ಮೈಸೂರು: ಕೆಎಸ್ ಆರ್ಟಿಸಿ ಮೈಸೂರು ನಗರ ಸಾರಿಗೆ ವತಿಯಿಂದ ಮೈಸೂರು ನಗರದ ಹಳೇ ಮತ್ತು ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸೋಮವಾರದಿಂದ ಎರಡು ಮಾರ್ಗ ಗಳಲ್ಲಿ ಬಸ್ ಸಂಚಾರ ಆರಂಭಿಸಲಾಗಿದೆ. ಮೈಸೂರಿನ ಹಳೇ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಈ ನೂತನ ಬಸ್ ಸಂಚಾರ ವ್ಯವಸ್ಥೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಕೆ.ವಂಟಿ ಗೋಡಿ ಇಂದು ಚಾಲನೆ ನೀಡಿದರು. `80 ಎಲ್ಸಿ’ ಹಾಗೂ `94 ಎಲ್ಸಿ’ ಮಾರ್ಗ ಸಂಖ್ಯೆಯ ಎರಡು ಬಸ್ಗಳು ನಗರ ಬಸ್ ನಿಲ್ದಾಣದಿಂದ ಚಾಮ ರಾಜಪುರಂನಲ್ಲಿರುವ…
ಮೈಸೂರು ಜಿಲ್ಲಾ ಕಸಾಪ ಅಧ್ಯಕ್ಷರಿಗೆ ನೋಟೀಸ್
February 25, 2019ಮೈಸೂರು: ಹಲವು ಆರೋಪಗಳನ್ನು ಎದುರಿಸುತ್ತಿ ರುವ ಪಶುವೈದ್ಯ, ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ವಿರುದ್ಧ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವಿಚಾರಣೆ ಕೈಗೆತ್ತಿಕೊಂಡಿದ್ದು, ನೋಟೀಸ್ ಜಾರಿ ಮಾಡಿದೆ. ಫೆ.27ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಜಂಟಿ ನಿರ್ದೇಶಕರ (ರಾಜ್ಯ ವಲಯ) ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ನಲ್ಲಿ ತಿಳಿಸಲಾಗಿದೆ. ಲೇಖಕ ಹಾಗೂ ಸಾಹಿತಿ ಬನ್ನೂರು ಕೆ.ರಾಜು ಅವರು ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಪಶು…
ರೇಷ್ಮೆಯಲ್ಲಿ ಆದಾಯಕ್ಕಿಂತ ನಷ್ಟವೇ ಜಾಸ್ತಿ, ನಮಗೂ ಬೆಂಬಲ ಬೆಲೆ ನೀಡಿ ಕಾಪಾಡಿ…
February 25, 2019ಮೈಸೂರು: ಮೈಸೂರಿನ ಶ್ರೀರಾಮಪುರದಲ್ಲಿರುವ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಆವರಣದಲ್ಲಿ ಭಾನು ವಾರ ನಡೆದ ರೇಷ್ಮೆ ಕೃಷಿ ಮೇಳ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೇಷ್ಮೆ ಬೆಳೆಗಾರರು ತಮ್ಮ ಸಂಕಷ್ಟ ಪರಿಸ್ಥಿತಿಯನ್ನು ಪರಿ ಪರಿಯಾಗಿ ತೋಡಿ ಕೊಂಡರು. ರೇಷ್ಮೆಗೆ ವೈಜ್ಞಾನಿಕ ದರ ನಿಗದಿ ಮಾಡುವಲ್ಲಿ ಇಲಾಖೆ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ, ಜವಳಿ ಖಾತೆ, ರೇಷ್ಮೆ ಇಲಾಖೆ ವತಿ ಯಿಂದ ಆಯೋಜಿಸಿದ್ದ…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಮೋದಿ ಚಾಲನೆ
February 25, 2019ಲಖನೌ: ಒಂದು ಕೋಟಿಗೂ ಅಧಿಕ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ.ಗಳ ಮೊದಲ ಕಂತಿನ ಹಣವನ್ನು ನೇರ ವರ್ಗಾವಣೆ ಮಾಡುವುದರೊಂದಿಗೆ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು. ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಯೋಜನೆಗೆ ಚಾಲನೆ ನೀಡಿದ ಅವರು, 1.01 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂ.ಗಳ ಮೊದಲ ಕಂತಿನ ಹಣವನ್ನು ನೇರ ನಗದು ವರ್ಗಾವಣೆ ಮಾಡಿ ದರು. ಉಳಿದ ಫಲಾನುಭವಿಗಳಿಗೆ ಒಂದೆ…
