ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಜೀವ ಶಾಸ್ತ್ರ ವಿಷಯಕ್ಕೆ ಸಂಬಂಧಪಡದ ಮತ್ತು ಗೊಂದಲ ಮೂಡಿಸುವ ಪ್ರಶ್ನೆ ಗಳ ಬಗ್ಗೆ ವಿದ್ಯಾರ್ಥಿಗಳು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಅರಿಯಲು ಪದವಿ ಪೂರ್ವ ಶಿಕ್ಷಣ ಮಂಡಳಿ ಮೂವರು ಸದಸ್ಯರ ಸಮಿತಿ ರಚಿಸಿ, ವರದಿ ನೀಡುವಂತೆ ತಜ್ಞರಿಗೆ ಸೂಚಿಸಿದೆ. ಗುರುವಾರ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆದಿತ್ತು, ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂದು ವಿದ್ಯಾರ್ಥಿ ಗಳು ಸಹಾಯವಾಣಿ ಮೂಲಕ ಪಿಯುಸಿ ಮಂಡಳಿಗೆ ದೂರು ನೀಡಿದ್ದರು. ಪ್ರಶ್ನೆ ಗಳು ಪಠ್ಯದ ಒಳಗೆ ನೀಡಲಾಗಿದೆಯೇ ಅಥವಾ…
ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆ, ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು
March 17, 2019ಮೈಸೂರು: ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿ ವರ್ಗ ಸಿದ್ಧತೆ ನಡೆಸುತ್ತಿದ್ದರೆ, ಅತ್ತ ರಾಜ ಕೀಯ ಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ-ಗೆಲುವಿಗೆ ಸಂಬಂಧಿಸಿದಂತೆ ಹಲವು ಲೆಕ್ಕಾಚಾರಗಳು ಗರಿಗೆದರಿವೆ. ಮತ್ತೊಂದೆಡೆ ಸಾರ್ವಜನಿಕ ವಲಯದಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆ ಜೋರಾಗಿದೆ. ಚುನಾವಣೆ ವಿವಿಧ ಹಂತಗಳ ಕರ್ತ ವ್ಯದ ಬಗ್ಗೆ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗಕ್ಕೆ ತರಬೇತಿ ಮೂಲಕ ಸುಲಲಿತವಾಗಿ ಚುನಾವಣೆ ನಡೆಸಲು ಸಜ್ಜುಗೊಳಿಸಲಾಗು ತ್ತಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಪೊಲೀಸ್ ಇಲಾಖೆ ಹದ್ದಿನ ಕಣ್ಣಿರಿಸಿದ್ದರೆ, ಯಾವುದೇ ರೀತಿ ಪ್ರಚೋದನೆಗೆ…
ಮತದಾನಕ್ಕೆ 48 ಗಂಟೆ ಇರುವಾಗ ಜಾಹೀರಾತು ಪ್ರಕಟಿಸಲು ಅನುಮತಿ ಕಡ್ಡಾಯ
March 17, 2019ಮೈಸೂರು: ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿ ಹಾಗೂ ಜಾಹೀ ರಾತುಗಳ ಬಗ್ಗೆ ನಿಗಾ ವಹಿಸಲು ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ ರಚಿಸಲಾಗಿರುತ್ತದೆ. ಸಮಿತಿಯು ಮೈಸೂರು ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮಾಧ್ಯಮದವರಿಗೆ ಚುನಾವಣಾ ನೀತಿ ನಿಯಮ ಕುರಿತು ಸಲಹೆ ಸೂಚನೆ ಹಾಗೂ ವಿವಿ ಪ್ಯಾಟ್ ಬಳಕೆ ಅದರಿಂದ ಯಾವುದೇ ರೀತಿಯಲ್ಲಿ ವ್ಯತ್ಯಾಸ ಕಂಡು ಬರುವುದಿಲ್ಲ ಎಂಬುದನ್ನು ಅರಿವು ಮೂಡಿ ಸಲು…
ಕಿರ್ಲೋಸ್ಕರ್ ಕಂಪನಿಯ ನೌಕರರಿಗೆ ಮತದಾನ ಜಾಗೃತಿ
