ಮೈಸೂರು: ಮೈಸೂರಿನ ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ “ಭಾರತದ ಗ್ರಾಮೀಣ ಆರ್ಥಿಕ ವ್ಯವಸ್ಥೆ” ವಿಷಯ ಕುರಿತು ತಯಾರಿಸಲಾದ ಮಾದರಿ ಮತ್ತು ಪರಿಯೋಜನೆಗಳ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ನಟರಾಜ ಪಬ್ಲಿಕ್ ಶಾಲೆಯ ಪ್ರಿನ್ಸಿಪಾಲರಾದ ಶ್ರೀಮತಿ ಸತ್ಯಸುಲೋಚನಾ ಉದ್ಘಾಟಿಸಿ ಮಾತನಾಡಿ, ಕಾಲೇಜು ಶಿಕ್ಷಣದಲ್ಲಿ ಇದೊಂದು ಉತ್ತಮ ಪ್ರಯತ್ನ ಎಂದು ವಿದ್ಯಾರ್ಥಿನಿಯರನ್ನು ಅಭಿನಂದಿಸಿದರು. ವಿದ್ಯಾರ್ಥಿನಿಯರ ಉದ್ಯೋಗಕ್ಕಾಗಿ ಸಿದ್ಧತೆ, ಸ್ವ-ಉದೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದಾದ ವಿಧಾನ, ಬ್ಯಾಂಕಿನಿಂದ ಸಹಾಯ ಧನದ ರೂಪದಲ್ಲಿ ಸಾಲಗಳನ್ನು ಪಡೆಯುವ…