ನವದೆಹಲಿ: ನಾನು ಮೈಸೂರು-ಕೊಡಗು ಸಂಸದನಾಗಿದ್ದು, ವಿಶಿಷ್ಟ ಭಾಷೆ, ಸಂಸ್ಕೃತಿ, ಆಚಾರ-ವಿಚಾರ ಗಳನ್ನು ಹೊಂದಿರುವ ಕೊಡಗು ಸಂಸ್ಕೃತಿಯನ್ನು ಸಂಸತ್ನಲ್ಲಿ ಪ್ರಚುರಪಡಿಸಬೇಕಾಗಿರುವುದು ನನ್ನ ಕರ್ತವ್ಯವೆಂದು ಕೊಡವರ ಸಾಂಪ್ರದಾಯಿಕ ಉಡುಪಿನಲ್ಲಿ ಬಂದಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ನಾನು ಈ ಉಡುಗೆ ತೊಟ್ಟು ಬರಲು ನನ್ನ ಪತ್ನಿ ಅರ್ಪಿತಾ ಕಾರಣ ಎಂದು ಹೇಳಿದ ಅವರು, ಈ ಬಾರಿ ಸಂಸತ್ ಪ್ರವೇಶಿಸುವಾಗ ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತಹ ಉಡುಗೆ ತೊಡಬೇಕು. ಅದರಲ್ಲೂ ಕೊಡವರ ಉಡುಗೆ ತೊಡಬೇಕು ಎಂದು ಪತ್ನಿ ಅರ್ಪಿತ ಹೇಳಿದ್ದರೆಂದು ಪ್ರತಾಪ್…
6 ತಿಂಗಳಲ್ಲಿ ಬೋಧಕರ ಭರ್ತಿ ಮಾಡಿ, ಇಲ್ಲದಿದ್ದರೆ ಅನುದಾನ ಬಂದ್
June 7, 2019ನವದೆಹಲಿ: ಮುಂದಿನ ಆರು ತಿಂಗಳೊಳಗೆ ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ 3 ಲಕ್ಷ ಬೋಧಕ ಹುದ್ದೆಗಳನ್ನು ಭರ್ತಿ ಮಾಡ ಬೇಕೆಂದು ಕೇಂದ್ರ ಧನಸಹಾಯ ಆಯೋಗ (ಯುಜಿಸಿ) ವಿಶ್ವವಿದ್ಯಾಲಯಗಳಿಗೆ ಆದೇಶ ನೀಡಿದೆ. ಯುಜಿಸಿಯ ಆದೇಶವನ್ನು ಪಾಲಿಸದಿದ್ದರೆ ಧನಸಹಾಯ ನೆರವನ್ನು ನಿಲ್ಲಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಿದೆ. ಈ ಕುರಿತು ಕಳೆದ ಮಂಗಳವಾರ ಯುಜಿಸಿ ಸುತ್ತೋಲೆ ಹೊರಡಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಬೋಧಕ ಸಿಬ್ಬಂದಿ ಕೊರತೆಯಿದೆ ಎಂಬುದನ್ನು ಯುಜಿಸಿ ಮಾರ್ಗಸೂಚಿಯಲ್ಲಿ ಗಮನಕ್ಕೆ ತಂದಿದೆ. ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಬೋಧಕ…
ಇಂದು ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಸಿಯಾಚಿನ್ಗೆ ಭೇಟಿ
June 3, 2019ನವದೆಹಲಿ: ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಅವರು ಜಗ ತ್ತಿನ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ಗೆ ಸೋಮವಾರ ಭೇಟಿ ನೀಡಿ, ಪಾಕಿಸ್ತಾನದೊಂದಿಗೆ ಗಡಿ ಹಂಚಿ ಕೊಂಡಿರುವ ಅಲ್ಲಿನ ಭದ್ರತಾ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಈ ಭೇಟಿ ವೇಳೆ ರಕ್ಷಣಾ ಸಚಿವರ ಜತೆಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ರಕ್ಷಣಾ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಇರಲಿದ್ದಾರೆ. ಈ ಬಗ್ಗೆ ಸರಕಾರದ ಮೂಲಗಳು ಖಚಿತಪಡಿಸಿವೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ….
