ಮೈಸೂರು: ಈ ಬಾರಿ ಹಿಂದೆಂದೂ ಕಂಡರಿಯದ ಬೇಸಿಗೆ ತಾಪಮಾನ. ಬಂಡೀಪುರ ಅರಣ್ಯ ಪ್ರದೇಶ, ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ಸುತ್ತಮುತ್ತ ಹಾಗೂ ರಾಜ್ಯದ ಹಲವು ಕಡೆ ಅಗ್ನಿ ಅವಘಡಗಳು ಸಂಭವಿಸಿವೆ. ಪ್ರಾಣ ಹಾನಿ, ಆಸ್ತಿಪಾಸ್ತಿ ಹಾಗೂ ಅರಣ್ಯ ಸಂಪ ತ್ತನ್ನು ಅಗ್ನಿ ಅವಘಡದಿಂದ ರಕ್ಷಿಸಲು ಮೈಸೂರು ಪ್ರಾಂತ್ಯದ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯಾಧುನಿಕ ಪರಿಕರಗಳೊಂದಿಗೆ ದಿನದ 24 ಗಂಟೆಯೂ ಸಜ್ಜಾಗಿದೆ. ಮೈಸೂರು ಪ್ರಾಂತ್ಯ ವ್ಯಾಪ್ತಿಗೆ ಮೈಸೂರು, ಚಾಮ ರಾಜನಗರ, ಕೊಡಗು, ಹಾಸನ ಹಾಗೂ ಮಂಡ್ಯ…
ವಿಶ್ವ ರಂಗಭೂಮಿ ದಿನದ ಅಂಗವಾಗಿ ಮಾ.27ರಿಂದ ರಂಗೋತ್ಸವ
March 24, 2019ಮೈಸೂರು: ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಮಾ.27ರಿಂದ 29ರವರೆಗೆ ರಂಗೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ಹೆಚ್.ಎಸ್. ಸುರೇಶ್ ಬಾಬು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಮೈಸೂರಿನ ಕಲಾ ಮಂದಿ ರದ ಕಿರುರಂಗಮಂದಿರದಲ್ಲಿ ರಂಗೋ ತ್ಸವ ನಡೆಯಲಿದ್ದು, ಮಾ.27ರಂದು ಸಂಜೆ 6ಕ್ಕೆ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಚಿಂತಕ ಪ್ರೊ.ಕಾಳೇಗೌಡ ನಾಗವಾರ ಉದ್ಘಾಟನೆ ನೆರವೇರಿಸಲಿದ್ದು, ಅತಿಥಿಯಾಗಿ ಕನ್ನಡ ಮತ್ತು ಸಂಸ್ಕøತಿ…
ಇಂದಿನಿಂದ ಬೇಸಿಗೆ ಕ್ರಿಕೆಟ್ ಶಿಬಿರ
March 24, 2019ಮೈಸೂರು: ಮೈಸೂರಿನ ಶ್ರೀಗಂಧ ಕ್ರಿಕೆಟರ್ಸ್ ವತಿಯಿಂದ ಸೀಜೀಸ್ ಹಬ್ ಆಫ್ ಕ್ರಿಕೆಟ್ ಸಹಯೋಗದೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿದ್ದ 6 ವರ್ಷ ಮೇಲ್ಪಟ್ಟ ಬಾಲಕ-ಬಾಲಕಿಯರಿಗೆ ಉಚಿತ ಬೇಸಿಗೆ ಕ್ರಿಕೆಟ್ ಶಿಬಿರವನ್ನು ಮಾ.24ರಿಂದ ಮೇ 31ರವರೆಗೆ ಹತ್ತು ವಾರಗಳ ಕಾಲ ಪ್ರತಿ ದಿನ ಬೆಳಿಗ್ಗೆ 5.45ರಿಂದ 8.30ರವರೆಗೆ ಕುವೆಂಪುನಗರ, ಸರಸ್ವತಿಪುರಂ, ಜೆ.ಪಿ.ನಗರ ಮತ್ತು ವಿಜಯನಗರ ಈ 4 ಸ್ಥಳಗಳಲ್ಲಿ ನಡೆಸಲಾಗುವುದು. ಅರ್ಹ ಹಾಗೂ ಅನುಭವಿ ತರಬೇತುದಾರರಿಂದ ವೃತ್ತಿಪರತೆ ಹಾಗೂ ವೈಜ್ಞಾನಿಕವಾಗಿ ಕ್ರಿಕೆಟ್ ತರಬೇತಿಯನ್ನು ನೀಡಲಾಗುವುದು. ಬಿಪಿಎಲ್ ಕಾರ್ಡ್ ಹೊಂದಿರುವ ಆರ್ಥಿಕವಾಗಿ…
ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿರೋಧಿಸಲು ರಾಜ್ಯ ಮಟ್ಟದ ಚಿಂತನ ಸಭೆ
March 24, 2019ಮೈಸೂರು: ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಜಾರಿಗೆ ತರುವುದನ್ನು ವಿರೋಧಿಸಲು ರಾಜ್ಯ ಮಟ್ಟದ ಚಿಂತನ ಸಭೆಯನ್ನು ಮಾ.24ರಂದು ಬೆಳಿಗ್ಗೆ 10.30 ಗಂಟೆಗೆ ರಾಮಕೃಷ್ಣನಗರ ಇ ಮತ್ತು ಎಫ್ ಬ್ಲಾಕ್ನಲ್ಲಿರುವ ನೃಪತುಂಗ ಕನ್ನಡ ಶಾಲೆಯಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ದರಾಮಯ್ಯ, ಕುವೆಂಪು ಭಾಷಾ ಭಾರತೀಯ ಅಧ್ಯಕ್ಷ ಮರುಳಸಿದ್ದಪ್ಪ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್, ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರ ಭೂಪತಿ, ಬೆಂಗಳೂರಿನ ಪ್ರಾಧ್ಯಾಪಕ ಎಂ….
