ಮಡಿಕೇರಿ: ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣ ಎನ್.ರಾಜು ಅವರ ಆಗಮನ ನಿರೀಕ್ಷೆಯಲ್ಲಿ ಜಿಲ್ಲಾ ಪೊಲೀಸರು ಕಾಯುತ್ತಾ ಬಸವಳಿದ ಪ್ರಸಂಗ ಎದುರಾಯಿತು. ಶನಿವಾರ ಬೆಳಿಗ್ಗೆ 8 ಗಂಟೆಗೆ ರಾಜಧಾನಿ ಬೆಂಗಳೂರಿನಿಂದ ಕೊಡಗಿಗೆ ರಾಜ್ಯ ಪೊಲೀಸ್ ಮುಖ್ಯಸ್ಥರ ಆಗಮನ ಸಂದೇಶ ಲಭಿಸಿತ್ತು. ಅಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಎಲ್ಲ ಡಿವೈ ಎಸ್ಪಿಗಳು, ವೃತ್ತ ನಿರೀಕ್ಷಕರು, ಪ್ರೊಬೆಷನರಿ ಎಸ್ಪಿ ಸೇರಿದಂತೆ ಜಿಲ್ಲಾ ಪೊಲೀಸ್ ಸಶಸ್ತ್ರ ದಳ ಹಾಗೂ ವಾದ್ಯ ತಂಡ ಸಹಿತ ಪೊಲೀಸ್ ಕೇಂದ್ರ ಕಚೇರಿಯಲ್ಲಿ ರಾಜ್ಯ…