ಮೈಸೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯದ ಕುಲಪತಿ ಪ್ರೊ. ಡಿ. ಶಿವಲಿಂಗಯ್ಯ ಅವರ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಪಾಲ ವಜುಭಾಯಿ ವಾಲಾ ಅವರು ಪ್ರೊ. ಡಿ. ಶಿವಲಿಂಗ ಯ್ಯರ ಮನವಿ ಮೇರೆಗೆ ಅವಧಿ ವಿಸ್ತರಿಸಿದ್ದು, ಸರ್ಕಾರ ಇಂದು ಈ ಸಂಬಂಧ ಆದೇಶ ಹೊರಡಿಸಿದೆ. ಪ್ರೊ. ಶಿವಲಿಂಗಯ್ಯರ 3 ವರ್ಷಗಳ ಅವಧಿ ಮಾರ್ಚ್ 10ಕ್ಕೆ ಮುಕ್ತಾಯಗೊಂಡಿತ್ತು. ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿದ್ದ ಅವರನ್ನು 2016ರ ಮಾರ್ಚ್ 10 ರಂದು ಮುಕ್ತ ವಿವಿ ಕುಲಪತಿಯಾಗಿ…
ಕೇಂದ್ರ ರೈತ ವಿರೋಧಿ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ
March 12, 2019ಮೈಸೂರು: ಕೇಂದ್ರ ಸರ್ಕಾರವು ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮೈಸೂರು ಜಿ¯್ಲÁ ಕಾಂಗ್ರೆಸ್ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಮೈಸೂರು ರೈಲ್ವೆ ನಿಲ್ದಾಣದ ಮುಂಭಾಗ ವಿರುವ ಡಾ.ಬಾಬು ಜಗಜೀವನರಾಂ ವೃತ್ತದ ಬಳಿ ಸೋಮವಾರ ಜಮಾಯಿ ಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಸಮ್ಮಿಶ್ರ ಸರ್ಕಾರವು ರೈತರ ಸಾಲ ಮನ್ನಾ ಮಾಡಿದೆ. ಆದರೆ ಕೇಂದ್ರದ ಆಡಳಿತಾವಧಿ ಮುಗಿಯುತ್ತಾ ಬಂದಿದ್ದರೂ ರೈತರ ಸಾಲ ಮನ್ನಾ ಮಾಡದೆ ರೈತರಿಗೆ ಮೋಸ…
ಮನೆ ನಿರ್ಮಿಸುವವರಿಗೆ ಮಳೆ ಕೊಯ್ಲು ಕಡ್ಡಾಯ ಮಾಡಿ
March 12, 2019ಮೈಸೂರು: ಮನೆ ಕಟ್ಟುವ ಸಂದರ್ಭದಲ್ಲೇ ಮಳೆ ನೀರು ಕೊಯ್ಲು ಸಹ ಅಳವಡಿಸಿಕೊಳ್ಳು ವಂತೆ ಮನೆ ಮತ್ತು ಕಟ್ಟಡ ಕಟ್ಟುವ ಮಾಲೀಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡ ಬೇಕು. ಅದನ್ನು ಪಾಲಿಸದೆ ಕಟ್ಟಡ ನಿರ್ಮಿಸಲು ಮುಂದಾಗುವವರಿಗೆ ಮಹಾನಗರಪಾಲಿಕೆ ಅಧಿಕಾರಿಗಳು ಲೈಸೆನ್ಸ್ ನೀಡಬಾರದು ಎಂದು ಚಾಮರಾಜ ಕ್ಷೇತ್ರ ಶಾಸಕ ಎಲ್.ನಾಗೇಂದ್ರ ಅಭಿಪ್ರಾಯಪಟ್ಟರು. ಮೈಸೂರಿನ ಇಂಜಿನಿಯರುಗಳ ಸಂಸ್ಥೆ ಸಭಾಂಗಣದಲ್ಲಿ ಸೋಮವಾರ ಸರ್ ಎಂ.ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳ ಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಉಷ್ಣಾಂಶ…
ರೈತಮಿತ್ರ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ವತಿಯಿಂದ ಮಾವು, ಬಾಳೆ ಮಾಗಿಸುವ ಘಟಕ ಆರಂಭಿಸಲು ನಿರ್ಧಾರ