ಕವಿ ನಿಸಾರ್ ಅಹಮದ್ರಿಗೆ ಪತ್ನಿ ವಿಯೋಗ
March 24, 2019ಬೆಂಗಳೂರು: ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮ್ಮದ್ ಅವರ ಪತ್ನಿ ಶಾಹನ್ವಾಜ್ ಬೇಗಂ (77) ಅವರು ಇಂದು ಬೆಳಿಗ್ಗೆ ನಿಧನ ರಾದರು. ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು, 17 ವರ್ಷಗಳ ಹಿಂದೆ ನಿವೃತ್ತರಾಗಿ ದ್ದರು. ಇಂದು ಬೆಳಿಗ್ಗೆ 5.30ರ ಸುಮಾರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ನಿಸಾರ್ ಅಹಮ್ಮದ್, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ವರ್ಗವನ್ನು ಅಗಲಿದ್ದಾರೆ. ಅವರ ಓರ್ವ ಪುತ್ರಿ ಅಮೇರಿಕಾದಲ್ಲಿ ನೆಲೆಸಿದ್ದು, ಅವರು ಬಂದ…
ವಿವಿಧ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸ್ಟ್ರಾಂಗ್ ರೂಂಗಳಿಗೆ ಎಲೆಕ್ಟ್ರಾನಿಕ್ ಮತಯಂತ್ರಗಳ ಸ್ಥಳಾಂತರ
March 24, 2019ಮೈಸೂರು: ಲೋಕಸಭಾ ಚುನಾವಣೆಗೆ ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ದಾಸ್ತಾನು ಮಾಡಲಾಗಿದ್ದ ವಿದ್ಯುನ್ಮಾನ ಮತಯಂತ್ರ ಗಳನ್ನು ಶನಿವಾರ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸ್ಟ್ರಾಂಗ್ ರೂಂಗಳಿಗೆ ಬಿಗಿ ಭದ್ರತೆಯಲ್ಲಿ ರವಾನಿಸಲಾಯಿತು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಮೈಸೂರು ಜಿಲ್ಲೆಯ ಆರು ವಿಧಾನ ಸಭಾ ಕ್ಷೇತ್ರಗಳು ಒಳಪಡಲಿದ್ದು, ಈ ಕ್ಷೇತ್ರಗಳಲ್ಲಿ ಬಳಸುವ ಮತಯಂತ್ರಗಳನ್ನು ಕಳೆದ ಒಂದು ತಿಂಗಳಿಂದ ನಂಜರಾಜ ಬಹದ್ದೂರ್ ಛತ್ರದಲ್ಲಿ ಶೇಖರಿಸಲಾಗಿತ್ತು. ಇದರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್.ನಗರ, ಚಾಮರಾಜನಗರ ಕ್ಷೇತ್ರದ ವರುಣಾ, ಹೆಚ್.ಡಿ.ಕೋಟೆ, ನಂಜನ ಗೂಡು ಹಾಗೂ…
ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ಗೆ ಅಧಿಕಾರ ಅಗತ್ಯ
March 24, 2019ಮೈಸೂರು: 17ನೇ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ, ಕೋಮು ವಾದಿಗಳ ವಿರುದ್ಧ ನಡೆಯುತ್ತಿರುವ ಸಂಗ್ರಾಮ ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿ ವಾರ ಲೋಕಸಭಾ ಚುನಾವಣೆ ಹಿನ್ನೆಲೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆ ಯಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗಿ ಕೋಮುವಾದ ಮತ್ತು ಮೂಲಭೂತ ವಾದವನ್ನು ಸೋಲಿಸದಿದ್ದರೇ ಸಂವಿ ಧಾನಕ್ಕೆ ಗಂಡಾಂತರ ತಪ್ಪಿದ್ದಲ್ಲ. ಸಂವಿ ಧಾನದ ಉಳಿವಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್…
