ನವದೆಹಲಿ,ನ.೭-ಎರಡು ವರ್ಷದ ನಂತರ ಬಿಜೆಪಿ ರಾಷ್ಟೀಯ ಕಾರ್ಯಕಾರಿಣಿ ಸಭೆ ಭಾನುವಾರ ನವ ದೆಹಲಿಯಲ್ಲಿ ನಡೆಯಿತು. ವರ್ಚುವಲ್ ಸ್ವರೂಪ ದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವರು, ರಾಷ್ಟೀಯ ಕಾರ್ಯಕಾರಿಣಿ ಸದಸ್ಯರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ರಾಷ್ಟೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತ ನಾಡಿದ ಪ್ರಧಾನಿ ಮೋದಿ, ಬಿಜೆಪಿ ಕುಟುಂಬ ಸುತ್ತ ಸುತ್ತುವ ಪಕ್ಷವಲ್ಲ. ಇದು ಸಾಮಾನ್ಯ ಜನರೊಂದಿಗೆ ಸಂಪರ್ಕ ಹೊಂದಿರುವ ಪಕ್ಷ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರು ಸಾಮಾನ್ಯ ಜನರು ಮತ್ತು ಪಕ್ಷದ ನಂಬಿಕೆಯ ಸೇತುವೆಯಾಗಬೇಕು, ಪಂಚ…
ಸಮಸ್ಯೆ ಪರಿಹರಿಸಲು ನಾವು ಬೇಕು, ವೋಟ್ ಮಾತ್ರ ಮೋದಿಗೆ ಹಾಕ್ತೀರಾ!
June 27, 2019ಕರೇಗುಡ್ಡ (ರಾಯಚೂರು), ಜೂ. 26-ರಾಯಚೂರು ಜಿಲ್ಲೆಯ ಕರೇಗುಡ್ಡ ಗ್ರಾಮಕ್ಕೆ ಬಸ್ಸಿನಲ್ಲಿ ಗ್ರಾಮ ವಾಸ್ತವ್ಯ ಮಾಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೋಗುತ್ತಿದ್ದ ವೇಳೆ ದಾರಿಯಲ್ಲಿ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದರಿಂದ ಅವರ ಮೇಲೆ ಸಿಎಂ ಸಿಟ್ಟಿನಿಂದ ರೊಚ್ಚಿಗೆದ್ದ ಘಟನೆ ಬುಧವಾರ ನಡೆದಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ‘ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ…
ಮೋದಿ ಭಜನೆಗೆ ದೆಹಲಿಗೆ ಹೋಗಲು ರೈಲು ವ್ಯವಸ್ಥೆ ಮಾಡಿಕೊಡಲು ಸಿದ್ಧ
June 27, 2019ಕರೀಗುಡ್ಡ: ದೂರದ ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಜನೆಯನ್ನು ಇಲ್ಲಿ ಮಾಡಿದರೆ ಏನು ಪ್ರಯೋಜನವಿಲ್ಲ. ಭಜನೆ ಮಾಡಲು ದೆಹಲಿಗೆ ಹೋಗಲು ಬಯಸುವ ವರಿಗೆ ರೈಲಿನಲ್ಲಿ ತಾವೇ ಕಳುಹಿಸಿಕೊಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ. ಮಾನ್ವಿ ತಾಲೂಕಿನ ಕರೀಗುಡ್ಡದಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಮ್ಮ ಮುಂದೆ ಮೋದಿ ಭಜನೆ ಮಾಡಿದರೆ ಏನಾಗುತ್ತದೆ. ನಿಮಗೆ ಅಷ್ಟೊಂದು ಇಷ್ಟವಿದ್ದರೆ ನೀವೇ ಮೋದಿ ಬಳಿಗೆ ಹೋಗಿ, ಹೋಗಲು ಸಾಧ್ಯವಿಲ್ಲ ಎಂದಾದರೆ ರೈಲು ವ್ಯವಸ್ಥೆ ಮಾಡಿಕೊಡುತ್ತೇನೆ. ಇಲ್ಲವಾದಲ್ಲಿ…
17ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ
June 18, 2019ನವದೆಹಲಿ: ಹದಿನೇಳನೆಯ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದರು. ನಿಯಮಗಳ ಪ್ರಕಾರ ಲೋಕಸಭೆಯ ನಾಯಕರಾದ ಮೋದಿ ಮೊದಲಿಗೆ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಸಚಿವರು ಹಾಗೂ ಇನ್ನಿತರ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಎರಡು ದಿನ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ,…
ಶ್ರೀಲಂಕಾದಲ್ಲಿ ಪ್ರಧಾನಿ ಮೋದಿ
June 10, 2019ಕೊಲಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯವರು ಕೊಲಂಬೋದಲ್ಲಿರುವ ಇಂಡಿಯಾ ಹೌಸ್ನಲ್ಲಿ ಭಾರತೀಯ ಸಮುದಾಯವನ್ನು ದ್ದೇಶಿಸಿ ಮಾತನಾಡಿದರು. ಅಲ್ಲದೆ ಕಳೆದ ಏಪ್ರಿಲ್ನಲ್ಲಿ ಉಗ್ರಗಾಮಿಗಳ ಬಾಂಬ್ ಸ್ಫೋಟ ದಿಂದ 253 ಮಂದಿ ನಾಗರಿಕರು ಅಸುನೀ ಗಿದ ಸ್ಥಳದಲ್ಲಿ ಗಿಡ ನೆಟ್ಟು ಶಾಂತಿ ಸೌಹಾರ್ದತೆ ಸಂದೇಶ ಸಾರಿದರು. ಜೊತೆಗೆ ಅಸುನೀಗಿದ ನಾಗರಿಕರಿಗೆ ಗೌರವ ನಮನ ಸಲ್ಲಿಸಿದರು. ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಜಗತ್ತಿನಲ್ಲಿ ಭಾರತೀಯರ ಸ್ಥಾನ ಪ್ರಬಲವಾಗಿದೆ. ಈ ಕ್ರೆಡಿಟ್ನ ಹೆಚ್ಚು ಭಾಗ ಭಾರತೀಯ ವಲಸಿಗರಿಗೆ ಸಲ್ಲಬೇಕು….
ಬಡ ರೈತರಿಗೆ ಮಾಸಿಕ 3 ಸಾವಿರ ಪಿಂಚಣಿ
June 1, 2019ನವದೆಹಲಿ: ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಗದ್ದುಗೆ ಏರಿದ ಮರುದಿನವೇ ದೇಶದ ಬಡ ರೈತರು, ಬಡವರು, ಸಣ್ಣ ವ್ಯಾಪಾರಿ ಗಳು, ಹುತಾತ್ಮ ಯೋಧರ ಕುಟುಂಬಗಳಿಗೆ ಭರ್ಜರಿ ಉಡುಗೊರೆ ನೀಡಿದ್ದು, ದೇಶದಲ್ಲಿ ಬಡತನ ನಿರ್ಮೂ ಲನೆ ಮಾಡಲು ಐತಿಹಾಸಿಕ ಹೆಜ್ಜೆ ಇಟ್ಟಿದ್ದಾರೆ. ವಾರ್ಷಿಕ 6 ಸಾವಿರ ರೂ. ನೀಡುವ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸಿದ್ದು ಇದರಿಂದ 14.5 ಕೋಟಿ ರೈತರಿಗೆ ಪ್ರಯೋಜನವಾಗ ಲಿದೆ. ಇದಕ್ಕೆ ಕೇಂದ್ರ ಸರ್ಕಾರ ವಾರ್ಷಿಕ 87 ಸಾವಿರ ಕೋಟಿ ರೂ ವೆಚ್ಚ…
ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ
May 31, 2019ನವದೆಹಲಿ: ನರೇಂದ್ರ ಮೋದಿ ಅವರು ದೇಶದ 15ನೇ ಪ್ರಧಾನಿಯಾಗಿ ಇಂದು ಗೋಧೂಳಿ ಸಮಯದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಐದು ವರ್ಷ ಪೂರ್ಣ ಗೊಳಿಸಿ ಮತ್ತೊಮ್ಮೆ ಪಟ್ಟಕ್ಕೇರಿದ ಕಾಂಗ್ರೆಸ್ಸೇ ತರ ಪ್ರಧಾನಿ ಎಂಬ ಹೆಗ್ಗಳಿಕೆಯೂ ಮೋದಿ ಅವರ ಪಾಲಾಗಿದೆ. ಇಂದು ಸಂಜೆ 7 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲು ಮೋದಿ ಅವರು ಆಗಮಿಸುತ್ತಿದಂತೆ ರಾಷ್ಟ್ರಪತಿ ಭವನದ ದಶದಿಕ್ಕುಗಳಲ್ಲೂ ಮೋದಿ… ಮೋದಿ… ಜಯಘೋಷ ಮೊಳಗಿತು. ಈ ವೇಳೆ ಈಶ್ವರನ ಹೆಸರಲ್ಲಿ ಗೌಪ್ಯತಾ ವಿಧಿ ಸ್ವೀಕರಿಸಿದ ಮೋದಿ ಅವರು…
