ಮಂಡ್ಯ: ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ನನ್ನ ಮಗ ನಿಖಿಲ್ನನ್ನು ಅಭ್ಯರ್ಥಿ ಮಾಡ ಲಾಗಿದೆಯೇ ಹೊರತು ಅಧಿಕಾರದ ಲಾಲಸೆಯಿಂದ ಅಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗನನ್ನು ಅಭ್ಯರ್ಥಿ ಮಾಡಿದ್ದನ್ನು ಸಮರ್ಥಿಸಿಕೊಂಡರು. ನಗರದ ಸಿಲ್ವರ್ಜ್ಯುಬಿಲಿ ಪಾರ್ಕ್ನಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಮಗ ನಿಖಿಲ್ನನ್ನು ಚುನಾವಣೆಗೆ ನಿಲ್ಲಿಸಬೇಕೆಂಬ ಯೋಚನೆಯೇ ನನಗಿರ ಲಿಲ್ಲ. ರವೀಂದ್ರ ಶ್ರೀಕಂಠಯ್ಯನವರು ಮೊದಲು ನಿಖಿಲ್ ಹೆಸರನ್ನು ಹೇಳಿದಾಗ ಅವರ ಮಾತನ್ನು ಕೇಳಿ ನನಗೆ ನಡುಕ ಬಂತು. ಆ ನಂತರ ಮಂಡ್ಯ…
ಪ್ರಚಾರಕ್ಕೆ ಸ್ಯಾಂಡಲ್ವುಡ್ನಿಂದ ಯಾರನ್ನೂ ಕರೆತರಲ್ಲ
March 14, 2019ಮಂಡ್ಯ: ನನ್ನ ಪರ ಚುನಾವಣಾ ಪ್ರಚಾರಕ್ಕೆ ಸ್ಯಾಂಡಲ್ವುಡ್ನಿಂದ ಯಾರನ್ನೂ ಕರೆತರುವುದಿಲ್ಲ, ನನ್ನ ಸ್ವಾರ್ಥಕ್ಕೆ ಸ್ಯಾಂಡಲ್ವುಡ್ನ ಯಾರನ್ನೂ ದುರುಪಯೋಗ ಪಡಿಸಿಕೊಳ್ಳೋದಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರೇ ನನ್ನ ಸೈನಿಕರು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು. ಮದ್ದೂರು ತಾಲೂಕಿನ ಗೊಲ್ಲರ ದೊಡ್ಡಿಯ ಜುಂಜಪ್ಪ, ಚಿಕ್ಕಂಕನಹಳ್ಳಿಯ ನಂದಿ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಪ್ರಚಾರ ಆರಂ ಭಿಸಿದ ಬಳಿಕ ಅವರು ಮಾತನಾಡಿದರು. ಸುಮಲತಾ ಅಂಬರೀಶ್ ಅವರ ಬೆಂಬಲಕ್ಕೆ ಸ್ಯಾಂಡಲ್ವುಡ್ನ ಅನೇಕ ನಟ, ನಟಿಯರು, ನಿರ್ಮಾಪಕರು ನಿಂತಿ ದ್ದಾರೆ. ಸುಮಲತಾ ಅವರ ಪರ…
ಮೈಸೂರು ಮೈತ್ರಿ ಅಭ್ಯರ್ಥಿ ದೇವೇಗೌಡರೋ ಇಲ್ಲ ನಿಖಿಲ್ ನಿಲ್ತಾರೋ…
March 2, 2019ಮೈಸೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ಕುಮಾರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂಬುದು ಇಂದು ಮೈಸೂರಿನಲ್ಲಿ ಬಹಿರಂಗವಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸುವಾರಿ ಸಚಿವ ಜಿ.ಟಿ.ದೇವೇಗೌಡರು ಮಾತನಾಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ನೀವೇ ಸ್ಪರ್ಧಿಸಬೇಕೆಂದು ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರನ್ನು ಮನವಿ ಮಾಡಿಕೊಂಡೆವು. ಅದೇನೇ ಇರಲಿ ಯಾರೇ ಅಭ್ಯರ್ಥಿಯಾದರೂ ದೇವೇಗೌಡರು ಹಾಗೂ ಕುಮಾರಸ್ವಾಮಿ…
ಮಂಡ್ಯದಿಂದ ಪುತ್ರ ನಿಖಿಲ್ ಸ್ಪರ್ಧೆ ಖಚಿತಪಡಿಸಿದ ಸಿಎಂ
February 5, 2019ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯುವುದನ್ನು ಸಿಎಂ ಕುಮಾರಸ್ವಾಮಿ ಇಂದಿಲ್ಲಿ ಪರೋಕ್ಷವಾಗಿ ತಿಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಅಭ್ಯರ್ಥಿಯೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂದಿದ್ದಾರೆ. ಸಂಪಾದಕರೊಟ್ಟಿಗೆ ಅನೌಪಚಾರಿಕ ವಾಗಿ ಮಾತನಾಡುವ ಸಂದರ್ಭದಲ್ಲಿ ಅವರಿಗೆ ಕೇಳಿ ಬಂದ ಪ್ರಶ್ನೆಗೆ ತಮ್ಮ ಪುತ್ರನ ಬಗ್ಗೆ ವ್ಯಾಖ್ಯಾನ ಮಾಡುವ ಮೂಲಕ ಆತನೇ ಅಭ್ಯರ್ಥಿ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ. ನಿಖಿಲ್ ಮಂಡ್ಯ ಲೋಕಸಭಾ ಕ್ಷೇತ್ರ ದಿಂದ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಡಾಕ್ಟರ್…
ಮೈಸೂರಲ್ಲಿ ‘ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್ ಅದ್ಧೂರಿ ಬಿಡುಗಡೆ
January 20, 2019ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅಭಿನಯದ ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಶನಿವಾರ ಮೈಸೂರಿನಲ್ಲಿ ಅದ್ಧೂರಿ ಯಾಗಿ ನೆರವೇರಿತು. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಬೆಳಕಿನ ಚಿತ್ತಾರದೊಂದಿಗೆ ತೆರೆ ಬೀಳುವ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿಂದು ನಡೆದ ಸೀತಾರಾಮ ಕಲ್ಯಾಣೋತ್ಸವ’ಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅವರ ತಾಯಿ ಚೆನ್ನಮ್ಮ, ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ, ಉನ್ನತ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಸಣ್ಣ…