ಬಡ ರೈತರಿಗೆ ಮಾಸಿಕ 3 ಸಾವಿರ ಪಿಂಚಣಿ
June 1, 2019ನವದೆಹಲಿ: ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಗದ್ದುಗೆ ಏರಿದ ಮರುದಿನವೇ ದೇಶದ ಬಡ ರೈತರು, ಬಡವರು, ಸಣ್ಣ ವ್ಯಾಪಾರಿ ಗಳು, ಹುತಾತ್ಮ ಯೋಧರ ಕುಟುಂಬಗಳಿಗೆ ಭರ್ಜರಿ ಉಡುಗೊರೆ ನೀಡಿದ್ದು, ದೇಶದಲ್ಲಿ ಬಡತನ ನಿರ್ಮೂ ಲನೆ ಮಾಡಲು ಐತಿಹಾಸಿಕ ಹೆಜ್ಜೆ ಇಟ್ಟಿದ್ದಾರೆ. ವಾರ್ಷಿಕ 6 ಸಾವಿರ ರೂ. ನೀಡುವ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸಿದ್ದು ಇದರಿಂದ 14.5 ಕೋಟಿ ರೈತರಿಗೆ ಪ್ರಯೋಜನವಾಗ ಲಿದೆ. ಇದಕ್ಕೆ ಕೇಂದ್ರ ಸರ್ಕಾರ ವಾರ್ಷಿಕ 87 ಸಾವಿರ ಕೋಟಿ ರೂ ವೆಚ್ಚ…
ಬಿಜೆಪಿ ಚಾಣಕ್ಯನಿಗೆ `ಗೃಹ’ ಬಲ
June 1, 2019ನವದೆಹಲಿ: ನಿನ್ನೆಯಷ್ಟೇ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿಯವರು ತಮ್ಮ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಬಿಜೆಪಿಯ ಚಾಣಕ್ಯ ಎಂದೇ ಕರೆಯಲ್ಪಡುವ ಅಮಿತ್ ಶಾ ಅವರಿಗೆ ಮಹತ್ವದ ಗೃಹ ಖಾತೆಯನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಸಿಬ್ಬಂದಿ, ಸಾರ್ವಜನಿಕ ಕುಂದು-ಕೊರತೆ ಮತ್ತು ಪಿಂಚಣಿ, ಪರಮಾಣು ಶಕ್ತಿ, ಬಾಹ್ಯಾಕಾಶ, ಎಲ್ಲಾ ಪ್ರಮುಖ ನೀತಿಗಳ ನಿರ್ವಹಣೆ ಖಾತೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಕರ್ನಾಟಕದಿಂದ ಕೇಂದ್ರ ಸಂಪುಟ ಸೇರಿರುವ ಡಿ.ವಿ.ಸದಾನಂದಗೌಡರಿಗೆ ಕಳೆದ ಅವಧಿಯಲ್ಲಿ ದಿವಂಗತ…
ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ
May 31, 2019ನವದೆಹಲಿ: ನರೇಂದ್ರ ಮೋದಿ ಅವರು ದೇಶದ 15ನೇ ಪ್ರಧಾನಿಯಾಗಿ ಇಂದು ಗೋಧೂಳಿ ಸಮಯದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಐದು ವರ್ಷ ಪೂರ್ಣ ಗೊಳಿಸಿ ಮತ್ತೊಮ್ಮೆ ಪಟ್ಟಕ್ಕೇರಿದ ಕಾಂಗ್ರೆಸ್ಸೇ ತರ ಪ್ರಧಾನಿ ಎಂಬ ಹೆಗ್ಗಳಿಕೆಯೂ ಮೋದಿ ಅವರ ಪಾಲಾಗಿದೆ. ಇಂದು ಸಂಜೆ 7 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲು ಮೋದಿ ಅವರು ಆಗಮಿಸುತ್ತಿದಂತೆ ರಾಷ್ಟ್ರಪತಿ ಭವನದ ದಶದಿಕ್ಕುಗಳಲ್ಲೂ ಮೋದಿ… ಮೋದಿ… ಜಯಘೋಷ ಮೊಳಗಿತು. ಈ ವೇಳೆ ಈಶ್ವರನ ಹೆಸರಲ್ಲಿ ಗೌಪ್ಯತಾ ವಿಧಿ ಸ್ವೀಕರಿಸಿದ ಮೋದಿ ಅವರು…
ರಾಜ್ಯದಿಂದ ಸದಾನಂದಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ನಿರ್ಮಲಾ ಸೀತಾರಾಮನ್ ಸಂಪುಟ ಸೇರ್ಪಡೆ