ನಂಜುಮಳಿಗೆ ಸುತ್ತಮುತ್ತ ಮತದಾನದ ಅರಿವು
March 24, 2019ಮೈಸೂರು: ಅರಿವು ಸಂಸ್ಥೆ ವತಿಯಿಂದ ಇಂದು ನಗರದ ನಂಜುಮಳಿಗೆ ವೃತ್ತದ ಸುತ್ತಮುತ್ತ ಮನೆ-ಮನೆಗೆ ತೆರಳಿ ತಾಂಬೂಲ, ಹಣ್ಣು, ಹೂವು ಮತ್ತು ಕುಂಕುಮ ನೀಡಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕರಪತ್ರವನ್ನು ನೀಡುವು ದರ ಮೂಲಕ ಸಾರ್ವಜನಿಕರಿಗೆ ಮತದಾನದ ಅರಿವು ಮೂಡಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಮಹರ್ಷಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ತೇಜಸ್ ಶಂಕರ್ ಮಾತನಾಡಿ, ಪ್ರಜಾತಂತ್ರ ದೇಶದಲ್ಲಿ ಮತದಾನ ಪ್ರಮುಖ ಹಕ್ಕಾಗಿದೆ. ಮತದಾನ ಎಂಬುದು ಅಖಂಡ ಪ್ರಜಾ ಸಮೂಹದ ಬದಲಾವಣೆಯ ಧ್ವನಿ. ಇದು ನಮಗೆ ಕೊಟ್ಟಿರುವ ಹಕ್ಕಾಗಿದೆ….
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಮಾಜಿ ಯೋಧ ಪಿ.ಕೆ.ಬಿದ್ದಪ್ಪ ಕರ್ನಾಟಕ ಪ್ರಜಾ ಪಾರ್ಟಿ ಅಭ್ಯರ್ಥಿ
March 24, 2019ಮೈಸೂರು: ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ)ಗೆ ಕೇಂದ್ರ ಚುನಾವಣಾ ಆಯೋಗ `ಹೊಲಿಗೆ ಯಂತ್ರ’ವನ್ನು ಚಿಹ್ನೆಯಾಗಿ ನೀಡಿದೆ ಎಂದು ತಿಳಿಸಿದ ಪಕ್ಷದ ಸಂಸ್ಥಾಪಕ ಹಾಗೂ ಮೈಸೂರು ವಕೀಲರ ಸಂಘದ ಕಾರ್ಯದರ್ಶಿ ಡಾ.ಬಿ. ಶಿವಣ್ಣ, ಇದೇ ವೇಳೆ ಮಾಜಿ ಸೈನಿಕ ಪಿ.ಕೆ.ಬಿದ್ದಪ್ಪ ಅವರನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಎಂದು ಘೋಷಣೆ ಮಾಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಚಿಹ್ನೆ ಇರುವ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಳೆದ 2018ರ ಮೇ ತಿಂಗಳಲ್ಲಿ…
ಚುನಾವಣಾ ಅಕ್ರಮಕ್ಕೆ ಬ್ರೇಕ್ ಹಾಕಲು `ಸಿ-ವಿಜಿಲ್’ ಆ್ಯಪ್
March 24, 2019ಮೈಸೂರು: ಚುನಾವಣೆ ವೇಳೆ ಹಣ, ಮದ್ಯ ಸೇರಿದಂತೆ ಆಮಿಷ ವೊಡ್ಡುವುದು, ಬೆದರಿಕೆ ಹಾಕುವುದು ಹಾಗೂ ರಾಜಕೀಯ ಪಕ್ಷಗಳ ಕಾರ್ಯ ಕರ್ತರಿಗೆ ಮೂಗುದಾರ ಹಾಕಲು ಇದೇ ಮೊದಲ ಬಾರಿ ಚುನಾವಣಾ ಆಯೋಗ `ಆ್ಯಪ್’ವೊಂದನ್ನು ರೂಪಿಸಿದ್ದು, ಈ ಮೂಲಕ ತ್ವರಿತಗತಿಯಲ್ಲಿ ಆಯೋಗ ಕ್ರಮ ಕೈಗೊಳ್ಳಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಯಲ್ಲಿ ಕೇಂದ್ರ ಚುನಾವಣಾ ಆಯೋಗ ಅಕ್ರಮ ತಡೆಗೆ ದೇಶದಾದ್ಯಂತ `ಸಿ-ವಿಜಿಲ್’ ಆ್ಯಪ್ ಬಿಡುಗಡೆ ಮಾಡಿದ್ದು, ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತಯಾಚನೆ ವೇಳೆ ನಡೆಸುವ ಅಕ್ರಮ ಗಳ…