ಮೈಸೂರು: ಇತ್ತೀಚಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಆಯ್ಕೆಯಾಗಿರುವ ನಾಯಕ ಜನಾಂಗದ 17 ಶಾಸಕರ ಪೈಕಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ನ -1, ಕಾಂಗ್ರೆಸ್ನ -9 ಹಾಗೂ ವಿಧಾನಪರಿಷತ್ನ ಒಬ್ಬ ಸದಸ್ಯರು ಸೇರಿದಂತೆ ಒಟ್ಟು 11 ಮಂದಿ ಶಾಸಕರಿದ್ದಾರೆ. ಹೀಗಿದ್ದರೂ ಸಮ್ಮಿಶ್ರ ಸರ್ಕಾರದಲ್ಲಿ ನಾಯಕ ಸಮುದಾಯದ ಕೇವಲ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ನಾಯಕ ಜನಾಂಗದ ಮುಖಂಡ ದ್ಯಾವಪ್ಪ ನಾಯಕ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಸಮ್ಮಿಶ್ರ ಸರ್ಕಾರದಲ್ಲಿ ನಾಯಕ ಸಮುದಾಯದ…