನಾಡುತ್ತಿದ್ದ ಅವರು, ಈ ಹಿಂದೆ ನಮ್ಮಲ್ಲಿ ಮಾತೃ ಪ್ರಧಾನ ಕುಟುಂಬ ವ್ಯವಸ್ಥೆ ಇತ್ತು. ನಿರ್ಣಯಗಳನ್ನು ಮಹಿಳೆಯರು ಕೈಗೊಳ್ಳುತ್ತಿದ್ದರು. ಆದರೆ ಪಿತೃಪ್ರಧಾನ ಕುಟುಂಬ…
ಮೈಸೂರಲ್ಲಿ ನಿತ್ಯ ರಂಗ ಚಟುವಟಿಕೆ
March 30, 2019ಮೈಸೂರು: ಬೆಂಗ ಳೂರಿಗಿಂತಲೂ ಮೈಸೂರಿನಲ್ಲಿಯೇ ಹೆಚ್ಚು ರಂಗಭೂಮಿ ಚಟುವಟಿಕೆಗಳು ನಡೆ ಯುತ್ತಿವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿ ಕಾರ್ಜುನಸ್ವಾಮಿ ಅಭಿವ್ಯಕ್ತಪಡಿಸಿದರು. ರಂಗಾಯಣದ ವನರಂಗದಲ್ಲಿ ರಂಗ ಸಂಗಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಯೋಜಿಸ ಲಾಗಿದ್ದ ‘ರಂಗಸಂಗಮೋತ್ಸವ’ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕøತಿಗೆ ಹೆಸರಾಗಿರುವ ಮೈಸೂರಿನಲ್ಲಿ ನಾಟಕ ಪ್ರದರ್ಶನಗಳು ನಿರಂತರ ನಡೆಯುತ್ತಿವೆ. ಅದಕ್ಕೆ ಪ್ರತಿ ಯಾಗಿ ಇಲ್ಲಿನ ಕಲಾಭಿಮಾನಿಗಳು ತಮ್ಮನ್ನು ಒಗ್ಗೂಡಿಸಿಕೊಂಡಿದ್ದಾರೆ ಎಂದರು. ರಂಗಕಲೆ ಉಳಿಯಬೇಕಾದರೆ ಪೋಷ ಕರು…
ಪರಿಷತ್ ಸದಸ್ಯ ರಘು ಆಚಾರ್ ವಿರುದ್ಧ ಬಿಜೆಪಿ ದೂರು ದಾಖಲು
March 30, 2019ಮೈಸೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ವಿರುದ್ಧ ಬಿಜೆಪಿ ದೂರು ನೀಡಿದೆ. ಮೈಸೂರು-ಕೊಡಗು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ಸಿಂಹ ಅವರು, ಕರ್ನಾಟಕ ಕಂಡ ಧೀಮಂತ ನಾಯಕ ದೇವರಾಜ ಅರಸು ಅವರ ವಿರುದ್ಧ ಮಾತನಾಡಿದ್ದಾರೆಂದು ರಘು ಆಚಾರ್ ಸುದ್ದಿ ಗೋಷ್ಠಿಯಲ್ಲಿ ಕಪೋಲ ಕಲ್ಪಿತ ಆರೋಪ ಮಾಡಿದ್ದಾರೆ. ಈ ಮೂಲಕ ಕ್ಷೇತ್ರದ ಮತದಾರರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ ಪ್ರತಾಪ ಸಿಂಹ ಪಕ್ಷ ಹಾಗೂ ಜಾತಿಯ ಹೆಸರಿನಲ್ಲಿ…
ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಉಲ್ಲಂಘಿಸಿದರೆ 3 ವರ್ಷ ಶಿಕ್ಷೆ
March 30, 2019ಮೈಸೂರು: ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಉಲ್ಲಂ ಘಿಸುವವರಿಗೆ ಮೂರು ವರ್ಷ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗುತ್ತದೆ ಎಂದು ಮೈಸೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಇಂದಿಲ್ಲಿ ತಿಳಿಸಿದರು. ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ರಾಜೇಂದ್ರ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರಗಳ (ನಿಷೇಧ ಕಾಯ್ದೆ) ಪ್ರಾಧಿಕಾರ, ಜಿಲ್ಲಾ…