ನವದೆಹಲಿ: ನಮಗೆ ಯಾವತ್ತೂ ಅಹಂಕಾರ ಬರಬಾರದು. ಅಹಂಕಾರ ವನ್ನು ಎಷ್ಟು ದೂರ ತಳ್ಳುತ್ತೇವೆಯೋ ಅಷ್ಟು ನಮಗೆ ಒಳ್ಳೆಯದಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸದರಿಗೆ ಪಾಠ ಮಾಡಿದರು. ಸಂಸತ್ನ ಸೆಂಟ್ರಲ್ ಹಾಲ್ನಲ್ಲಿ ನಡೆದ ಎನ್ಡಿಎ ಮೈತ್ರಿ ಕೂಟದ ಸಭೆಯಲ್ಲಿ ಸಂಸದೀಯ ನಾಯಕನಾಗಿ ಆಯ್ಕೆಯಾದ ನಂತರ ನೂತನ ಸಂಸದರನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಜನರಿಂದಾಗಿ ನಾವು ಇಲ್ಲಿ ಇದ್ದೇವೆ. ನಾವು ಎಷ್ಟೇ ಬೆಳೆದರೂ ನಮ್ಮ ಬೇರುಗಳನ್ನು ಕೈಬಿಡಬಾರದು. ಯಾವಾಗ ನಿಮ್ಮಲ್ಲಿ ಅಹಂಕಾರ ಬೆಳೆಯುತ್ತದೋ, ಆಗ ಮೋದಿ ಅಲ್ಲ,…
ಈ ಬಾರಿಯಾದರೂ ಅಭಿವೃದ್ಧಿಯತ್ತ ಗಮನ ಕೊಡಲಿ: ಜಿ.ಟಿ.ದೇವೇಗೌಡ ಸಲಹೆ
May 26, 2019ಬೆಂಗಳೂರು: ಪುಲ್ವಾಮಾ ದಾಳಿ, ಸರ್ಜಿಕಲ್ ಸ್ಟ್ರೈಕ್ಗಳನ್ನು ಮುಂದಿಟ್ಟು ಕೊಂಡು ಚುನಾವಣೆಗಳನ್ನು ನಡೆಸಿ, ಕೇಂದ್ರದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ಮೋದಿ ಈ ಬಾರಿ ಯಾದರೂ ಅಭಿವೃದ್ಧಿಯತ್ತ ಗಮನ ಕೊಡಲಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸಲಹೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಮೋದಿ ಈ ಮೊದಲು ಭರವಸೆ ಕೊಟ್ಟಂತೆ 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರ ಖಾತೆಗೆ ಹಾಕಲಿ. ರಾಜ್ಯದ ಬರ ಪರಿಸ್ಥಿತಿಗೆ, ಕುಡಿ ಯುವ ನೀರಿಗೆ ಸರಕಾರ ಕಳುಹಿಸಿರುವ ಪ್ರಸ್ತಾವನೆಯಂತೆ ಹಣ ನೀಡಲಿ….
ಗುರುಗಳಿಬ್ಬರ ಪಾದಕ್ಕೆರಗಿ ಆಶೀರ್ವಾದ ಪಡೆದ `ಲೋಕ’ ವಿಜೇತ ನರೇಂದ್ರ ಮೋದಿ
May 25, 2019ನವದೆಹಲಿ: ಅದೊಂದು ಅಪರೂಪದ ಕ್ಷಣ, ಭಾವೋದ್ವೇಗದ ಸನ್ನಿವೇಶ. ಬಹಳ ದಿನಗಳ ನಂತರ ಗುರು-ಶಿಷ್ಯರ ಭೇಟಿ. ಅಭಿನಂದನೆ, ಆಶೀರ್ವಾದ, ಆಲಿಂಗನ, ಸಿಹಿ ಸಿಹಿ ಮಾತುಗಳ ವಿನಿಮಯದ ಕ್ಷಣ. ಷ್ಟೇ ಅಂತ್ಯಗೊಂಡ 17ನೇ ಲೋಕ ಸಭೆಯ ಚುನಾವಣೆಯಲ್ಲಿ ಅಭೂತ ಪೂರ್ವ ಜಯ ದಾಖಲಿಸಿದ ನರೇಂದ್ರ ದಾಮೋದರದಾಸ್ ಮೋದಿ ಮತ್ತು ಅಮಿತ್ ಶಾ ಜೋಡಿ, ಪಕ್ಷವನ್ನು ತಳ ಮಟ್ಟದಿಂದ ಕಟ್ಟಿ ಸದೃಢವಾಗಿ ಬೆಳೆಸಿದ ಹಿರಿಯರಿಬ್ಬರನ್ನು ಶುಕ್ರವಾರ ಬೆಳಿಗ್ಗೆ ಅವರ ಮನೆಯಂಗಳದಲ್ಲೇ ಭೇಟಿ ಮಾಡಿ ಶುಭಾಶಯ ವಿನಿಮಯ ಮಾಡಿ ಕೊಂಡರು, ಜೊತೆಗೆ ಆಶೀರ್ವಾದ…
ಮೇ 30ಕ್ಕೆ ಪ್ರಧಾನಿಯಾಗಿ ಮೋದಿ ಪದಗ್ರಹಣ
May 25, 2019ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಂಡ ಗೆಲುವಿನ ನಂತರ ಎರಡನೇ ಅವಧಿಗೆ ಪ್ರಧಾನಿಯಾಗಿ ಮೋದಿ ಮೇ30 ರಂದು ಪದಗ್ರಹಣ ಮಾಡಲಿದ್ದಾರೆ. 2014ರಂತೆ ಈ ಬಾರಿಯೂ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ವಿದೇಶದ ನಾಯಕರು ಆಗಮಿಸುವ ಸಾಧ್ಯತೆ ಇದೆ. 2014ಕ್ಕಿಂತ ಈ ಬಾರಿಯ ಪದಗ್ರಹಣ ಕಾರ್ಯಕ್ರಮ ಬೃಹತ್ ಪ್ರಮಾಣದಲ್ಲಿ ನಡೆಯಲಿದೆ. ಕಳೆದ ಬಾರಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಮೋದಿ ಪದ ಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಲಾಗಿತ್ತು. ಈ ಬಾರಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ…
ಮೋದಿ ಸುನಾಮಿ ಪ್ರತಿಪಕ್ಷಗಳು ಧೂಳೀಪಟ
May 24, 2019ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ಮೇ 29ಕ್ಕೆ ಪ್ರಮಾಣ ವಚನ ಸಾಧ್ಯತೆ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೂ 5 ವರ್ಷಗಳ ಕಾಲ ದೇಶದ ಆಡಳಿತ ನಡೆಸ ಬೇಕೆಂಬ ಜನಾದೇಶ ವನ್ನು ಯಾರೂ ಊಹಿಸಲಾಗದಷ್ಟು ಬೃಹತ್ ಪ್ರಮಾಣದಲ್ಲಿ ಹಾಗೂ ಸ್ಪಟಿಕ ಸದೃಶದಷ್ಟು ಸ್ಪಷ್ಟ ರೀತಿಯಲ್ಲಿ ದೇಶದ ಜನತೆ ನೀಡಿದೆ. ನಿರೀಕ್ಷೆಗೂ ಮೀರಿ ಬಂದಿರುವ ಜನಾದೇಶ ದಿಂದ ಉಲ್ಲಸಿತರಾಗಿರುವ ನರೇಂದ್ರ ದಾಮೋದರದಾಸ್ ಮೋದಿ ಅವರು ಇದೇ ಮೇ 29ರಂದು ಎರಡನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಬರಿಯ…
ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ
May 18, 2019ನವದೆಹಲಿ: ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ನಮ್ಮ ಸರ್ಕಾರದ ಐದು ವರ್ಷಗಳ ಸಾಧನೆಗಳ ಬಗ್ಗೆ ತೃಪ್ತಿಯಿದೆ ಎಂದು ಹೇಳಿದ್ದಾರೆ. ಏಳನೇ ಹಾಗೂ ಕೊನೆಯ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಕಚೇರಿ ಯಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು….
ತಾಯಿ ಆಶೀರ್ವಾದ ಪಡೆದ ನಂತರ ಮತದಾನ ಮಾಡಿದ ಪ್ರಧಾನಿ ಮೋದಿ
April 24, 2019ಅಹ್ಮದಾಬಾದ್: ಗುಜರಾತ್ನಲ್ಲಿ ಮಂಗಳವಾರ ಮತದಾನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತದಾನ ಮಾಡುವ ಮುನ್ನ ತಮ್ಮ ತಾಯಿ ಹೀರಾಬೆನ್ ಮೋದಿಯವರ ಆಶೀರ್ವಾದ ಪಡೆದರು. ಅಹಮದಾ ಬಾದ್ ಸಮೀಪ ರೈಸನ್ ಗ್ರಾಮದಲ್ಲಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ತಮ್ಮ ಕಿರಿಯ ಪುತ್ರ ಪಂಕಜ್ ಮೋದಿ ಜೊತೆ ವಾಸಿಸುತ್ತಿದ್ದು, ಅಲ್ಲಿಗೆ ತೆರಳಿದ್ದ ಮೋದಿ ತಾಯಿಯ ಆಶೀರ್ವಾದ ಪಡೆದರು. ಗಾಂಧಿನಗರದ ರಾಜಭವನದಲ್ಲಿ ಕಳೆದ ರಾತ್ರಿ ತಂಗಿದ್ದ ನರೇಂದ್ರ ಮೋದಿ ಇಂದು ಬೆಳಿಗ್ಗೆ ಕೇವಲ ಒಂದು ಭದ್ರತಾ ವಾಹನ ದೊಂದಿಗೆ…
ಮೈಸೂರಲ್ಲಿ ಮೋದಿ ಮೋಡಿ
April 10, 2019ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ ಯವರು, ‘ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಆದರಣೀಯ ನಾಗರಿಕ ಬಂಧುಗಳೇ, ಎಲ್ಲರಿಗೂ ನಿಮ್ಮ ಚೌಕಿ ದಾರ್ ಮೋದಿಯ ನಮಸ್ಕಾರಗಳು. ಚಾಮುಂಡಿ ನಾಡಿನಲ್ಲಿರುವ ನಿಮಗೆಲ್ಲರಿರೂ ನಮಿಸುವೆ. ಸರ್ ಎಂ. ವಿಶ್ವೇಶ್ವರಯ್ಯರಂತಹ ಮಹಾನ್ ನಾಯಕರಿಗೂ ನನ್ನ ನಮನ’ ಎಂದರು. ಈ ಹಿಂದೆಯೂ ನಾನು ಮೈಸೂರಿಗೆ ಬಂದಿದ್ದೇನೆ. ಆದರೆ ಈ ದಿನ ಅತೀ ಹೆಚ್ಚು ಸಂಖ್ಯೆಯಲ್ಲಿ ನೀವು ಸೇರಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದರು. ಮತ್ತೊಮ್ಮೆ ಮೋದಿ ಸರ್ಕಾರ ಎಂಬ ದೃಢ…
ಮೋದಿ ಆಳ್ವಿಕೆ ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ
April 10, 2019ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರದ್ದು ಕಳಂಕ ರಹಿತ ನಾಯಕತ್ವ. ಭ್ರಷ್ಟಾ ಚಾರ ಸುಳಿಯಲೂ ಅವಕಾಶ ನೀಡದೆ 5 ವರ್ಷ ಆಡಳಿತ ನಡೆಸಿರುವುದು ಅವರು ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಬಣ್ಣಿಸಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಮಾತನಾಡಿದ ಅವರು, ವಿಶ್ವ ನಾಯಕರ ಸಮಾನರಾಗಿ ನಿಂತಿರುವ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಮರ್ಪಿ ಸುತ್ತೇನೆ….
ಮೈಸೂರಲ್ಲಿ ಇಂದು ಮೋದಿ ಹವಾ
April 9, 2019ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 5 ಗಂಟೆಗೆ ಮೈಸೂರು, ಚಾ.ನಗರ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಏ. 9) ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭಾರೀ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಚಿತ್ರದುರ್ಗದಿಂದ ವಿಶೇಷ ವಿಮಾನದಲ್ಲಿ ಸಂಜೆ 4.40 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಮಂತ್ರಿಗಳು ರಸ್ತೆ ಮೂಲಕ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ, ಸಂಜೆ 5 ಗಂಟೆಗೆ ಮೈಸೂರು-ಕೊಡಗು ಮತ್ತು ಚಾಮರಾಜನಗರ…