ಮೈಸೂರಿನ ಎಪಿಎಂಸಿಯಲ್ಲಿ ರೇಷ್ಮೆಗೂಡು ಮಾರಾಟ ಮಾರುಕಟ್ಟೆ ಆರಂಭ
February 25, 2019ಮೈಸೂರು: ರೇಷ್ಮೆ ಬೆಳೆಗಾರರಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಎರಡು ಎಕರೆ ವಿಸ್ರ್ತೀಣದ ಜಾಗದಲ್ಲಿ ಪ್ರತ್ಯೇಕ ಸುಸಜ್ಜಿತ ಮಾರು ಕಟ್ಟೆ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರಿನ ಬಂಡೀಪಾಳ್ಯದಲ್ಲಿರುವ ಎಪಿಎಂಸಿ ಆವರಣದಲ್ಲಿ ಭಾನುವಾರ ನೂತನವಾಗಿ ಆರಂಭಿಸಿ ರುವ ರೇಷ್ಮೆಗೂಡಿನ ಮಾರುಕಟ್ಟೆಯನ್ನು ಉದ್ಘಾ ಟಿಸಿ ಮಾತನಾಡಿದ ಅವರು, ಮೈಸೂರು, ಚಾಮ ರಾಜನಗರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗಲೆಂಬ ಕಾರಣ ದಿಂದ ಮೈಸೂರಿನ ಎಪಿಎಂಸಿಯಲ್ಲಿ ಇದೇ ಮೊದಲ…
ನಾನು ಸಿಎಂ ಆಗುವುದನ್ನು 3 ಬಾರಿ ತಪ್ಪಿಸಲಾಯಿತು…ಬೇಡ ಎಂದರೂ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ
February 25, 2019ದಾವಣಗೆರೆ: ದಲಿತ ಸಮುದಾಯವನ್ನು ತುಳಿಯಲಾಗುತ್ತಿದೆ. ನಾನು ಮುಖ್ಯಮಂತ್ರಿ ಯಾಗುವುದನ್ನು 3 ಬಾರಿ ತಪ್ಪಿಸಲಾಗಿದೆ. ಬೇಡ ಎಂದರೂ ಹಾಗೋ ಹೀಗೋ ಉಪಮುಖ್ಯಮಂತ್ರಿ ಮಾಡಿದ್ದಾರೆ ಎಂದು ಡಾ.ಜಿ.ಪರಮೇ ಶ್ವರ್ ಅಸಮಾಧಾನ ವ್ಯಕ್ತಪಡಿಸಿದರು. ದಾವಣಗೆರೆಯ ಶಿವಯೋಗಿ ಆಶ್ರಮದಲ್ಲಿ ಛಲವಾದಿ ಮಹಾಸಭಾ ಹಮ್ಮಿ ಕೊಂಡಿದ್ದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮುದಾಯದವರೇ ಆದ ಬಿ.ಬಸವ ಲಿಂಗಪ್ಪ ಮತ್ತು ಎ.ಹೆಚ್.ರಂಗನಾಥ್ ಅವರು ಮುಖ್ಯಮಂತ್ರಿ ಆಗಬೇಕಾಗಿತ್ತು. ಆದರೆ, ಅವರಿಗೆ ಆ ಅವಕಾಶ ತಪ್ಪಿತು. ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯ ಮಂತ್ರಿ ಆಗುವ ನಿಟ್ಟಿನಲ್ಲಿ ಒಂದು…
ಕಟ್ಟುನಿಟ್ಟಿನ ಕಾನೂನಿದ್ದರೂ ಶೇ.23ರಷ್ಟು ಬಾಲ್ಯ ವಿವಾಹ: ನ್ಯಾಯಾಧೀಶ ಸುನೀಲ್ ಎ.ಶೆಟ್ಟರ್ ಕಳವಳ
February 25, 2019ಮೈಸೂರು: ಪ್ರಸ್ತುತ ಬಾಲ್ಯವಿವಾಹ ತಡೆಗೆ ಸಂಬಂಧಿಸಿ ಕಟ್ಟುನಿಟ್ಟಿನ ಕಾಯ್ದೆಗಳು ಇದ್ದಾಗ್ಯೂ ರಾಜ್ಯದಲ್ಲಿ ನಡೆಯುವ ಪ್ರತಿ 100 ವಿವಾಹಗಳ ಪೈಕಿ ಕನಿಷ್ಠ 23 ಬಾಲ್ಯವಿವಾಹವಾಗಿರುವ ಅಂಕಿ-ಅಂಶವಿದ್ದು, ಇದು ಆಘಾತಕಾರಿ ಸಂಗತಿ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ (ಹಿರಿಯ ಶ್ರೇಣಿ) ಸುನೀಲ್ ಎ.ಶೆಟ್ಟರ್ ಆತಂಕ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ `ಬಾಲ್ಯವಿವಾಹ ನಿಷೇಧ ಕಾಯ್ದೆ-2006’, `ಬಾಲ್ಯವಿವಾಹ ನಿಷೇಧ ನಿಯ…