ಮನೆಯಲ್ಲೇ ಪುತ್ರನ ಪ್ರಮಾಣ ವಚನ ಕಣ್ಣು ತುಂಬಿಕೊಂಡ ಮಹಾತಾಯಿ…
May 31, 2019ನವದೆಹಲಿ: ತಾಯಿ-ಮಗನ ನಡುವಿನ ಪ್ರೀತಿ, ಬಾಂಧವ್ಯಗಳೇ ಅಂತಹದು.. ಅಕ್ಷರಗಳಲ್ಲಿ ವರ್ಣಿಸಲು ಸಾಧ್ಯವೇ ಇಲ್ಲ. 17ನೇ ಲೋಕಸಭೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಮೋದಿ ದೆಹಲಿಯಲ್ಲಿ ಪ್ರಮಾಣ ತೆಗೆದುಕೊಂಡರೆ ತಾಯಿ ಮನೆಯಲ್ಲೇ ಕುಳಿತು ಪುತ್ರನ ಪದಗ್ರಹಣ ವೀಕ್ಷಿಸಿದರು. ಸೋಷಿಯಲ್ ಮೀಡಿಯಾ ಸಹ ಅಷ್ಟೆ ವೇಗವಾಗಿ ಈ ಫೋಟೋಕ್ಕೆ ಪ್ರತಿಕ್ರಿಯೆ ನೀಡಿದ್ದು ಕೆಲವೇ ಕ್ಷಣದಲ್ಲಿ ಲಕ್ಷಾಂತರ ಶೇರ್ ಆಗುತ್ತಿದೆ.
ಮೋದಿ ಸಂಪುಟದಲ್ಲಿ ಉ.ಪ್ರದೇಶಕ್ಕೆ ಅಧಿಕ 9 ಸ್ಥಾನ
May 31, 2019ನವದೆಹಲಿ: ಎರಡನೇ ಅವಧಿಯ ನರೇಂದ್ರ ಮೋದಿ ಅವರ ಸರ್ಕಾರದ ಸಚಿವ ಸಂಪುಟದಲ್ಲಿ ಅತೀ ಹೆಚ್ಚು ಸ್ಥಾನ ಸಿಕ್ಕಿರುವುದು ಉತ್ತರ ಪ್ರದೇಶಕ್ಕೆ ಒಟ್ಟು 303 ಸ್ಥಾನಗಳನ್ನು ಪಡೆದಿರುವ ಬಿಜೆಪಿಗೆ ಅತೀ ಹೆಚ್ಚು ಸಂಸದರ ಕೊಡುಗೆ ನೀಡಿದ ಉತ್ತರ ಪ್ರದೇಶಕ್ಕೆ 9 ಸಚಿವ ಸ್ಥಾನ ಸಿಕ್ಕಿದೆ. ಅತಿ ಹೆಚ್ಚು ಮಂತ್ರಿ ಪದವಿ ಪಡೆದ ರಾಜ್ಯಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಮಹಾರಾಷ್ಟ್ರವಿದೆ. ಬಿಜೆಪಿ-ಶಿವಸೇನೆ ಮೈತ್ರಿಯ ರಾಜ್ಯದಿಂದ 8 ಸಂಸದರಿಗೆ ಮಂತ್ರಿ ಪದವಿ ಒಲಿದಿದೆ. ಬಿಹಾರ, ಮಧ್ಯಪ್ರದೇಶ ತಲಾ 5, ಕರ್ನಾ ಟಕ…
ಸರ್ಕಾರ ರಚಿಸಲು ಮೋದಿಗೆ ರಾಷ್ಟ್ರಪತಿ ಆಹ್ವಾನ
May 26, 2019ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್ಡಿಎ ಮೈತ್ರಿ ಕೂಟದ ಸಂಸದೀಯ ನಾಯಕ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾತ್ರಿ ಆಹ್ವಾನ ನೀಡಿದರು. ಎನ್ಡಿಎ ಸಂಸದೀಯ ನಾಯಕರಾಗಿ ಆಯ್ಕೆಯಾದ ನಂತರ ಮೋದಿ ಅವರು ಇಂದು ಸಂಜೆ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಅದಕ್ಕೆ ಸಮ್ಮತಿಸಿದ ರಾಷ್ಟ್ರಪತಿ, ಸರ್ಕಾರ ರಚನೆಗೆ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ ಎಂದು ರಾಷ್ಟ್ರ ಪತಿ ಭವನ ಟ್ವೀಟ್ ಮಾಡಿದೆ. ಇದೇ ವೇಳೆ ರಾಷ್ಟ್ರಪತಿ ಭವನದಲ್ಲಿ…