March 12, 2019ಮೈಸೂರು: ರೈತಮಿತ್ರ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ವತಿಯಿಂದ ಸಾವಯವ ವಿಧಾನ ದಲ್ಲಿ ಮಾವು ಮತ್ತು ಬಾಳೆ ಹಣ್ಣು ಮಾಗಿಸುವ ಘಟಕ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಕಂಪನಿ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಆವರಣದ ಶ್ರೀ ರಾಜೇಂದ್ರ ಭವನದಲ್ಲಿ ಕಂಪನಿ ಹಾಗೂ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳ ಹಣ್ಣು ಮತ್ತು ತರಕಾರಿ ಬೆಳೆಗಾರರ ಸಂಘದ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತರಕಾರಿ ಬೆಳೆಗಾರ ರೈತರ ಸಂವಾದ ಮತ್ತು ಮಣ್ಣು ಪರೀಕ್ಷಾ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ…
ಮಾ.13, 14ರಂದು ಪ್ರವಾಸೋದ್ಯಮ ಸಂಬಂಧ ರಾಜ್ಯ ಮಟ್ಟದ ವಿಚಾರ ಸಂಕಿರಣ
March 12, 2019ಮೈಸೂರು: ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ 40ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಕಾಲೇಜಿನ ವಾಣಿಜ್ಯ ಶಾಸ್ತ್ರ, ಇತಿಹಾಸ ಹಾಗೂ ಐಕ್ಯೂಎಸಿ ವಿಭಾಗಗಳು ಮತ್ತು ಪ್ರವಾ ಸೋದ್ಯಮ ಇಲಾಖೆ ಜಂಟಿ ಆಶ್ರಯದಲ್ಲಿ ಮಾ.13 ಮತ್ತು 14ರಂದು `ಕರ್ನಾಟಕದಲ್ಲಿ ಪಾರಂಪರಿಕ ಮತ್ತು ಆರೋಗ್ಯ ಪ್ರವಾಸೋದ್ಯಮ’ ಕುರಿತಂತೆ ರಾಜ್ಯ ಮಟ್ಟದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಮರೀಗೌಡ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನ ಪಿ.ಎಂ.ಚಿಕ್ಕಬೋರಯ್ಯ ಸಭಾಂಗಣದಲ್ಲಿ ಮಾ.13ರಂದು ಬೆಳಿಗ್ಗೆ 9ಕ್ಕೆ…
ಸಂಸದ ಪ್ರತಾಪ್ ಸಿಂಹರ ಪ್ರಗತಿ ಪುಸ್ತಕದ ಬಗ್ಗೆ ಮಾಜಿ ಎಂಎಲ್ಸಿ ಆಕ್ಷೇಪ
March 12, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದರು ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಹೊರ ತಂದಿರುವ ಪುಸ್ತಕ ಸುಳ್ಳಿನ ಕಂತೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಅಧ್ಯಕ್ಷ್ಷ ಕೆ.ಸಿ.ಪುಟ್ಟಸಿದ್ಧಶೆಟ್ಟಿ, ಸಂಸ ದರು ಕ್ಷೇತ್ರದ ಅಭಿವೃದ್ಧಿಗೆ ತಾವು ಕೈಗೊಂಡ ಕೆಲಸ-ಕಾರ್ಯದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದಾರೆ. ಯಾವ ಯೋಜನೆಗೆ…
ಆರ್ಟಿಐನಡಿ ಮಾಹಿತಿ ನೀಡದ ಮೈಸೂರು ತಾಲೂಕು ಮಾಜಿ ತಹಸೀಲ್ದಾರ್ಗೆ 10 ಸಾವಿರ ರೂ. ದಂಡ
March 12, 2019ಮೈಸೂರು: ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರೊಬ್ಬರು ಕೇಳಿದ್ದ ಮಾಹಿತಿಯನ್ನು ನೀಡದ ಕಾರಣ ಮೈಸೂರು ತಾಲೂಕಿನ ಹಿಂದಿನ ತಹಸೀಲ್ದಾರ್ ರಮೇಶ್ಬಾಬು ಅವರಿಗೆ ಕರ್ನಾಟಕ ಮಾಹಿತಿ ಹಕ್ಕು ಆಯೋಗ 10 ಸಾವಿರ ರೂ. ದಂಡ ವಿಧಿಸಿದೆ. ದಂಡದ ಮೊತ್ತವನ್ನು ರಮೇಶ್ ಬಾಬು ವೇತನದಲ್ಲಿ ಕಡಿತಗೊಳಿಸಿ ಆರ್ಟಿಐ ಕಾಯಿದೆ ಖಾತೆಗೆ ಜಮೆ ಮಾಡಬೇಕೆಂದು ಮೈಸೂರು ವಿಭಾಗಾಧಿಕಾರಿ ಶಿವೇಗೌಡ ಅವರಿಗೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಎಲ್. ಕೃಷ್ಣಮೂರ್ತಿ ಆದೇಶ ನೀಡಿದ್ದಾರೆ. ವಿವರ: ಮೈಸೂರಿನ ರಾಮಕೃಷ್ಣನಗರದ ಜಿ ಬ್ಲಾಕ್ ನಿವಾಸಿ ವಕೀಲ ಎಸ್.ಟಿ….