ಪುರಂದರದಾಸರಿಂದ ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ
February 25, 2019ಮೈಸೂರು: ಮೈಸೂ ರಿನ ಜೆಎಲ್ಬಿ ರಸೆಯಲ್ಲಿರುವ ಶಿವಾನಂದ ಜ್ಞಾನಾಲಯದಲ್ಲಿ ತಿರುಪತಿ ತಿರುಮಲ ದೇವ ಸ್ಥಾನದ ದಾಸ ಸಾಹಿತ್ಯ ಪ್ರಾಜೆಕ್ಟ್ ಹಾಗೂ ಶ್ರೀ ದುರ್ಗಾ ನೃತ್ಯ ಅಕಾಡೆಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ‘ಶ್ರೀ ಪುರಂದರ ನಮನ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ದಾಸ ಸಾಹಿತ್ಯ ಪ್ರಾಜೆಕ್ಟ್ ವ್ಯವಸ್ಥಾಪಕಿ ಆರ್. ಶಾಂತಿ ಸರ್ವೋತ್ತಮನ್ ಮಾತನಾಡಿ, ಪುರಂದರ ದಾಸರು 75 ಸಾವಿರ ಹಾಡುಗಳನ್ನು ರಚಿ ಸಿದ್ದು, ಸುಮಾರು 2 ಸಾವಿರ ಹಾಡುಗಳು ನಮಗೆ ದೊರೆತಿವೆ. ಪುರಂದರ ದಾಸರು ದಾಸ ಸಾಹಿತ್ಯಕ್ಕೆ ಅಪಾರ…
ಹುತಾತ್ಮ ಯೋಧರಿಗೆ ಅವಮಾನ: ಮೈಸೂರಲ್ಲಿ ತ್ರಿಪುರ ಪೊಲೀಸರಿಂದ ಯುವಕ ಸೆರೆ
February 25, 2019ಮೈಸೂರು: ಪುಲ್ವಾಮ ದಾಳಿಯ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ್ದ ಯುವಕ ನನ್ನು ತ್ರಿಪುರ ಪೊಲೀಸರು ಮೈಸೂರಲ್ಲಿ ಬಂಧಿಸಿದ್ದಾರೆ. ಮಂಡಿ ಠಾಣಾ ವ್ಯಾಪ್ತಿಯ ಮೊಘಲ್ ದರ್ಬಾರ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಪ್ರಮೇಶ್ ಡೆಬ್ಬಾರ್ಮ(24) ಪುಲ್ವಾಮ ದಾಳಿಯ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ್ದ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ತ್ರಿಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆತನ ಬಗ್ಗೆ ನಿಖರ ಮಾಹಿತಿಯನ್ನು ಪಡೆದ ತ್ರಿಪುರ ಪೊಲೀಸರು, ಮೈಸೂರಿಗೆ ಆಗಮಿಸಿ ಮಂಡಿ ಠಾಣೆ ಇನ್ಸ್ಪೆಕ್ಟರ್ ಅರುಣ್ ಅವರ…
ಇಂದು ಶಾರದಾ ಫೆಸ್ಟ್-2019
February 25, 2019ಮೈಸೂರು: ಮೈಸೂರಿನ ಶಾರದಾ ವಿಲಾಸ ಕಾಲೇಜಿನ ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ಆಡಳಿತ ವಿಭಾಗ ಮತ್ತು ಸ್ನಾತಕೋತ್ತರ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಫೆ.25ರಂದು ಕಾಲೇಜು ಆವರಣದಲ್ಲಿ ಶಾರದಾ ಫೆಸ್ಟ್-2019, ಅಂತರ ಕಾಲೇಜು ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಫೆಸ್ಟ್ ಅನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಮೈಸೂರು ವಿವಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎನ್.ನಾಗರಾಜ ಉದ್ಘಾಟಿಸುವರು. ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ಆಡಳಿತ ವಿಭಾಗ ಡೀನ್ ಪ್ರೊ. ಸತ್ಯನಾರಾಯಣ ಅಧ್ಯಕ್ಷತೆ ವಹಿಸುವರು. ಗೌರವ ಅತಿಥಿಗಳಾಗಿ ಶಾರದಾ ವಿಲಾಸ…