ಮಂಡ್ಯ: ನಂದಿನಿ ಹಾಲನ್ನೇ ಬಳಸುವ ಮೂಲಕ ರೈತರಿಗೆ ನೆರವಾಗ ಬೇಕೆಂದು ಮನ್ಮುಲ್ ನಿರ್ದೇಶಕ ಎಸ್.ಪಿ.ಮಹೇಶ್ ತಿಳಿಸಿದರು. ವಿಶ್ವ ಹಾಲು ದಿನಾಚರಣೆ ಅಂಗವಾಗಿ ಮನ್ಮುಲ್ ವತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಗಿಗಳಿಗೆ ಹಾಲು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವ ಹಾಲು ದಿನಾಚರಣೆ ಅಂಗ ವಾಗಿ ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಹಾಲು ವಿತರಿಸಲಾಗುತ್ತಿದೆ. ಹಾಲು ಅತ್ಯಂತ ಪೌಷ್ಟಿಕಾಂಶವುಳ್ಳ ಸಮತೋಲನ ಆಹಾರ. ಪ್ರತಿಯೊಬ್ಬರೂ ನಂದಿನಿ ಹಾಲನ್ನು ಉಪಯೋಗಿಸುವಂತೆ ಕರೆ ನೀಡಿದರು. ನಂದಿನಿ ಉತ್ಪನ್ನಗಳನ್ನು ಉಪಯೋಗಿ ಸುವುದರಿಂದ ನಮ್ಮ ರೈತರಿಗೆ, ಹಾಲು ಉತ್ಪಾದಕರಿಗೆ…