March 17, 2019ಮೈಸೂರು: ಮೈಸೂರು ತಾಲೂಕು ಸ್ವೀಪ್ ಸಮಿತಿಯು ಶನಿವಾರ ತಾಲೂಕಿನ ಬೆಳವಾಡಿ ಗ್ರಾಮ ವ್ಯಾಪ್ತಿಯಲ್ಲಿರುವ ಕಿರ್ಲೋಸ್ಕರ್ ಕಂಪನಿಯ ನೌಕರರು ಹಾಗೂ ಸಿಬ್ಬಂದಿಗೆ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಮಂಜುಳಾ ಪಾಟೀಲ್ ಅವರು ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವಿವಿ ಪ್ಯಾಟ್ ಮತ್ತು ಇ.ವಿ.ಎಂಗಳ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತÀು. ಕಿಲೋ ಸ್ಕರ್ ಕಂಪನಿ ಸುಮಾರು 150ಕ್ಕೂ ಅಧಿಕ ನೌಕರರು ಭಾಗವಹಿಸಿದ್ದರು. ನೌಕರರಿಂದ ಅಣಕು ಮತದಾನ ಮಾಡಿಸಲಾಯಿತು. ಜೊತೆಗೆ ಯಾವ ಚಿಹ್ನೆಗೆ ಮತ ಚಲಾಯಿಸಿದ್ದೇವೆ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಯಿತು. ಮತದಾರರು ಯಾವುದೇ…
ರಾಜಕೀಯ ಪಕ್ಷಗಳಿಗೆ ತಮ್ಮ ಸ್ಥಿತಿಗತಿ ಮನವರಿಕೆ ಮಾಡಿಕೊಡಲು ಕಾರ್ಮಿಕ ಸಂಘಟನೆಗಳ ನಿರ್ಧಾರ
March 17, 2019ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಮಿಕರ ಬೇಡಿಕೆಗಳನ್ನು ಎಲ್ಲಾ ರಾಜಕೀಯ ಪಕ್ಷಗಳ ಮುಂದಿರಿಸಿ, ಅವುಗಳ ನಿಲುವು ವ್ಯಕ್ತಪಡಿಸಲು ಒತ್ತಾಯಿಸಿ ಹಾಗೂ ದುಡಿಯುವ ವರ್ಗದಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಮುಂದಾಗಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಜಾಗೃತಿ ಅಭಿಯಾನಕ್ಕಾಗಿ ಹೊರ ತಂದಿರುವ `ಕಾರ್ಮಿಕರ ಸನ್ನದು’ ಕಿರು ಪುಸ್ತಕ ಬಿಡುಗಡೆಗೊಳಿಸಿ ಮಾತ ನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಬಾಲಾಜಿರಾವ್, ಕೇಂದ್ರದ ಎನ್ಡಿಎ ಸರ್ಕಾರ ದುಡಿಯುವ ವರ್ಗವನ್ನು ಸಂಕಷ್ಟಕ್ಕೆ ದೂಡಿದ್ದು, ಕಾರ್ಮಿಕರು, ರೈತರು ಸೇರಿದಂತೆ…
ಲೋಕಸಭೆ ಚುನಾವಣೆಗೆ 18 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
March 17, 2019ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಲೋಕಸಭೆ ಚುನಾ ವಣೆಗೆ ತನ್ನ 18 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಮೂರನೇ ಪಟ್ಟಿಯಲ್ಲಿ ಮೇಘಾ ಲಯದ ತುರಾ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಮುಖುಲ್ ಸಂಗ್ಮಾ, ಅಸ್ಸಾಂನಲ್ಲಿ ಐವರು, ಮೇಘಾಲಯದಲ್ಲಿ ಇಬ್ಬರು, ಉತ್ತರ ಪ್ರದೇಶದಲ್ಲಿ ಒಬ್ಬರು, ಸಿಕ್ಕಿಂ ಮತ್ತು ನಾಗಾಲ್ಯಾಂಡ್ನಲ್ಲಿ ತಲಾ ಒಬ್ಬರು, ತೆಲಂಗಾಣದಲ್ಲಿ ಎಂಟು ಮಂದಿ ಅಭ್ಯರ್ಥಿಗಳಿದ್ದಾರೆ. ಅಸ್ಸಾಂನ ಸಿಲ್ಚಾರ್ ಲೋಕಸಭೆ ಕ್ಷೇತ್ರದಿಂದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸುಷ್ಮಿತಾ…
ಮಾಜಿ ಸ್ಪೀಕರ್ ಕೃಷ್ಣರ ಸಹಕಾರ ಕೋರಿದ ನಿಖಿಲ್ ಕುಮಾರಸ್ವಾಮಿ
March 17, 2019ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಅವರ ತಾಯಿ ಅನಿತಾ ಕುಮಾರಸ್ವಾಮಿ ಶನಿವಾರ ಮೈಸೂರಿನ ಕುವೆಂಪುನಗರ ದಲ್ಲಿರುವ ಮಾಜಿ ಸ್ಪೀಕರ್ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ, ಚುನಾವಣೆಗೆ ಸಹಕಾರ ಕೋರಿದರು. ಇದೇ ವೇಳೆ ತಮ್ಮ ಆಶೀರ್ವಾದ ಇರುವುದಾಗಿ ಕೃಷ್ಣ ಅವರು ನಿಖಿಲ್ಗೆ ಅಭಯ ನೀಡಿದರು. ನಂತರ ಮಾಧ್ಯಮದವರೊಂದಿಗೆ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ನಾವು ಹೋದ ಕಡೆಯೆಲ್ಲಾ ಮಂಡ್ಯ ಜನತೆ ಪ್ರೀತಿ, ವಿಶ್ವಾಸ ತೋರಿಸುತ್ತಿದ್ದಾರೆ. ನನ್ನ ಮೇಲೆ ನಂಬಿಕೆಯಿಟ್ಟು ಆಶೀರ್ವದಿಸುತ್ತಾರೆಂಬ ವಿಶ್ವಾಸವಿದೆ…
ಜನತೆಯ ಅಗತ್ಯತೆ, ಆಯ್ಕೆ ಅರಿತರೆ ಯಶಸ್ವಿ ಉದ್ಯಮಿಯಾಗಬಹುದು
March 17, 2019ಮೈಸೂರು: ಇಂದಿನ ಅಗತ್ಯತೆಗಳನ್ನು ಮಾರುಕಟ್ಟೆಯ ಸರಕಾಗಿಸಿ ಕೊಳ್ಳುವ ಕೌಶಲ್ಯ ಮತ್ತು ಜಾಣ್ಮೆಯನ್ನು ಬೆಳೆಸಿಕೊಂಡಾಗ ಮಾತ್ರ ಯಶಸ್ವಿ ಉದ್ಯಮಿ ಗಳಾಗಲು ಸಾಧ್ಯ ಎಂದು ಕೇರಳದ ಕೋಜ್ಹಿ ಕೋಡ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ)ನ ಪ್ರಾಧ್ಯಾಪಕ ಸಿ.ರಾಜು ತಿಳಿಸಿದರು. ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಎಂಬಿಎ ಮತ್ತು ಎಂಕಾಂ ವಿಭಾಗದಿಂದ ಆಯೋಜಿಸ ಲಾಗಿದ್ದ `ಮಾನವ ಸಂಪನ್ಮೂಲ, ಮಾರು ಕಟ್ಟೆ ಹಾಗೂ ಹಣಕಾಸು ನಿರ್ವಹಣೆ ಯಲ್ಲಿನ ಹೊಸ ದೃಷ್ಟಿಕೋನಗಳು’ ಕುರಿತ ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ…
ಸಂವಿಧಾನವನ್ನು ಪಠ್ಯಕ್ರಮದ ಬದಲು ಜನತೆಯ ಜೀವಪರ ಕಾನೂನೆಂದು ಅಧ್ಯಯನ ಮಾಡಿದರೆ ಹೆಚ್ಚು ಅನುಕೂಲ
March 17, 2019ಮೈಸೂರು: ಭಾರತ ವಿಶ್ವದ ಪ್ರಜಾಪ್ರಭುತ್ವ ರಾಷ್ಟ್ರ ಗಳಲ್ಲಿಯೇ ಅತ್ಯುತ್ತಮವಾದ ಸಂವಿಧಾನ ಹೊಂದಿದೆ. ನಮ್ಮ ಸಂವಿಧಾನವನ್ನು ಕಾನೂನು ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕದಂತೆ ಓದದೆ ದೇಶದ 130 ಕೋಟಿ ಜನತೆಯ ಅಭಿವೃದ್ಧಿ ಬಯಸುವ, ಜೀವ ಪರ ಕಾನೂನು ಎಂದು ಭಾವಿಸಿ ಅಧ್ಯ ಯನ ಮಾಡಬೇಕು ಎಂದು ಸುಪ್ರಿಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಅವರು ಇಂದಿಲ್ಲಿ ಸಲಹೆ ನೀಡಿದ್ದಾರೆ. ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನ ಪಿ.ಎಂ.ಚಿಕ್ಕಬೋರಯ್ಯ ಸಭಾಂಗಣದಲ್ಲಿ ಶನಿವಾರ ದಿ.ಕೆ.ಪುಟ್ಟ ಸ್ವಾಮಿ ಸ್ಮರಣಾರ್ಥ ನಡೆದ ದತ್ತಿ ಉಪ…
ಮುಡಾದಿಂದ ಬಲ್ಲಹಳ್ಳಿ ಭೂಸ್ವಾಧೀನ ಖಂಡಿಸಿ ಮಾ.19ರಂದು ರೈತರ ಪ್ರತಿಭಟನೆ
March 17, 2019ಮೈಸೂರು: ಬಡಾವಣೆ ನಿರ್ಮಿಸಲು ಬಲ್ಲಹಳ್ಳಿ ಸೇರಿ ಸುತ್ತಮುತ್ತಲ ಹಳ್ಳಿ ಗಳಲ್ಲಿ ಬಲವಂತವಾಗಿ ಭೂಸ್ವಾಧೀನಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಂದಾ ಗಿದೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ), ಮಾ.19ರಂದು ಮೈಸೂ ರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಕಾರ್ಯದರ್ಶಿ ಡಾ.ಗುರು ಪ್ರಸಾದ್, ಬಡಾವಣೆ ನಿರ್ಮಿಸುವ ಸಲುವಾಗಿ ಫಲವತ್ತಾದ ರೈತರ ಜಮೀನುಗಳನ್ನು ಮುಡಾ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು…