ಮೈಸೂರು: ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳಿ, ಡೆಂಗ್ಯೂ, ಚಿಕುನ್ಗುನ್ಯಾ ಜ್ವರದಿಂದ ದೂರವಿರಿ. ಡೆಂಗ್ಯೂ ಜ್ವರಕ್ಕೆ ನಿರ್ಧಿಷ್ಟ ಚಿಕಿತ್ಸೆ ಇಲ್ಲ ಎಂಬಿತ್ಯಾದಿ ಘೋಷ ವಾಕ್ಯಗಳಿರುವ ಭಿತ್ತಿಪತ್ರಗಳನ್ನು ಹಿಡಿದಿದ್ದ ಆರೋಗ್ಯ ಇಲಾಖೆ ಕಾರ್ಯಕರ್ತರು ಶುಕ್ರವಾರ ಮೈಸೂರಿನ ಕುಂಬಾರಕೊಪ್ಪಲಿನ ವಿವಿಧ ಬೀದಿಗಳಲ್ಲಿ ಜಾಥಾ ನಡೆಸಿದರು. ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಮೈಸೂರು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯಿಂದ ಆಯೋಜಿಸಲಾಗಿದ್ದ ಜಾಥಾಗೆ ಕುಂಬಾರಕೊಪ್ಪಲು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಮಾಜಿ ಎಂಎಲ್ಸಿ ಡಿ.ಮಾದೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ…
ಮೈಸೂರು
ಇಂದು ಕುಂಬಾರಕೊಪ್ಪಲಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ
May 25, 2018ಮೈಸೂರು: ಮೈಸೂರಿನ ಕುಂಬಾರಕೊಪ್ಪಲಿನಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಾಳೆ(ಮೇ.25) ಬೆಳಿಗ್ಗೆ 10ಕ್ಕೆ `ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ’ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಚಿದಂಬರ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಆಚರಿಸುವ `ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ’ ಕಾರ್ಯಕ್ರಮವನ್ನು ಈ ಸಾಲಿನಲ್ಲಿ ಕುಂಬಾರಕೊಪ್ಪಲಿನಲ್ಲಿ ಆಚರಿಸಲಾಗುತ್ತಿದೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಜಿಲ್ಲಾ ರೋಗವಾಹಕ ಆಶ್ರತಿ ರೋಗಗಳ ನಿಯಂತ್ರಣ ಇಲಾಖೆಯ ವತಿಯಿಂದ ಸಾಕಷ್ಟು ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆದರೂ ಕುಂಬಾರಕೊಪ್ಪಲಿನಲ್ಲಿ ಸುಮಾರು 35ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು….