ರೈತ ಮುಖಂಡ ಬಡಗಲಪುರ ನಾಗೇಂದ್ರ ವಿಶ್ವಾಸ ಮೈಸೂರು: ಆಂಧ್ರಪ್ರದೇಶ ಅಳವಡಿಸಿಕೊಂಡಿರುವ ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ ಪದ್ಧತಿಯನ್ನು ರಾಜ್ಯದಲ್ಲೂ ಜಾರಿಗೊಳಿಸಬೇಕೆಂಬ ರಾಜ್ಯ ರೈತ ಸಂಘದ ಮನವಿಗೆ ಪೂರಕವಾಗಿ ಸ್ಪಂದಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಗಂಭೀರ ಚಿಂತನೆ ನಡೆಸಿದೆ ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಸ್ರೇಲ್ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಉತ್ಸುಕರಾಗಿದ್ದರು. ಈ…