ಕಾರ್ಯ ಕ್ಷೇತ್ರದ ಪರಿಣತರಿಂದ ಜಲಾಮೃತ ಕರಡು ಮಾರ್ಗಸೂಚಿ ತಯಾರಿ
March 12, 2019ಮೈಸೂರು: ತಂತ್ರಜ್ಞಾನದ ಸಮರ್ಪಕ ಬಳಕೆ, ವೈಜ್ಞಾನಿಕ ವಿಶ್ಲೇಷಣೆ ಹಾಗೂ ಜಲ ಪ್ರಜ್ಞೆ ಮೂಡಿಸುವ ಮೂಲಕ ಜಲ ವರ್ಷ-2019ರ ಜಲ ಸಂರಕ್ಷಣಾ ಅಭಿಯಾನ ವನ್ನು ಮುಂದಿನ 3 ವರ್ಷಗಳಿಗೆ ಸುಸ್ಥಿರ ಕಾರ್ಯ ಚಟು ವಟಿಕೆಯಾಗಿ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಖ್ ಪ್ರಕಟಿಸಿದ್ದಾರೆ. ನಗರದ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಎಸ್.ಕೆ. ಡೇ ಹಾಲ್ನಲ್ಲಿ ಆರ್.ಡಿ.ಪಿ.ಆರ್ ಮತ್ತು ಎಸ್.ಐ.ಆರ್.ಡಿ. ಸಹಯೋಗದಲ್ಲಿ…
ಡಿಜಿಟಲ್ ಮಾರುಕಟ್ಟೆ ಸಾಂಪ್ರದಾಯಿಕ ನೆಲೆಗಟ್ಟಿನಲ್ಲಿ ಸಾಗುತ್ತಿದೆ: ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್
March 12, 2019ಮೈಸೂರು: ಡಿಜಿಟಲ್ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದ್ದು, ಕೇವಲ ವಾಣಿಜ್ಯ ಮತ್ತು ನಿರ್ವಹಣೆಯ ಅಂಶವಾಗಿ ಮಾತ್ರವಲ್ಲದೇ, ಸಾಂಪ್ರ ದಾಯಿಕ ನೆಲೆಗಟ್ಟಿನಲ್ಲಿ ಸಾಗುತ್ತಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಹೇಳಿದರು. ನಗರದ ಸರಸ್ವತಿಪುರಂನಲ್ಲಿರುವ ಟಿಟಿಎಲ್ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಡಿಜಿಟಲ್ ಮಾರುಕಟ್ಟೆ ಮತ್ತು ವೃತ್ತಿಜೀವನದ ಅವಕಾಶಗಳು’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ವಾಣಿಜ್ಯ ಕೋರ್ಸ್ಗಳಲ್ಲಿ ತಂತ್ರಜ್ಞಾನದ ವಿಷಯ ಅಳ ವಡಿಸುವ ಮೂಲಕ ವೃತ್ತಿ ಜೀವನಕ್ಕೆ ಸಹಕಾರಿಯಾಗುವಂತೆ…
ಕರ್ನಾಟಕದಲ್ಲಿ ಏ.18, ಏ.23ರಂದು ಚುನಾವಣೆ
March 11, 2019ಬೆಂಗಳೂರು: 17ನೇ ಲೋಕಸಭಾ ಚುನಾ ವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ದೇಶದಲ್ಲಿ 7 ಹಂತಗಳಲ್ಲಿ ಚುನಾ ವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಯು ಏ.18ರಂದು ಮತ್ತು ಎರಡನೇ ಹಂತದ ಚುನಾವಣೆ ಏ.23ರಂದು ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್ ಹೇಳಿದರು. ಇಂದು ಸಂಜೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಅವರು, ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಿದ್ದು, ಅದರಲ್ಲಿ 5 ಪರಿಶಿಷ್ಟ ಜಾತಿ ಮೀಸಲು…