May 31, 2019ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 25 ಸ್ಥಾನಗಳಲ್ಲಿ ಗೆಲುವು ತಂದು ಕೊಟ್ಟ ಕರ್ನಾಟಕಕ್ಕೆ ಇಲ್ಲಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ತಮಿಳು ನಾಡಿನ ನಿರ್ಮಲಾ ಸೀತಾರಾಮನ್ ಸೇರಿ 4 ಕೇಂದ್ರ ಸಚಿವ ಸ್ಥಾನಗಳನ್ನು ಮೋದಿ ಸಂಪುಟದಲ್ಲಿ ನೀಡಲಾಗಿದೆ. ಹಿಂದಿನ ಸರ್ಕಾರದಲ್ಲಿ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್, ಹಿಂದಿನ ಸರ್ಕಾರದಲ್ಲಿ ರೈಲ್ವೆ, ಕಾನೂನು, ಸಾಂಖ್ಯಿಕ ಯೋಜನೆ ಜಾರಿ ಹಾಗೂ ರಸಗೊಬ್ಬರ ಖಾತೆಗಳನ್ನು ನಿರ್ವಹಿಸಿದ್ದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದಗೌಡ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ…
ಪ್ರತಾಪ್ ಸಿಂಹ ಸೇರಿ ರಾಜ್ಯದ 8 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
May 25, 2019ನವದೆಹಲಿ: ನರೇಂದ್ರ ಮೋದಿಯವರ ಕೇಂದ್ರ ಸಂಪುಟದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಎಂಟು ಮಂದಿ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 25 ಸಂಸದರನ್ನು ನೀಡಿರುವ ಕರ್ನಾಟಕಕ್ಕೆ ಹೆಚ್ಚಿನ ಸಚಿವ ಸ್ಥಾನಗಳು ಸಿಗಬಹುದು ಎಂದು ಹೇಳಲಾಗಿದ್ದು, ಒಕ್ಕಲಿಗ ಸಮಾಜದವರಾದ ಯುವ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಕೇಳಿಬರುತ್ತಿದೆ. ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಫಾರಸ್ಸು ಮಾಡುವ ಸಾಧ್ಯತೆ ಇದೆ. ಅಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ,…
ಐಟಿಸಿ ಅಧ್ಯಕ್ಷ ವೈ.ಸಿ.ದೇವೇಶ್ವರ್ ನಿಧನ
May 12, 2019ಹೊಸದಿಲ್ಲಿ : ಐಟಿಸಿ ಅಧ್ಯಕ್ಷ ವೈ ಸಿ ದೇವೇಶ್ವರ್ ಅವರು ಇಂದು ಶನಿವಾರ (ಮೇ 11) ನಸುಕಿನ ವೇಳೆ ನಿಧನ ಹೊಂದಿದರು. ದೀರ್ಘಕಾಲೀನ ಅನಾರೋಗ್ಯದಿಂದ ಬಳಲು ತ್ತಿದ್ದ ಅವರಿಗೆ 72 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. 1947ರ ಫೆಬ್ರವರಿ 4ರಂದು ಪಾಕಿಸ್ಥಾನದ ಲಾಹೋರ್ನಲ್ಲಿ ಜನಿಸಿದ್ದ ದೇವೇಶ್ವರ್, ದಿಲ್ಲಿ ಐಐಟಿ ಮತ್ತು ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್ನ ಹಳೆ ವಿದ್ಯಾರ್ಥಿ. ಇವರು 1968ರಲ್ಲಿ ಐಟಿಸಿ ಸೇರಿದ್ದರು. 1984ರ ಎಪ್ರಿಲ್ 11ರಂದು ದೇವೇಶ್ವರ್ ಅವರನ್ನು ಐಟಿಸಿ ಆಡಳಿತ…
ಚಂಡಮಾರುತ ಹಾನಿ ಕುರಿತು ಚರ್ಚಿಸಲು ಪ್ರಧಾನಿ ಮಾಡಿದ ಕರೆ ಸ್ವೀಕರಿಸದ ಮಮತಾ!
May 6, 2019ನವದೆಹಲಿ: ಫೊನಿ ಚಂಡಮಾರುತ ಒಡಿಶಾದ ಬಳಿಕ ಪಶ್ಚಿಮ ಬಂಗಾಳ ದಲ್ಲೂ ಭಾರೀ ಅನಾಹುತ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಚಂಡಮಾರುತದ ಹಾನಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಮಮತಾ ಬ್ಯಾನರ್ಜಿಗೆ ಕರೆ ಮಾಡಿದ್ದರೂ ಮಮತಾ ಕರೆಯನ್ನು ಸ್ವೀಕರಿಸಿಲ್ಲ. ಅಲ್ಲದೆ ಮರು ಕರೆಯನ್ನೂ ಮಾಡಿಲ್ಲವಂತೆ. ನಂತರ ಮೋದಿ ಅವರು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು ಎಂದು ಉನ್ನತ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿಯನ್ನು ಸಂಪರ್ಕಿಸಲು ಪ್ರಧಾನಿ ಮೋದಿ…